ಬಿಗ್‌ಬಾಸ್‌ನಲ್ಲಿ ಮಹಿಳಾ ಹಕ್ಕುಗಳ ದಮನ ಆರೋಪ; ‘ಕಲರ್ಸ್ ಕನ್ನಡ’ ವಿರುದ್ಧ ದೂರು ದಾಖಲು

Date:

ಖಾಸಗಿ ವಾಹಿನಿ ‘ಕಲರ್ಸ್ ಕನ್ನಡ’ದಲ್ಲಿ ಪ್ರಸಾರವಾಗುತ್ತಿರುವ ‘ಬಿಗ್‌ಬಾಸ್ 11’ ರಿಯಾಲಿಟಿ ಶೋನಲ್ಲಿ ಮಹಿಳೆಯರ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗಿದೆ. ಮಹಿಳೆಯರ ಹಕ್ಕುಗಳನ್ನು ದಮನ ಮಾಡಿ, ಮಹಿಳಾ ಸ್ಪರ್ಧಿಗಳಿಗೆ ಸಾರ್ವಜನಿಕವಾಗಿ ಕಿರುಕುಳ ನೀಡಲಾಗುತ್ತಿದೆ ಎಂದು ವಕೀಲೆ ರಕ್ಷಿತಾ ಪಿ ಸಿಂಗ್‌ ಆರೋಪಿಸಿದ್ದಾರೆ. ಕರ್ನಾಟಕ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಕಳೆದ ಭಾನುವಾರದಿಂದ ‘ಬಿಗ್‌ಬಾಸ್‌ 11’ ಕಲರ್ಸ್‌ ಕನ್ನಡದಲ್ಲಿ ಪ್ರಸಾರವಾಗುತ್ತಿದೆ. ನಟ ಸುದೀಪ್ ಅವರು ಕಾರ್ಯಕ್ರಮದ ನಿರೂಪಣೆ ಮುಂದುವರೆಸಿದ್ದಾರೆ. ಬಿಗ್‌ಬಾಸ್‌ ಸೆಟ್‌ನಲ್ಲಿ ಸ್ವರ್ಗ ಮತ್ತು ನರಕ ಎಂದು ವಿಭಜಿಸಿ, ಸ್ಪರ್ಧಿಗಳನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಇದರಲ್ಲಿ, ನರಕವೆಂದು ವರ್ಗೀಕರಿಸಲಾದ ಭಾಗದಲ್ಲಿ ಸ್ಪರ್ಧಿಗಳನ್ನು ಕೈದಿಗಳಂತೆ ಇರಿಸಲಾಗಿದೆ. ಆದರೆ, ಭಾರತದ ನಾಗರಿಕರನ್ನು ಬಂಧನದಲ್ಲಿರಿಸುವ ಹಕ್ಕು ಖಾಸಗಿ ವ್ಯಕ್ತಿಗಳಿಗೆ ಇರುವುದಿಲ್ಲ. ಈ ಕಾನೂನನ್ನು ಬಿಗ್‌ಬಾಸ್‌ ತಂಡ ಉಲ್ಲಂಘಿಸಿದೆ ಎಂದು ಆರೋಪಿಸಲಾಗಿದೆ.

ಈ ಬಗ್ಗೆ ದೂರು ನೀಡಿರುವ ರಕ್ಷಿತಾ ಪಿ ಸಿಂಗ್‌, “ಬಿಗ್‌ಬಾಸ್-11 ಕಾರ್ಯಕ್ರಮದಲ್ಲಿ ಪುರುಷ ಮತ್ತು ಮಹಿಳೆಯರನ್ನು ಒಂದು ಜೈಲಿನ ರೂಪದಲ್ಲಿರುವ ಬಂದಿಖಾನೆಯಂತಹ ಕೊಠಡಿಯಲ್ಲಿ ನೂರಾರು ಕ್ಯಾಮರಗಳಲ್ಲಿ ರೆಕಾರ್ಡ್ ಆಗುವಂತೆ ಅಕ್ರಮಬಂಧನದಲ್ಲಿ ಇರಿಸಲಾಗಿದೆ. ಇವರಿಗೆ ಕೇವಲ ಗಂಜಿಯನ್ನು ಆಹಾರವಾಗಿ ನೀಡಲಾಗುತ್ತಿದೆ. ಹೀಗೆ, ಸಂವಿಧಾನ ಪ್ರಕಾರ ನಾಗರಿಕರಿಗೆ ಪೌಷ್ಟಿಕ ಆಹಾರವನ್ನು ಕೊಡದಿರುವುದು ಅಪರಾಧವಾಗುತ್ತದೆ. ಅದರಲ್ಲೂ ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ, ಮಲಗುವ ವ್ಯವಸ್ಥೆ ನೀಡದೆ ಹಿಂಸಿಸಲಾಗುತ್ತಿದೆ. ಅಲ್ಲದೆ, ದೈಹಿಕ ಬಾದೆ ತೀರಿಸಿಕೊಳ್ಳಲು ಮತ್ತೊಬ್ಬರ ಅನುಮತಿ ಮೇರೆಗೆ ಶೌಚಾಲಯ ಉಪಯೋಗಿಸಬೇಕಾದಂತಹ ಬಲವಂತಕ್ಕೆ ಒಳಪಡಿಸುವುದು ಮಹಿಳೆಯರ ಖಾಸಗಿತನಕ್ಕೆ ಧಕ್ಕೆಯಾಗುತ್ತದೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2024 10 04 at 12.59.01 PM

“ಬಿಗ್‌ಬಾಸ್ 11ರ ಕಾರ್ಯಕ್ರಮದಲ್ಲಿ ಸ್ಪರ್ಧಿಗಳೊಂದಿಗೆ ಕಾನೂನು ಬದ್ಧವಾಗಿ ಒಪ್ಪಂದ ಮಾಡಿಕೊಂಡಿದ್ದು ಇಂತಹ ನಿರ್ಬಂಧಗಳನ್ನು ಹೇರುವುದು ಸಂವಿಧಾನಬಾಹಿರವಾಗಿದೆ. ಮಹಿಳೆಯರಿಗೆ ಸೂಕ್ತ ಸೌಲಭ್ಯಗಳನ್ನು ನೀಡದೆ ಆಹಾರ ನಿರಾಕರಿಸುವ ಮೂಲಕ ಅವರ ಹಕ್ಕುಗಳನ್ನು ದಮನ ಮಾಡುತ್ತಿರುವ ಬಿಗ್ ಬಾಸ್ 11ರ ಕಾರ್ಯಕ್ರಮ ನಿರ್ವಹಿಸುತ್ತಿರುವ ಕಲರ್ಸ್ ಕನ್ನಡ ವಾಹಿನಿಯ ಮುಖ್ಯಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...