ಥಗ್ ಲೈಫ್ ಸಿನಿಮಾ ನಿಷೇಧ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

Date:

ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಸಿನಿಮಾಕ್ಕೆ ಕರ್ನಾಟಕದಲ್ಲಿ ಅನಧಿಕೃತ ನಿಷೇಧ ಹೇರಿರುವ ಕುರಿತಂತೆ ಕಮಲ್ ಹಾಸನ್ ಅವರ ಚಿತ್ರ ನಿರ್ಮಾಣ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದೆ. ರಾಜ್ಯ ಹೈಕೋರ್ಟ್​ನಲ್ಲಿ ಅವರಿಗೆ ಅನುಕೂಲವಲ್ಲದ ಆದೇಶ ಬಂದ ಬೆನ್ನಲ್ಲೆ ಸುಪ್ರೀಂ ಕೋರ್ಟ್​​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಕಮಲ್ ಪರ ವಕೀಲರು, ರಾಜ್ಯದಲ್ಲಿ ಕೆಲವು ಧಮನಕಾರಿ ಸಂಘಟನೆಗಳು ಭಾಷೆಯ ಹೆಸರಿನಲ್ಲಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಸಿನಿಮಾದ ವಿರುದ್ಧ ನಿಷೇಧ ಹೇರಿವೆ ಎಂದು ವಾದಿಸಿದ್ದಾರೆ.

ಈ ಮೊದಲು ಇದೇ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆದಾಗ, ಪ್ರಕರಣವನ್ನು ರಾಜ್ಯ ಹೈಕೋರ್ಟ್​​ನಲ್ಲಿಯೇ ಇತ್ಯರ್ಥ ಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಆದರೆ ಕಮಲ್ ಪರ ವಕೀಲರು, ‘ಸಿನಿಮಾದ ಬಿಡುಗಡೆಗೆ ತಡೆ ಒಡ್ಡುತ್ತಿರುವವರ ಜೊತೆ ಸಂಧಾನ ಮಾಡಿಕೊಳ್ಳುವಂತೆ ಹೈಕೋರ್ಟ್ ಸೂಚಿಸಿದೆ’ ಎಂದು ಉತ್ತರಿಸಿದ್ದರು. ಇದೇ ಕಾರಣಕ್ಕೆ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಸ್ವೀಕರಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಥಗ್ ಲೈಫ್ ಸಿನಿಮಾ ಪರವಾಗಿ ವಾದ ಮಂಡಿಸಿದ ವಕೀಲ ನವಪ್ರೀತ್ ಕೌರ್, ಕೆಲವು ಧಮನಕಾರಿ ಗುಣವೊಂದಿರುವ ಸಂಘಟನೆಗಳು ಭಾಷಾ ಅಲ್ಪಸಂಖ್ಯಾತರನ್ನು ಬೆದರಿಸುತ್ತಿದ್ದು, ಭಾಷೆಯ ಕಾರಣಕ್ಕೆ ತಮಿಳು ಸಿನಿಮಾದ ಬಿಡುಗಡೆಗೆ ತಡೆಯೊಡ್ಡಿವೆ. ಹಾಗಾಗಿ ನಾವು ಸಿನಿಮಾ ಹಾಗೂ ಚಿತ್ರಮಂದಿರಗಳ ಭದ್ರತೆಯನ್ನು ಕೋರುತ್ತಿದ್ದೇವೆ ಎಂದು ಕೋರ್ಟ್‌ಗೆ ಮನವರಿಕೆ ಮಾಡಿದರು.

ಇದನ್ನು ಓದಿದ್ದೀರಾ? ಸೆನ್ಸಾರ್ ಮಂಡಳಿ ಅದುಮಿಟ್ಟಿರುವ ವೆಟ್ರಿಮಾರನ್ ‘ಮಾನುಷಿ’ ಚಿತ್ರದಲ್ಲೇನಿದೆ, ಏನಿದು ವಿವಾದ?

ವಾದ ಆಲಿಸಿದ ಸುಪ್ರೀಂಕೋರ್ಟ್, ಸಿಬಿಎಫ್​ಸಿ ಪ್ರಮಾಣ ಪತ್ರ ಪಡೆದಿರುವ ತಮಿಳು ಚಲನಚಿತ್ರ ಥಗ್ ಲೈಫ್ ಅನ್ನು ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಅನಧಿಕೃತವಾಗಿ ನಿಷೇಧ ಹೇರಲಾಗಿದೆ. ಹಿಂಸಾಚಾರದ ಬೆದರಿಕೆಯಡಿಯಲ್ಲಿ ಈ ನಿಷೇಧವನ್ನು ಜಾರಿ ಮಾಡಿಲಾಗಿದೆಯೇ ವಿನಃ ಯಾವುದೇ ಕಾನೂನು ಪ್ರಕ್ರಿಯೆಯಿಂದ ನಿಷೇಧ ಹೇರಲಾಗಿಲ್ಲ. ಸಿನಿಮಾ ಮಂದಿರಗಳಿಗೆ ಬೆಂಕಿ ಹಚ್ಚುವ ಸ್ಪಷ್ಟ ಬೆದರಿಕೆ ಹಾಕಲಾಗಿದೆ. ಭಾಷಾ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದೊಡ್ಡ ಪ್ರಮಾಣದ ಹಿಂಸಾಚಾರದ ಪ್ರಚೋದನೆ ಮಾಡಲಾಗಿದೆ. ಭಯದ ವಾತಾವರಣ ನಿರ್ಮಿಸುವ ಪ್ರಯತ್ನ ಕಾಣುತ್ತಿದೆ. ಅರ್ಜಿಯ ತುರ್ತು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾದ ವಿಷಯಗಳನ್ನು ಪರಿಗಣಿಸಿ ಪ್ರತಿವಾದಿಗಳಿಗೆ ಪ್ರತಿಕ್ರಿಯೆ ನೀಡಲು ನೋಟಿಸ್ ನೀಡಲಾಗಿದೆ’ ಎಂದು ತಿಳಿಸಿದೆ.

‘ಥಗ್ ಲೈಫ್’ ಸಿನಿಮಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಮಲ್ ಹಾಸನ್ ಅವರು, ಕನ್ನಡ ಭಾಷೆಯು ತಮಿಳು ಭಾಷೆಯಿಂದ ಉಗಮವಾಗಿದೆ ಎಂದಿದ್ದರು. ಕಮಲ್​ರ ಈ ಹೇಳಿಕೆ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಪರ ಸಂಘಟನೆಗಳು ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದವು. ‘ಥಗ್ ಲೈಫ್’ ಸಿನಿಮಾ ಕಳೆದ ವಾರ ಕರ್ನಾಟಕದ ಹೊರತಾಗಿ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಆಗಿದ್ದು, ಸಿನಿಮಾಕ್ಕೆ ದೊಡ್ಡ ಪ್ರಮಾಣದ ಯಶಸ್ಸು ದೊರಕಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...