ವರ್ಮಾ ಕಚೇರಿಗೆ ಟಿಡಿಪಿ, ಜನಸೇನಾ ಕಾರ್ಯಕರ್ತರ ಮುತ್ತಿಗೆ: ವ್ಯೂಹಂ ಪೋಸ್ಟರ್‌ಗೆ ಬೆಂಕಿ

Date:

ಖ್ಯಾತ ಚಿತ್ರ ನಿರ್ದೇಶಕ ರಾಮಗೋಪಾಲ್ ವರ್ಮಾ ನಿರ್ದೇಶನದ ಇತ್ತೀಚಿನ ಚಿತ್ರ ‘ವ್ಯೂಹಂ’ ವಿವಾದಕ್ಕೆ ಕಾರಣವಾಗುತ್ತಿದೆ. ಈ ಚಿತ್ರದಲ್ಲಿ ತಮ್ಮ ನೆಚ್ಚಿನ ನಾಯಕರನ್ನು ಆಕ್ಷೇಪಾರ್ಹವಾಗಿ ತೋರಿಸಲಾಗಿದೆ ಎಂದು ಟಿಡಿಪಿ ಮತ್ತು ಜನಸೇನಾ ಕಾರ್ಯಕರ್ತರು ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಹೈದರಾಬಾದ್ ನಗರದ ರಾಮ್‌ಗೋಪಾಲ್ ವರ್ಮಾ ಅವರ ಕಚೇರಿ ಎದುರು ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು.

ಕಾರ್ಯಕರ್ತರು ಈ ಸಂದರ್ಭದಲ್ಲಿ ವ್ಯೂಹಂ ಚಿತ್ರದ ಪೋಸ್ಟರ್‌ಗಳು ಮತ್ತು ಆರ್‌ಜಿವಿ ಪ್ರತಿಕೃತಿಯನ್ನು ದಹಿಸಿ ಸಿನಿಮಾವನ್ನು ನಿಷೇಧಿಸುವಂತೆ ರಾಮ್ ಗೋಪಾಲ್ ವರ್ಮಾ ವಿರುದ್ಧ ಘೋಷಣೆ ಕೂಗಿದರು. ಇದರಿಂದ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ಪಡೆದ ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಿದರು.

ಆಂಧ್ರಪ್ರದೇಶ ಸಿಎಂ ಮತ್ತು ವೈಎಸ್‌ಆರ್‌ಸಿಪಿ ನಾಯಕ ವೈ ಎಸ್ ಜಗನ್‌ ಮೋಹನ್ ರೆಡ್ಡಿ ಅವರ ರಾಜಕೀಯ ಹಿನ್ನೆಲೆಯನ್ನು ಆಧರಿಸಿ ಆರ್‌ಜಿವಿ ‘ವ್ಯೂಹಂ’ ಚಿತ್ರ ಮಾಡಿದ್ದಾರೆ ಎಂದು ತಿಳಿದಿದೆ. ವೈಎಸ್ ಆರ್ ನಿಧನದ ನಂತರ ಜಗನ್ ಅವರ ರಾಜಕೀಯ ಜೀವನದ ವಿದ್ಯಮಾನಗಳನ್ನು ಆರ್‌ಜಿವಿ ಈ ಚಿತ್ರದಲ್ಲಿ ತೋರಿಸಲಿದ್ದಾರಂತೆ. ಆದರೆ, ಈ ಚಿತ್ರದಲ್ಲಿ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಜನಸೇನಾ ಅಧ್ಯಕ್ಷ ಪವನ್ ಕಲ್ಯಾಣ್ ಅವರನ್ನು ಆಕ್ಷೇಪಾರ್ಹ ರೀತಿಯಲ್ಲಿ ಚಿತ್ರಿಸಲಾಗಿದೆ ಎಂದು ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಡಿಸೆಂಬರ್ 29 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಈ ಹಿನ್ನಲೆಯಲ್ಲಿ ಟಿಡಿಪಿ ಮತ್ತು ಜನಸೇನಾ ಪಡೆಗಳು ಆರ್‌ಜಿವಿ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿವೆ. ತಮ್ಮ ನೆಚ್ಚಿನ ನಾಯಕರಿಗೆ ಅವಮಾನ ಮಾಡಿದರೆ ಸುಮ್ಮನೆ ನಿಲ್ಲುವುದಿಲ್ಲ ಎಂದು ಎಚ್ಚರಿಸುತ್ತಿದ್ದಾರೆ.

ತಮ್ಮ ಕಚೇರಿ ಎದುರು ನಡೆದ ಧರಣಿ ಬಗ್ಗೆ ರಾಮ್‌ಗೋಪಾಲ್ ವರ್ಮಾ ಪ್ರತಿಕ್ರಿಯಿಸಿದ್ದು, ‘ನಿಮ್ಮ ನಾಯಿಗಳು ನನ್ನ ಆಫೀಸ್ ಮುಂದೆ ಬೊಗಳುತ್ತಿದ್ದವು. ಪೊಲೀಸರು ಬಂದಾಗ ಓಡಿ ಹೋದವು’ ಎಂದು ಚಂದ್ರಬಾಬು ನಾಯ್ಡು, ನರಾ ಲೋಕೇಶ್ ಮತ್ತು ಪವನ್ ಕಲ್ಯಾಣ್ ಅವರಿಗೆ ಟ್ಯಾಗ್ ಮಾಡಿದ್ದಾರೆ.

 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...