ತಾಯಿಯ ನೆನೆದು ಭಾವುಕ ಪತ್ರ ಬರೆದ ನಟ ಸುದೀಪ್

Date:

ನ್ಯುಮೋನಿಯದಿಂದ ಬಳಲುತ್ತಿದ್ದ ನಟ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ನಿಧನರಾದರು. ಅ.20ರಂದು ಸಂಜೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿತು.

ತಮ್ಮ ತಾಯಿಯನ್ನು ಕಳೆದುಕೊಂಡಿರುವ ಸುದೀಪ್ ಭಾವುಕರಾಗಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪತ್ರವನ್ನು ಬರೆದುಕೊಂಡಿದ್ದಾರೆ.

ಸುದೀಪ್‌ ಪತ್ರದ ಸಾರಾಂಶ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನನ್ನ ತಾಯಿ, ಯಾವುದೇ ಪಕ್ಷಪಾತವಿಲ್ಲದ, ಅತ್ಯಂತ ಪ್ರೀತಿಯ, ಕ್ಷಮಿಸುವ, ಕಾಳಜಿ ವಹಿಸುವ ಮತ್ತು ಪ್ರೀತಿಯನ್ನು ನೀಡುವ ನನ್ನ ಬದುಕಿನಲ್ಲಿ ಮೌಲ್ಯಯುತವಾದನ್ನು ತೋರಿಸಿದವಳು ಮತ್ತು ಯಾವಾಗಲೂ ಅದನ್ನು ಪಾಲಿಸುವ ಮೌಲ್ಯವನ್ನು ಹೇಳಿಕೊಟ್ಟ ಜೀವವದು. ಬದುಕಿನಲ್ಲಿ ನನ್ನ ಪಕ್ಕದಲ್ಲಿಯೇ ಇದ್ದ ನನ್ನಮ್ಮ ಮಾನವ ರೂಪದ ನಿಜವಾದ ದೇವರಾಗಿದ್ದರು.

ನನಗೆ ಯಾವುದೇ ಸಡಗರ ಎಂದರೆ ಅದು ನನ್ನ ತಾಯಿ. ನನ್ನ ಮೊದಲ ಅಭಿಮಾನಿ, ಹಿತೈಷಿ ಎಲ್ಲವೂ ಅವರಾಗಿದ್ದರು. ಕೆಟ್ಟ ಕೆಲಸವನ್ನೂ ಇಷ್ಟಪಟ್ಟವರು, ಒಳ್ಳೆಯ ಕೆಲಸ ಮಾಡಿದಾಗ ಬೆನ್ನು ತಟ್ಟಿ ಸಂಭ್ರಮಿಸಿದವರು. ಈಗ ಆ ಎಲ್ಲ ಸುಂದರ ಘಳಿಗೆಗಳು ನೆನಪು ಮಾತ್ರ.

ನಾನೀಗ ಅನುಭವಿಸುತ್ತಿರುವ ಸಂಕಟವನ್ನು ಹಂಚಿಕೊಳ್ಳಲು ನನ್ನಲ್ಲಿ ಪದಗಳಿಲ್ಲ. ಅವರಿಲ್ಲದ ಶೂನ್ಯವನ್ನು ಒಪ್ಪಿಕೊಳ್ಳಲು ನನ್ನಿಂದ ಆಗುತ್ತಿಲ್ಲ. ಕೇವಲ 24 ಗಂಟೆಗಳಲ್ಲಿ ಎಲ್ಲವೂ ಬದಲಾಗಿ ಹೋಯಿತು.
ಪ್ರತಿನಿತ್ಯವೂ ನನ್ನ ಮೊಬೈಲ್‌ಗೆ ಬೆಳಗ್ಗೆ 5.30ಕ್ಕೆ ಮೊದಲ ಸಂದೇಶ ಬರುವುದು ಅದು ನನ್ನ ತಾಯಿಯಿಂದಲೇ. `ಗುಡ್ ಮಾರ್ನಿಂಗ್ ಕಂದ’ ಎಂಬ ಸಂದೇಶ ಬರುತ್ತಿತ್ತು. ಅಮ್ಮನಿಂದ ನನಗೆ ಕೊನೆಯ ಸಲ ಸಂದೇಶ ಬಂದಿದ್ದು, ಅಕ್ಟೋಬರ್ 18ರಂದು. ಮಾರನೇ ದಿನ ಬೆಳಗ್ಗೆ ನಾನು ಬಿಗ್‌ಬಾಸ್ ಮನೆಯ ಸೆಟ್‌ನಲ್ಲಿದ್ದೆ. ಅಂದು ಅಮ್ಮನ ಸಂದೇಶ ನನಗೆ ತಲುಪಲೇ ಇಲ್ಲ. ಕಳೆದ ಹಲವು ವರ್ಷಗಳಿಂದ ನಾನು ಯಾವತ್ತೂ ಸಂದೇಶವನ್ನು ಮಿಸ್ ಮಾಡಿಕೊಂಡವನು ಅಲ್ಲ. ಇದೇ ಮೊದಲ ಬಾರಿಗೆ ಅಮ್ಮ ಸಂದೇಶ ಕಳುಹಿಸಲಿಲ್ಲ.

