ʼದಿ ಕೇರಳ ಸ್ಟೋರಿʼ ಚಿತ್ರತಂಡಕ್ಕೆ ಅಪಘಾತ

Date:

ಅಪಘಾತವಾಗಿದ್ದು ಹೇಗೆ ಎಂಬ ಬಗ್ಗೆ ಸುಳಿವು ನೀಡದ ಚಿತ್ರತಂಡ

ಟ್ವೀಟ್‌ ಮಾಡಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ನಟಿ ಅದಾ ಶರ್ಮಾ

ತಿರುಚಿದ ಕಥಾಹಂದರದ ಕಾರಣಕ್ಕೆ ವಿವಾದಕ್ಕೊಳಗಾಗಿರುವ ʼದಿ ಕೇರಳ ಸ್ಟೋರಿʼ ಸಿನಿಮಾ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ನಡುವೆ ತೆಲಂಗಾಣದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ತೆರಳುತ್ತಿದ್ದ ಚಿತ್ರತಂಡಕ್ಕೆ ಅಪಘಾತವಾಗಿದೆ. ಆದರೆ, ವಾಹನದಲ್ಲಿದ್ದ ಎಲ್ಲರೂ ಕ್ಷೇಮವಾಗಿದ್ದಾರೆ ಎಂದು ಚಿತ್ರದ ನಾಯಕಿ ಅದಾ ಶರ್ಮಾ ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼದಿ ಕೇರಳ ಸ್ಟೋರಿʼ ಚಿತ್ರದ ನಿರ್ದೇಶಕ ಸುದಿಪ್ತೋ ಸೇನ್‌, ನಾಯಕಿ ಅದಾ ಶರ್ಮಾ ಸೇರಿದಂತೆ ಚಿತ್ರತಂಡದ ಸದಸ್ಯರು ಭಾನುವಾರ ತೆಲಂಗಾಣದ ಕರೀಂ ನಗರದಲ್ಲಿ ಆಯೋಜಿಸಲಾಗಿದ್ದʼಹಿಂದೂ ಏಕತಾ ಯಾತ್ರಾʼದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದರು. ಈ ವೇಳೆ ಅವರಿದ್ದ ವಾಹನ ಅಪಘಾತಕ್ಕೀಡಾಗಿದ್ದು, ಅದಾ ಶರ್ಮಾ, ಸುದಿಪ್ತೋ ಸೇರಿದಂತೆ ಹವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಆದರೆ, ಅಪಘಾತ ಸಂಭವಿಸಿದ್ದು ಹೇಗೆ ಎಂಬ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಈ ಹಿನ್ನೆಲೆ ಚಿತ್ರತಂಡ ಪಾಲ್ಗೊಳ್ಳಬೇಕಿದ್ದ ʼಹಿಂದೂ ಏಕತಾ ಯಾತ್ರಾʼ ಕೂಡ ರದ್ದಾಗಿದೆ.

ಈ ಸುದ್ದಿ ಓದಿದ್ದೀರಾ? ಟ್ರಾಫಿಕ್‌ನಿಂದ ಪಾರಾಗಲು ಅಪರಿಚಿತನ ಬೈಕ್‌ ಏರಿದ ಅಮಿತಾಬ್‌ ಬಚ್ಚನ್‌

ಅಪಘಾತದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಲೇ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ಅದಾ ಶರ್ಮಾ, “ನಾನು ಕ್ಷೇಮವಾಗಿದ್ದೇನೆ, ಅಪಘಾತದ ಸುದ್ದಿ ಹರಿದಾಡುತ್ತಿರುವುದರಿಂದ ಹಲವಾರು ಮಂದಿ ಸಂದೇಶ ಕಳುