ನನ್ನ ಮೇಲೆ ಪ್ರತೀಕಾರ ತೀರಿಸಿಕೊಳ್ಳಿ, ನನ್ನ ಜನರನ್ನು ಮುಟ್ಟಬೇಡಿ: ನಟ ವಿಜಯ್‌ ವಿಡಿಯೋ ಸಂದೇಶ

Date:

ಕರೂರು ದುರಂತದ ನಂತರ ತಮಿಳುನಾಡಿನ ನಟ ಹಾಗೂ ಟಿವಿಕೆ ಪಕ್ಷದ ರಾಜಕೀಯ ನಾಯಕ ವಿಜಯ್ ತಮ್ಮ ಭಾವನಾತ್ಮಕ ವಿಡಿಯೋ ಸಂದೇಶವೊಂದರಲ್ಲಿ ಜನರ ಸುರಕ್ಷತೆಗೆ ತಾವು ಎಷ್ಟು ಮಹತ್ವ ನೀಡುತ್ತೇವೆ ಎಂಬುದನ್ನು ಒತ್ತಿ ಹೇಳಿದ್ದಾರೆ. ಈ ದುರಂತದಿಂದ ತೀವ್ರವಾಗಿ ಬೇಸರಗೊಂಡಿರುವ ವಿಜಯ್, ತಮ್ಮ ಜೀವನದಲ್ಲಿ ಇಂತಹ ನೋವಿನ ಸಂದರ್ಭವನ್ನು ಎಂದಿಗೂ ಎದುರಿಸಿಲ್ಲ ಎಂದು ಹೇಳಿದ್ದಾರೆ.

“ನನ್ನ ಜೀವನದಲ್ಲಿ ಇಂತಹ ನೋವು ತುಂಬಿದ ಸಂದರ್ಭವನ್ನು ನಾನು ಮೊದಲು ಎದುರಿಸಿಲ್ಲ. ಈ ಪ್ರವಾಸದಲ್ಲಿ ಜನರು ಎಷ್ಟೋ ಸಂಖ್ಯೆಯಲ್ಲಿ ಬರುತ್ತಿರುವುದು ಅವರ ಪ್ರೀತಿ ಮತ್ತು ಮಮತೆಯಿಂದ. ಅದಕ್ಕಾಗಿ ನಾನು ಸದಾ ಅವರಿಗೆ ಋಣಿ. ಆದರೆ, ಎಲ್ಲಕ್ಕಿಂತ ಮುಖ್ಯವಾಗಿ ಜನರ ಸುರಕ್ಷತೆ ನನ್ನ ಹೃದಯಕ್ಕೆ ಹತ್ತಿರವಾಗಿತ್ತು. ಅದಕ್ಕಾಗಿ ರಾಜಕೀಯ ಕಾರಣಗಳನ್ನು ಬದಿಗಿಟ್ಟು, ಸೂಕ್ತ ಸ್ಥಳಗಳನ್ನು ಆಯ್ಕೆ ಮಾಡಿದ್ದೆ. ಆದರೂ ನಡೆಯಬಾರದದ್ದು ನಡೆಯಿತು. ಪ್ರತಿಭಟನೆಗಳಿಗಾಗಿ 5 ಸ್ಥಳಗಳನ್ನು ಆಯ್ಕೆ ಮಾಡಿದ್ದೆ, ಕರೂರಿನಲ್ಲೇ ಏಕೆ ದುರಂತ ನಡೆಯಿತು” ಎಂದು ವಿಜಯ್ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹಿಂದುಳಿದ ವರ್ಗಗಳ ಹಿತಕ್ಕೆ ಕೊಳ್ಳಿ ಇಡಲು ಹೊರಟ ಬಿಜೆಪಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈ ಸಂದರ್ಭದಲ್ಲಿ ನಾನು ಸಹ ಮಾನವನಾಗಿದ್ದೇನೆ. ಜನರಿಗೆ ನೋವು ತಾಗಿದಾಗ ನಾನು ಹಿಂದಕ್ಕೆ ಸರಿಯಲು ಸಾಧ್ಯವಿಲ್ಲ. ಆಸ್ಪತ್ರೆಗೆ ದಾಖಲಾದವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಶೀಘ್ರದಲ್ಲೇ ನಿಮ್ಮೆಲ್ಲರನ್ನು ಭೇಟಿ ಮಾಡುತ್ತೇನೆ. ನಮ್ಮ ನೋವನ್ನು ಅರ್ಥಮಾಡಿಕೊಂಡ ಎಲ್ಲ ರಾಜಕೀಯ ಪಕ್ಷಗಳಿಗೆ, ನಾಯಕರಿಗೆ, ಸ್ನೇಹಿತರಿಗೆ ಧನ್ಯವಾದಗಳು. ನಾವು ನಿಗದಿಪಡಿಸಿದ ಸ್ಥಳದಲ್ಲೇ ಸಮಾವೇಶ ನಡೆಸಿದ್ದೇವೆ. ಅದಕ್ಕಿಂತ ಹೆಚ್ಚೇನೂ ಮಾಡಿಲ್ಲ. ಜನರು ಸತ್ಯವನ್ನು ನೋಡುತ್ತಿದ್ದಾರೆ. ದೇವರೇ ಬಂದು ಸತ್ಯವನ್ನು ಬಿಚ್ಚಿಟ್ಟಂತೆ ನನಗನಿಸಿತು. ಸತ್ಯವು ಶೀಘ್ರದಲ್ಲೇ ಹೊರಬರುತ್ತದೆ,” ಎಂದಿದ್ದಾರೆ.

ಮುಖ್ಯಮಂತ್ರಿಗೆ ಉದ್ದೇಶಿಸಿ ಮಾತನಾಡಿರುವ ವಿಜಯ್, “ನನ್ನ ಮೇಲೆ ಪ್ರತೀಕಾರ ತೀರಿಸಬೇಕೆಂದಿದ್ದರೆ ಮಾಡಿ, ಆದರೆ ನನ್ನ ಪಕ್ಷದ ಜನರನ್ನು ಮುಟ್ಟಬೇಡಿ. ನಾನು ಮನೆಯಲ್ಲಿ ಇರಲಿ, ಕಚೇರಿಯಲ್ಲಿ ಇರಲಿ, ನಿಮ್ಮಿಂದ ಸಾಧ್ಯವಾದುದನ್ನು ಮಾಡಿ. ನಮ್ಮ ರಾಜಕೀಯ ಪಯಣ ಇನ್ನಷ್ಟು ಧೈರ್ಯದಿಂದ, ಇನ್ನಷ್ಟು ಶಕ್ತಿಯಿಂದ ಮುಂದುವರಿಯಲಿದೆ,” ಎಂದು ಹೇಳಿದ್ದಾರೆ.

ಮೂರು ದಿನಗಳ ಹಿಂದೆ ನಡೆದ ತಮಿಳುನಾಡಿನ ಕರೂರಿನಲ್ಲಿ ವಿಜಯ್‌ ಹಮ್ಮಿಕೊಂಡಿದ್ದ ಟಿವಿಕೆ ರ್ಯಾಲಿಯಲ್ಲಿ ಕಾಲ್ತುಳಿತದಿಂದಾಗಿ 41 ಮಂದಿ ಮೃತಪಟ್ಟು, ಹಲವರು ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...