ಈ ಸುದ್ದಿ ಓದಿದ್ದೀರಾ? ನಟ ಸುದೀಪ್ ತಾಯಿ ಸರೋಜಾ ಸಂಜೀವ್ ನಿಧನ

ನಾನೇ ಅಮ್ಮನ ಮೊಬೈಲ್‌ಗೆ ಸಂದೇಶ ಕಳುಹಿಸಿದೆ. ಕರೆ ಮಾಡಿ ಈ ಕುರಿತು ವಿಚಾರಿಸೋಣವೆಂದರೆ, ಬಿಗ್‌ಬಾಸ್ ಚಿತ್ರೀಕರಣದ ಒತ್ತಡದಲ್ಲಿದ್ದೆ. ಹಾಗಾಗಿ ಸಾಧ್ಯವಾಗಲಿಲ್ಲ. ಶನಿವಾರದ ಬಿಗ್‌ಬಾಸ್ ಎಪಿಸೋಡ್ ಚಿತ್ರೀಕರಣಕ್ಕಾಗಿ ಇನ್ನೇನು ವೇದಿಕೆಯ ಮೇಲೆ ಹತ್ತಬೇಕು ಎನ್ನುವಷ್ಟರಲ್ಲಿ ಅಮ್ಮನಿಗೆ ಹುಷಾರಿಲ್ಲದ, ಅವರು ಆಸ್ಪತ್ರೆಗೆ ದಾಖಲಾಗಿರುವ ಸಂದೇಶ ಬಂತು. ಕೂಡಲೇ ಅಕ್ಕನಿಗೆ ಕರೆ ಮಾಡಿ, ಡಾಕ್ಟರ್ ಜೊತೆ ಮಾತನಾಡಿ ನಾನು ಸ್ಟೇಜ್ ಮೇಲೆ ಹತ್ತಿದೆ.

ನಾನು ಚಿತ್ರೀಕರಣದಲ್ಲಿ ಇರುವಾಗಲೇ ಅಮ್ಮನ ಆರೋಗ್ಯ ಸ್ಥಿತಿ ಗಂಭೀರ ಅಂತ ನನ್ನ ತಂಡದವರು ತಿಳಿಸಿದರು. ಎಂತಹ ಅಸಹಾಯಕ ಸ್ಥಿತಿ ನನ್ನದು. ಮೊದಲ ಬಾರಿಗೆ ಇಂಥದ್ದೊಂದು ಸನ್ನಿವೇಶ ನನಗೆ ಎದುರಾಗಿದ್ದು. ಶೂಟಿಂಗ್ ಮಾಡುತ್ತಿರುವಾಗಲೇ ನನ್ನ ತಲೆಯಲ್ಲಿ ಹಲವಾರು ವಿಷಯಗಳು ಚಲಿಸುತ್ತಿದ್ದವು. ಸಾಕಷ್ಟು ಭಯವಿತ್ತು. ಶನಿವಾರದ ಸಂಚಿಕೆ ಮುಗಿಸಲೇಬೇಕು ಎನ್ನುವ ಒತ್ತಡವೂ ಇತ್ತು. ಎಲ್ಲವನ್ನೂ ನಿಭಾಯಿಸಬೇಕಿತ್ತು. ಮನಸ್ಸನ್ನು ಶಾಂತಚಿತ್ತಕ್ಕೆ ತಂದುಕೊಂಡು ಶನಿವಾರದ ಎಪಿಸೋಡ್ ಮುಗಿಸಿಕೊಟ್ಟೆ. ಇದೆಲ್ಲವೂ ಸಾಧ್ಯವಾಗಿದ್ದು, ನನ್ನ ತಾಯಿ ಹೇಳಿಕೊಟ್ಟ ಪಾಠದಿಂದ.

