ರೇಣುಕಸ್ವಾಮಿ ಹತ್ಯೆ ಪ್ರಕರಣ: ದರ್ಶನ್‌ ಸೇರಿದಂತೆ 7 ಆರೋಪಿಗಳಿಗೆ ಸುಪ್ರೀಂ ನೋಟಿಸ್‌

Date:

ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್‌ ಹಾಗೂ ಪವಿತ್ರ ಗೌಡ ಸೇರಿದಂತೆ ಇತರ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ನೋಟಿಸ್‌ ಜಾರಿ ಮಾಡಿದೆ.

ರೇಣುಕಸ್ವಾಮಿ ಹತ್ಯೆ ಪ್ರಕರಣದಲ್ಲಿ ಹೈಕೋರ್ಟ್‌ ದರ್ಶನ್‌ ಸೇರಿದಂತೆ ಇತರೇ 7 ಆರೋಪಿಗಳಿಗೆ ಮಂಜೂರು ಮಾಡಿದ್ದ ಜಾಮೀನು ರದ್ದು ಕೋರಿ ಬೆಂಗಳೂರು ಪೊಲೀಸರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್‌ನಲ್ಲಿ ನಡೆಯಿತು.

ಈ ವೇಳೆ ಹೈಕೋರ್ಟ್ ವಿಸ್ತೃತ ಆದೇಶ ಪ್ರಕಟಿಸಿ ಆರೋಪಿಗಳಿಗೆ ಜಾಮೀನು ನೀಡಿದೆ. ಮೆರಿಟ್‌ ಮೇಲೆ ಕೋರ್ಟ್ ಆದೇಶ ನೀಡಿದೆ. ಹೀಗಾಗಿ ಈ ಅರ್ಜಿಯ ವಿಚಾರಣೆಗೆ ಆರೋಪಿಗಳ ವಾದವನ್ನು ಕೇಳಬೇಕಾಗುತ್ತದೆ ಎಂದು ಹೇಳಿ ಆರೋಪಿಗಳಿಗೆ ನೋಟಿಸ್‌ ಜಾರಿ ಮಾಡಿ ಕೋರ್ಟ್‌ ವಿಚಾರಣೆಯನ್ನು ಮುಂದೂಡಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಂದಿನ ವಿಚಾರಣೆಯಲ್ಲಿ ಆರೋಪಿಗಳ ಪರ ವಕೀಲರು ಜಮೀನು ನೀಡಿದ್ದನ್ನು ಸಮರ್ಥಿಸಿಕೊಂಡರೆ, ಪೊಲೀಸರ ಪರ ವಕೀಲರು ಜಾಮೀನು ನೀಡಬಾರದು ಎಂದು ವಾದ ಮಂಡಿಸಲಿದ್ದಾರೆ. ಎರಡು ಕಡೆಯ ವಾದವನ್ನು ಆಲಿಸಿದ ಬಳಿಕ ಕೋರ್ಟ್‌ ತನ್ನ ಆದೇಶವನ್ನು ಪ್ರಕಟಿಸಲಿದೆ.

ಪವಿತ್ರಾ ಗೌಡ (ಎ 1), ದರ್ಶನ್‌ (ಎ 2), ಜಗದೀಶ್‌ ಜಗ್ಗ ಅಲಿಯಾಸ್‌ ಜಗ್ಗ (ಎ 6),ಅನುಕುಮಾರ್‌ ಅಲಿಯಾಸ್‌ ಅನು (ಎ 7), ಆರ್‌ ನಾಗರಾಜು (ಎ 11) ಎಂ ಲಕ್ಷ್ಮಣ್‌ (ಎ 12), ಪ್ರದೋಶ್‌ ಎಸ್‌. ರಾವ್‌ (ಎ 14) ಅವರಿಗೆ ನೋಟಿಸ್ ನೀಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

ದರ್ಶನ್ ಹಾಗೂ 7 ಆರೋಪಿಗಳ ಜಾಮೀನು ರದ್ದುಕೋರಿ ಸುಪ್ರೀಂಕೋರ್ಟ್‌ಗೆ ಪೊಲೀಸರು ಅರ್ಜಿ ಸಲ್ಲಿಸಿದ್ದರು. ವಕೀಲ ಅನಿಲ್ ನಿಶಾನಿ ಮುಖಾಂತರ ಮೇಲ್ಮನವಿ ಸಲ್ಲಿಸಿರುವ ಸರ್ಕಾರ ಬರೋಬ್ಬರಿ 1,492 ಪುಟಗಳ ಕಡತಗಳನ್ನು ಸಲ್ಲಿಕೆ ಮಾಡಿತ್ತು.

ಹೈಕೋರ್ಟ್ ಜಾಮೀನು ಆದೇಶ, ಪ್ರತ್ಯಕ್ಷದರ್ಶಿಗಳ ಹೇಳಿಕೆಯ ತರ್ಜುಮೆ ಕಾಪಿ, ಮರಣೋತ್ತರ ಪರೀಕ್ಷೆಯ ವರದಿ, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಸಿಡಿಆರ್, ಪಂಚನಾಮೆ ವರದಿ, ಆರೋಪಿಗಳ ಬಳಿ ವಶಪಡಿಸಿಕೊಂಡ ಡಿಜಿಟಲ್ ವಸ್ತುಗಳ ವಿಶ್ಲೇಷಣೆ ವರದಿ, ಸೆಷನ್ಸ್ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಜಾ ಆದೇಶ ಪ್ರತಿ, ದರ್ಶನ್‌ಗೆ ನೀಡಿದ್ದ ಮಧ್ಯಂತರ ಜಾಮೀನು ಅದೇಶ ಪ್ರತಿ, ಜೈಲಿನಿಂದ ದರ್ಶನ್ ಬಗ್ಗೆ ಸಲ್ಲಿಕೆಯಾದ ವೈದ್ಯಕೀಯ ವರದಿ, ಬಿಜಿಎಸ್ ಆಸ್ಪತ್ರೆ ವೈದ್ಯರ ವರದಿ ಸೇರಿದಂತೆ ಒಟ್ಟು 15 ಅಂಶಗಳಿಗೆ ಸಂಬಂಧಿಸಿ 1492 ಪುಟಗಳ ಕಡತವನ್ನು ಕೋರ್ಟ್‌ಗೆ ನೀಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...