ಕ್ಲಾಸ್‌ ಬಂಕ್‌ ಮಾಡಿ ಸಿನಿಮಾ ನೋಡಿ ಎಂದ ತೆಲಂಗಾಣ ಶಿಕ್ಷಣ ಸಚಿವ

Date:

ಮೇ 12ರಂದು ತೆರೆಕಾಣಲಿರುವ ʼಕಸ್ಟಡಿʼ ಸಿನಿಮಾ

ಸಿನಿಮಾಗಾಗಿ ಪರೀಕ್ಷೆ ಮುಂದೂಡಲು ಸಜ್ಜಾದ ಸಚಿವ

ತೆಲುಗಿನ ಸ್ಟಾರ್‌ ನಟ ನಾಗ ಚೈತನ್ಯ ಮುಖ್ಯಭೂಮಿಕೆಯ ʼಕಸ್ಟಡಿʼ ಸಿನಿಮಾ ಮೇ 12ರಂದು ತೆರೆಗೆ ಬರಲಿದೆ. ಕ್ಲಾಸ್‌ ಬಂಕ್‌ ಮಾಡಿಯಾದರೂ ಈ ಸ್ಟಾರ್‌ ಸಿನಿಮಾವನ್ನು ಚಿತ್ರಮಂದಿರಗಳಿಗೆ ತೆರಳಿ ವೀಕ್ಷಿಸುವಂತೆ ತೆಲಂಗಾಣದ ಶಿಕ್ಷಣ ಸಚಿವ ಮಲ್ಲ ರೆಡ್ಡಿ ವಿದ್ಯಾರ್ಥಿಗಳಿಗೆ ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇತ್ತೀಚೆಗಷ್ಟೇ ʼಕಸ್ಟಡಿʼ ಸಿನಿಮಾದ ಟೀಸರ್‌ ಬಿಡುಗಡೆಯಾಗಿ ಸಿನಿ ರಸಿಕರಿಂದ ಉತ್ತಮ ಪ್ರತಿಕ್ರಿಯೆ ಪಡೆದುಕೊಂಡಿತ್ತು. ಹೈದರಾಬಾದ್‌ನಲ್ಲಿರುವ ಸಚಿವ ಮಲ್ಲರೆಡ್ಡಿ ಒಡೆತನದ ವೈದ್ಯಕೀಯ ಕಾಲೇಜಿನ ಆವರಣದಲ್ಲಿ ಈ ಚಿತ್ರದ ಟೀಸರ್‌ ಅನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲಾಗಿತ್ತು.

ಟೀಸರ್‌ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಜೊತೆಗೆ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದ ಮಲ್ಲ ರೆಡ್ಡಿ, ನಾಗ ಚೈತನ್ಯ ಮತ್ತವರ ಕುಟುಂಬದ ಕಲಾ ಸೇವೆಯನ್ನು ಕೊಂಡಾಡುತ್ತಾ, “ಮುಂಬರುವ ಮೇ 12ರಂದು ʼಕಸ್ಟಡಿʼ ಸಿನಿಮಾ ಬಿಡುಗಡೆಯಾಗುತ್ತಿದೆ. ಕ್ಲಾಸ್‌ ಬಂಕ್‌ ಮಾಡಿಯಾದರೂ ಆ ಸಿನಿಮಾವನ್ನು ನೋಡಿ, ಒಂದು ವೇಳೆ ಅದೇ ದಿನ ನಿಮಗೆ ಪರೀಕ್ಷೆಗಳಿದ್ದರೆ, ಅವುಗಳನ್ನು ಕೂಡ ನಾನು ಮುಂದೂಡಿಸುತ್ತೇನೆ” ಎಂದಿದ್ದಾರೆ. ಸಚಿವರ ಈ ಹೇಳಿಕೆಯ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಮಲ್ಲ ರೆಡ್ಡಿ ಅವರ ಒಡೆತನದಲ್ಲಿ 13 ಇಂಜಿನಿಯರಿಂಗ್‌ ಮತ್ತು ವೈದ್ಯಕೀಯ ಕಾಲೇಜುಗಳಿವೆ. ಈ ಶಿಕ್ಷಣ ಸಂಸ್ಥೆಗಳಲ್ಲಿ ಅಂದಾಜು 65 ಸಾವಿರ ವಿದ್ಯಾರ್ಥಿಗಳು ವ್ಯಾಸಾಂಗ ಮಾಡುತ್ತಿದ್ದಾರೆ. ತೆಲಂಗಾಣದ ಶಿಕ್ಷಣ ಸಚಿವರೂ ಆಗಿರುವ ಮಲ್ಲ ರೆಡ್ಡಿ, “ಕ್ಲಾಸ್‌ ಬಂಕ್‌ ಮಾಡಿ ಸಿನಿಮಾ ನೋಡಿ, ಬೇಕಿದ್ದರೆ ಪರೀಕ್ಷೆಗಳನ್ನು ಕೂಡ ಮುಂದೂಡಿಸುತ್ತೇನೆ” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡುವುದು ಎಷ್ಟು ಸರಿ ಎಂದು ನೆಟ್ಟಿಗರು ಪ್ರಶ್ನಿಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಅಮುಲ್‌ ವಿವಾದ | ಕನ್ನಡಿಗರ ಹೋರಾಟ ಅಸ್ಮಿತೆಗಾಗಿ ; ಕವಿರಾಜ್‌

ವೆಂಕಟ್‌ ಪ್ರಭು ನಿರ್ದೇಶನದಲ್ಲಿ ನಾಗ ಚೈತನ್ಯ ಮುಖ್ಯಭೂಮಿಕೆಯಲ್ಲಿ ಮೂಡಿ ಬಂದಿರುವ ʼಕಸ್ಟಡಿʼ ಸಿನಿಮಾದಲ್ಲಿ ಕೃತಿ ಶೆಟ್ಟಿ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಪ್ರಿಯಾಮಣಿ ಮತ್ತು ಅರವಿಂದ್‌ ಸ್ವಾಮಿ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಇಳಿಯರಾಜ ಮತ್ತು ಯುವನ್‌ ಶಂಕರ್‌ ರಾಜ ಅವರ ಹಿನ್ನೆಲೆ ಸಂಗೀತ ಈ ಚಿತ್ರಕ್ಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...