ಸಿಎಂ ಆಗುವ ‘ಆಫರ್’ ಪಡೆದಿದ್ದ ಸೋನು ಸೂದ್; ತಿರಸ್ಕರಿಸಿದ್ದೇಕೆ?

Date:

ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ ವಲಸೆ ಕಾರ್ಮಿಕರಿಗೆ ಸಹಾಯ ಮಾಡುವ ಮೂಲಕ ಅಭಿಮಾನಿ ಬಳಗವನ್ನು ಕಟ್ಟಿಕೊಂಡ ನಟ ಸೋನು ಸೂದ್, ಇತ್ತೀಚೆಗೆ ತನಗೆ ಮುಖ್ಯಮಂತ್ರಿ ಆಫರ್ ಬಂದಿತ್ತು ಎಂದು ಹೇಳಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು ರಾಜ್ಯಸಭೆಯ ಸ್ಥಾನದಂತಹ ಹುದ್ದೆಗಳನ್ನು ಕೂಡಾ ನೀಡಲಾಗಿತ್ತು, ಆದರೆ ಎಲ್ಲವನ್ನೂ ನಿರಾಕರಿಸಿದೆ ಎಂದು ಸೋನು ಸೂದ್ ತಿಳಿಸಿದ್ದಾರೆ.

“ನನಗೆ ಮುಖ್ಯಮಂತ್ರಿ ಸ್ಥಾನವನ್ನು ನೀಡಲಾಯಿತು, ನಾನು ನಿರಾಕರಿಸಿದಾಗ ಅವರು ನನಗೆ ಉಪಮುಖ್ಯಮಂತ್ರಿಯಾಗಲು ಹೇಳಿದರು. ಅವರು ನನಗೆ ರಾಜ್ಯಸಭೆಯ ಸ್ಥಾನವನ್ನು ನೀಡಿದರು, ಆದರೆ ನಾನು ರಾಜಕೀಯದಲ್ಲಿ ಯಾವುದಕ್ಕೂ ಹೋರಾಡುವ ಅಗತ್ಯವಿಲ್ಲ ಎಂದರು” ಎಂದು ಸೂದ್ ಹ್ಯೂಮನ್ಸ್ ಆಫ್ ಬಾಂಬೆಗೆ ನೀಡಿದ ಸಂದರ್ಶನದಲ್ಲಿ ಹೇಳಿದರು.

ಇದನ್ನು ಓದಿದ್ದೀರಾ? ಒಡಿಶಾ ರೈಲು ದುರಂತ | ಸಂತ್ರಸ್ತರ ನೆರವಿಗೆ ಸಹಾಯವಾಣಿ ತೆರೆದ ಸೋನು ಸೂದ್‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಬಲ ವ್ಯಕ್ತಿಗಳು ಜಗತ್ತಿನಲ್ಲಿ ಬದಲಾವಣೆ ತರಲು ನಮ್ಮನ್ನು ಪ್ರೋತ್ಸಾಹಿಸಲು ಮುಂದಾದಾಗ ಆ ಕ್ಷಣ ರೋಮಾಂಚಕಾರಿ ಎನಿಸಿದೆ. ಆದರೆ ಸ್ವಾತಂತ್ರ್ಯವನ್ನು ಕಳೆದುಕೊಳ್ಳಲು ನಾನು ಬಯಸಲ್ಲ. ಆದ್ದರಿಂದ ರಾಜಕೀಯದಿಂದ ಹೊರಗುಳಿಯಲು ಬಯಸುತ್ತೇನೆ” ಎಂದು ಮಾಹಿತಿ ನೀಡಿದರು.

“ಜನರು ಎರಡು ಕಾರಣಗಳಿಗಾಗಿ ರಾಜಕೀಯಕ್ಕೆ ಸೇರುತ್ತಾರೆ. ಒಂದು ಹಣ ಸಂಪಾದಿಸಲು ಅಥವಾ ಎರಡನೆಯದಾಗಿ ಅಧಿಕಾರವನ್ನು ಗಳಿಸಲು. ನನಗೆ ಇವೆರಡರಲ್ಲೂ ಆಸಕ್ತಿ ಇಲ್ಲ. ಜನರಿಗೆ ಸಹಾಯ ಮಾಡುವ ಕಾರ್ಯವನ್ನು ನಾನು ಈಗಾಗಲೇ ಮಾಡುತ್ತಿದ್ದೇನೆ. ನಾನು ಸಹಾಯ ಮಾಡುವ ಹಕ್ಕನ್ನು ಬೇರೆಯವರಿಂದ ಪಡೆಯಬೇಕಾಗಿಲ್ಲ. ನಾನು ಸ್ವಂತವಾಗಿ ಸಹಾಯ ಮಾಡಲು ಬಯಸುತ್ತೇನೆ” ಎಂದರು.

ಇದನ್ನು ಓದಿದ್ದೀರಾ? ಒಡಿಶಾ ರೈಲು ದುರಂತ : ಸಂತ್ರಸ್ತರಿಗೆ ಶಾಶ್ವತ ಪರಿಹಾರಕ್ಕೆ ಬೇಡಿಕೆ ಇಟ್ಟ ಸೋನು ಸೂದ್‌

“ಒಬ್ಬರು ಜನಪ್ರಿಯತೆಯನ್ನು ಗಳಿಸಲು ಪ್ರಾರಂಭಿಸಿದಾಗ ಅವರು ಜೀವನದಲ್ಲಿ ಮೇಲೆ ಏರಲು ಪ್ರಾರಂಭಿಸುತ್ತಾರೆ. ಆದರೆ ಎತ್ತರ ಹೆಚ್ಚಾದಂತೆ ಆಮ್ಲಜನಕವೂ ಕಡಿಮೆಯಾಗುತ್ತದೆ. ನಾನು ಮೇಲೆ ಏರಿದರೆ ಅಲ್ಲಿ ಎಷ್ಟು ಕಾಲ ಉಳಿಯಲು ಸಾಧ್ಯ ಎಂಬುದು ಮುಖ್ಯ” ಎಂದು ವಿವರಿಸಿದರು.

ಸೋನು ಸೂದ್ ಸಹೋದರಿ ಮಾಳವಿಕಾ ಸೂದ್ ಅವರು 2022 ರಲ್ಲಿ ಕಾಂಗ್ರೆಸ್ ಸೇರಿದರು. ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ ಮೊಗಾ ಕ್ಷೇತ್ರದಲ್ಲಿ ಸ್ಪರ್ಧಿಸಿದರು. ಆದರೆ ಆಮ್ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಅಮನದೀಪ್ ಕೌರ್ ಅರೋರಾ ಎದುರು ಪರಾಭವಗೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...