ಎಲ್ಲ ಒತ್ತಡವನ್ನೂ ನಿಭಾಯಿಸಿಕೊಂಡು ಶನಿವಾರದ ಎಪಿಸೋಡ್ ಮುಗಿಸಿಕೊಟ್ಟು ಕೂಡಲೇ ಆಸ್ಪತ್ರೆಯತ್ತ ಧಾವಿಸಿದೆ. ನಾನು ಆಸ್ಪತ್ರೆ ತಲುಪುವ ಮುನ್ನವೇ ಅಮ್ಮನನ್ನು ವೆಂಟಿಲೇಟರ್‌ನಲ್ಲಿರಿಸಿ ಚಿಕಿತ್ಸೆ ನೀಡುತ್ತಿದ್ದರು. ಅತ್ಯಂತ ನೋವಿನ ಸಂಗತಿ ಅಂದರೆ, ನನ್ನ ತಾಯಿ ಪ್ರಜ್ಞೆಯಲ್ಲಿರುವಾಗ ಕೊನೆಯ ಬಾರಿಗೆ ಅವರನ್ನು ನೋಡಲು ಆಗಲೇ ಇಲ್ಲ. ಅವರು ಕೊನೆಯುಸಿರೆಳೆಯುವ ಮುನ್ನ ಅಮ್ಮ ನೋವಿನಲ್ಲೇ ಸಾಕಷ್ಟು ಹೋರಾಡಿದ್ದಳು. ಕೆಲವೇ ಕೆಲವು ಗಂಟೆಗಳಲ್ಲಿ ಏನೆಲ್ಲ ಬದಲಾವಣೆ ಆಗಿದ್ದವು.

ಅಮ್ಮ ಇಲ್ಲ ಅನ್ನುವುದು ಸತ್ಯ. ಆದರೆ, ವಾಸ್ತವವನ್ನು ಹೇಗೆ ಸ್ವೀಕರಿಸಬೇಕು ಅನ್ನೋದು ಗೊತ್ತಾಗಲಿಲ್ಲ. ಮೊನ್ನೆಯಷ್ಟೇ ಚಿತ್ರೀಕರಣಕ್ಕೆ ಹೊರಡುವ ಮುನ್ನ ಬಿಸಿ ಅಪ್ಪುಗೆಯೊಂದನ್ನು ಕೊಟ್ಟು ಕಳುಹಿಸಿದ್ದರು. ಕೆಲವೇ ಕೆಲವು ಗಂಟೆಗಳಲ್ಲಿ ಇಲ್ಲವಾಗಿ ಹೋದರು. ನಾನು ನನ್ನ ತಾಯಿಯನ್ನು ಕಳೆದುಕೊಂಡಿದ್ದೇನೆ. ಪ್ರಕೃತಿಯು ಈ ಭೂಮಿಯಿಂದ ನನ್ನ ತಾಯಿಯನ್ನು ಕರೆದುಕೊಂಡು ಹೋಗಿದೆ ಎಂದು ಸಮಾಧಾನಿಸಿಕೊಳ್ಳುವೆ. ನನ್ನ ಬದುಕಿನ ಅತ್ಯಂತ ಬೆಲೆಕಟ್ಟಲಾಗದ ಮತ್ತೊಂದು ನನ್ನಿಂದ ಜಾರಿಹೋಗಿದೆ. ನನ್ನ ತಾಯಿ ಶಾಂತಿಯಿಂದಲೇ ತುಂಬಿರೋ ಮಡಿಲನ್ನು ಸೇರಿದ್ದಾರೆ ಎಂದು ಖಾತ್ರಿಯಿದೆ.

ಅಮ್ಮನಿಗೆ ಗೌರವ ಸಲ್ಲಿಸಲು ಆಗಮಿಸಿದ್ದ ಪ್ರತಿಯೊಬ್ಬರಿಗೂ ನಾನು ಋಣಿ ಮತ್ತು ಧನ್ಯವಾದಗಳನ್ನು ತಿಳಿಸುತ್ತೇನೆ. ಇದು ನಿಜವಾಗಿಯೂ ನಿಮ್ಮೆಲ್ಲರ ಕರುಣೆಯಾಗಿತ್ತು. ನನ್ನ ತಾಯಿ ಆತ್ಮಕ್ಕೆ ಶಾಂತಿ ಕೋರಿದ ಎಲ್ಲರಿಗೂ ಧನ್ಯವಾದಗಳು

ಅಮ್ಮ, ಚೆನ್ನಾಗಿ ವಿಶ್ರಾಂತಿ ಪಡೆಯಿರಿ
ನಾನು ನಿಮ್ಮನ್ನು ಸದಾ ಪ್ರೀತಿಸುತ್ತೇನೆ ಮತ್ತು ಅಮೂಲ್ಯವಾದದ್ದನ್ನು ಕಳೆದುಕೊಂಡಿದ್ದೇನೆ.
-ದೀಪು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...