ಸುದೀಪ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜಂಟಿ ಸುದ್ದಿಗೋಷ್ಠಿಯ ಸಂಪೂರ್ಣ ವಿವರ

Date:

ಸ್ಟಾರ್‌ ನಟ ಕಿಚ್ಚ ಸುದೀಪ್‌ ಬಿಜೆಪಿಯಲ್ಲಿನ ಕೆಲ ಆಪ್ತರ ಪರ ಈ ಬಾರಿಯ ಚುನಾವಣೆಯಲ್ಲಿ ಪ್ರಚಾರ ಮಾಡುವುದಾಗಿ ಸ್ಪಷ್ಟ ಪಡಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿ ಬೆಂಗಳೂರಿನ ಅಶೋಕ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯೋಜಿಸಿರುವ ಜಂಟಿ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಕಂದಾಯ ಸಚಿವ ಆರ್‌ ಅಶೋಕ್‌ ಮತ್ತು ಆರೋಗ್ಯ ಸಚಿವ ಕೆ. ಸುಧಾಕರ್‌ ಕೂಡ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡಿದ್ದಾರೆ.

ಸುದ್ದಿಗೋಷ್ಠಿಯ ಪ್ರಮುಖ ಅಂಶಗಳು

ಸುದೀಪ್‌ : ನನ್ನ ರಾಜಕೀಯ ನಡೆ ಅಥವಾ ನಿಲುವುಗಳು ಅಂಥೇನಿಲ್ಲ. ನಾನು ಪ್ರೀತಿಯಿಂದ ಮಾಮ ಎಂದು ಕರೆಯುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸುತ್ತಿದ್ದೇನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುದೀಪ್‌ : ಬಸವರಾಜ ಬೊಮ್ಮಾಯಿ ಅವರ ಅವಧಿಯಲ್ಲಿ ಉತ್ತಮ ಕೆಲಸಗಳು ನಡೆದಿವೆ. ಹೀಗಾಗಿ ಅವರನ್ನು ಬೆಂಬಲಿಸುತ್ತಿದ್ದೇನೆ.

ಬಸವರಾಜ ಬೊಮ್ಮಾಯಿ : ಸುದೀಪ್‌ ಅವರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿಲ್ಲ. ನನ್ನ ಸ್ಥಾನ ಮತ್ತು ನಾನಿರುವ ರಾಜಕೀಯ ಪಕ್ಷಕ್ಕೆ ಬೆಂಬಲ ಸೂಚಿಸಲು ಬಂದಿದ್ದಾರೆ.

ಬಸವರಾಜ ಬೊಮ್ಮಾಯಿ : ಸುದೀಪ್‌ ಜೊತೆಗೆ ಈ ವಿಚಾರದ ಬಗ್ಗೆ ಎರಡ್ಮೂರು ಬಾರಿ ಮಾತನಾಡಿದ್ದೇನೆ. ಪಕ್ಷ ಸೇರಿಕೊಳ್ಳದಿದ್ದರೂ ನನ್ನ ಮತ್ತು ನನ್ನ ಪಕ್ಷದ ಪರವಾಗಿ ಅವರು ಪ್ರಚಾರ ಮಾಡಲು ಒಪ್ಪಿಕೊಂಡಿದ್ದಾರೆ.

ಸುದೀಪ್‌ : ಬಿಜೆಪಿಯ ಎಲ್ಲ ಅಭ್ಯರ್ಥಿಗಳ ಪ್ರಚಾರ ಮಾಡಲು ನನ್ನಿಂದ ಸಾಧ್ಯವಾಗಲ್ಲ. ಬಸವರಾಜ ಬೊಮ್ಮಾಯಿ ಅವರು ಸೂಚಿಸುವ ನಿರ್ದಿಷ್ಟ ಅಭ್ಯರ್ಥಿಗಳಿಗೆ ನನ್ನ ಬೆಂಬಲ ಸೂಚಿಸಿ ಪ್ರಚಾರ ಮಾಡುತ್ತೇನೆ.

ಸುದೀಪ್‌ : ಬೇರೆ ಪಕ್ಷಗಳಲ್ಲಿನ ಆಪ್ತರು ತಮ್ಮ ಪರ ಪ್ರಚಾರ ಮಾಡುವಂತೆ ನೆರವು ಕೇಳಿದರೆ ಖಂಡಿತವಾಗಿ ಅವರ ಪರವಾಗಿಯೂ ಪ್ರಚಾರ ಮಾಡುತ್ತೇನೆ.

ಸುದೀಪ್‌ : ಸ್ವತಃ ಬಸವರಾಜ ಬೊಮ್ಮಾಯಿ ಅವರೇ ಹೇಳಿದರೂ ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಒಂದು ವೇಳೆ ಚುನಾವಣೆಗೆ ಸ್ಪರ್ಧಿಸುವ ದಿನ ಬಂದರೆ ಖಂಡಿತ ಎಲ್ಲರಿಗೂ ತಿಳಿಸುತ್ತೇನೆ.

ಸುದೀಪ್‌ : ಡಿ.ಕೆ ಶಿವಕುಮಾರ್‌ ಕೂಡ ನನ್ನನ್ನು ಅವರ ಪಕ್ಷಕ್ಕೆ ಕರೆದಿದದ್ದರು. ನಾನೊಬ್ಬ ನಟ ನನ್ನನ್ನು ಎಲ್ಲರೂ ತಮ್ಮ ಪಕ್ಷಗಳಿಗೆ ಆಹ್ವಾನಿಸುತ್ತಾರೆ. ಆದರೆ, ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ.

ಸುದೀಪ್‌ : ಒಬ್ಬ ಭಾರತೀಯನಾಗಿ ಮೋದಿ ಅವರ ಕಾರ್ಯ ವೈಖರಿಯನ್ನು ಮೆಚ್ಚಿಕೊಂಡಿದ್ದೇನೆ.

ಸುದೀಪ್‌ : ಪ್ರಚಾರಕ್ಕೆ ಸಂಬಂಧಿಸಿದ ನೀಲನಕ್ಷೆ ಇನ್ನೂ ಸಿದ್ಧಗೊಂಡಿಲ್ಲ. ಬೊಮ್ಮಾಯಿ ಅವರು ಸೂಚಿಸಿದ ಕಡೆಗೆ ಹೋಗಿ ಪ್ರಚಾರದಲ್ಲಿ ಪಾಲ್ಗೊಳ್ಳುತ್ತೇನೆ.

ಬಸವರಾಜ ಬೊಮ್ಮಾಯಿ : ಸುದೀಪ್‌ ನಮ್ಮ ಪರ ಪ್ರಚಾರ ಮಾಡಲು ಬಂದಿರುವುದು ಖುಷಿಯ ವಿಚಾರ. ಅವರ ಆಗಮನದಿಂದ ಪಕ್ಷಕ್ಕೆ ಆನೆ ಬಲ ಬಂದಂತಾಗಿದೆ. ಅವರ ಮನಸ್ಸಿನಲ್ಲೂ ಕೆಲವು ವಿಚಾರಗಳಿವೆ ಮುಂದಿನ ದಿನಗಳಲ್ಲಿ ಎಲ್ಲವೂ ಹಂತ ಹಂತವಾಗಿ ಬಹಿರಂಗ ಪಡಿಸುತ್ತಾರೆ. ನಮ್ಮ ಪರ ಪ್ರಚಾರ ಮಾಡುತ್ತಿರುವುದಕ್ಕೆ ಸುದೀಪ್‌ ಮತ್ತವರ ಕುಟುಂಬಸ್ಥರಿಗೆ ಧನ್ಯವಾದ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...