ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ 10 ಆರೋಪಿಗಳ ಬೆರಳಚ್ಚು ಹೊಂದಾಣಿಕೆ?

Date:

ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಸಂಗ್ರಹಿಸಿದ್ದ ಬೆರಳಚ್ಚು ಮಾದರಿ, ಬಂಧಿತ ಆರೋಪಿಗಳ ಪೈಕಿ ಕೆಲವರಿಗೆ ಹೊಂದಾಣಿಕೆ ಆಗಿರುವುದು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ.

ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಅವರ ಆಪ್ತೆ ಪವಿತ್ರಾಗೌಡ, ಪವನ್, ಪ್ರದೋಷ್ ಸೇರಿದಂತೆ 17 ಆರೋಪಿಗಳನ್ನು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದರು. ಆರೋಪಿಗಳಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ 14 ಮಂದಿ ಹಾಗೂ ತುಮಕೂರು ಜಿಲ್ಲಾ ಕಾರಾಗೃಹದಲ್ಲಿ ಮೂವರು ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. 17 ಮಂದಿಯ ಪೈಕಿ 10 ಮಂದಿಯ ಬೆರಳಚ್ಚು ಹೊಂದಾಣಿಕೆ ಆಗಿದೆ’ ಎಂದು ಮೂಲಗಳು ಹೇಳಿವೆ.

ಜೂನ್ 9ರಂದು ಪಟ್ಟಣಗೆರೆಯ ಶೆಡ್‌ನಲ್ಲಿ ಕೊಲೆ ನಡೆದಿತ್ತು. ಕೃತ್ಯ ನಡೆದ ಮರುದಿನ ನಾಲ್ವರು ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದರು. ಜೂನ್ 11ರಂದು ದರ್ಶನ್ ಸೇರಿ 13 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿಎನ್ಎ ಪರೀಕ್ಷೆಗಾಗಿ 10 ಮಂದಿಯ ರಕ್ತ ಹಾಗೂ ಕೂದಲು ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ಅದರ ವರದಿಯೂ ಬರಬೇಕಿದೆ’ ಎಂದು ಪೊಲೀಸರು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರಣಿ ಅವಘಡಗಳಿಂದ ಬಯಲಾದ ಮೋದಿಯವರ ‘ಅಭಿವೃದ್ಧಿ ಮತ್ತು ಆಡಳಿತ’

ಬಂಧಿತ ಆರೋಪಿ ಪ್ರದೋಷ್ ಸ್ನೇಹಿತ ಕಾರ್ತಿಕ್ ಪುರೋಹಿತ್ ಅವರಿಗೆ ಸೋಮವಾರ ಮತ್ತೆ ವಿಚಾರಣೆಗೆ ಬರುವಂತೆ ಪೊಲೀಸರು ನೋಟಿಸ್ ಜಾರಿಮಾಡಿದ್ದಾರೆ. ಶನಿವಾರವೂ ಕಾರ್ತಿಕ್ ವಿಚಾರಣೆ ನಡೆಸಲಾಗಿತ್ತು.

‘ಕೃತ್ಯ ನಡೆದ ದಿನ ಪಟ್ಟಣಗೆರೆಯ ಶೆಡ್‌ಗೆ ಪ್ರದೋಷ್ ಜತೆಗೆ ಕಾರ್ತಿಕ್ ಪುರೋಹಿತ್ ಬಂದಿದ್ದರು. ಇತರ ಆರೋಪಿಗಳ ಜತೆಗೂ ಕಾರ್ತಿಕ್‌ಗೆ ಒಡನಾಟವಿದ್ದ ಮಾಹಿತಿಯಿದೆ. ಈಗಾಗಲೇ ಕೆಲವು ಮಾಹಿತಿ ಪಡೆದುಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿ ಪಡೆದು ಹೇಳಿಕೆ ದಾಖಲು ಮಾಡಿಕೊಳ್ಳಲು ಮತ್ತೆ ವಿಚಾರಣೆಗೆ ಬರುವಂತೆ ಸೂಚಿಸಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಮೊದಲನೇ ಆರೋಪಿ ಪವಿತ್ರಾಗೌಡ ಅವರ ಸ್ನೇಹಿತೆ ಸಮತಾ ಅವರಿಗೂ ಪೊಲೀಸರು ನೋಟಿಸ್ ಜಾರಿಮಾಡಿದ್ದಾರೆ. ಅವರೂ ಇಂದು ವಿಚಾರಣೆಗೆ ಬರುವ ಸಾಧ್ಯತೆಯಿದೆ ಎಂದು ಮೂಲಗಳು ಹೇಳಿವೆ.

‘ಕೃತ್ಯ ನಡೆದ ಮರುದಿನ ಸಮತಾ ಅವರು ಪವಿತ್ರಾಗೌಡ ಅವರ ಮನೆಗೆ ಭೇಟಿ ನೀ ಡಿದ್ದರು. ಅಲ್ಲದೇ ಆರೋಪಿ ಧನರಾಜ್‌ ಫೋನ್ ಪೇ ಮೂಲಕ 3 ಸಾವಿರದಷ್ಟು ಹಣ ಹಾಕಿದ್ದರು ಎನ್ನಲಾಗಿದೆ. ರೇಣುಕಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದ ಬಗ್ಗೆ ಪವಿತ್ರಾ ಅವರು ಸಮತಾ ಜತೆಗೆ ಹೇಳಿಕೊಂಡಿರುವ ಸಾಧ್ಯತೆಯಿದ್ದು ಅವರಿಗೂ ನೋಟಿಸ್ ನೀಡಲಾಗಿದೆ’ ಎಂದು ಮೂಲಗಳು ಹೇಳಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʼಸೆರಗ ಸರ್ಸೆʼ ಚೀಪ್‌ ಗಿಮಿಕ್‌ನ ಭಾಗ- ಕಂಗನಾ ಗುಡುಗು, ಅರ್ಮಾನ್‌ ಅಸಹನೆ

ಪ್ರೇಮ್‌ ನಿರ್ದೇಶನದ ಕೆಡಿ ದ ಡೆವಿಲ್‌ ಸಿನಿಮಾದ ವಿವಾದಿತ ಹಾಡು ʼಸೆರಗ...

ಕನ್ನಡಿಗರು ಕೇಂದ್ರದ ಮುಂದೆ ಭಿಕ್ಷೆಗೆ ನಿಂತಿಲ್ಲ: ಹೀಗಂದಿದ್ಯಾಕೆ ಸಿಎಂ?

ಮೈಸೂರು, ಬೆಂಗಳೂರು ಹಾಗೂ ಹುಬ್ಬಳಿಯಲ್ಲಿ ನಡೆಯಬೇಕಿದ್ದ ರೈಲ್ವೆ ಇಲಾಖೆ ಮುಂಬಡ್ತಿ ಪರೀಕ್ಷೆಗಳನ್ನು...

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...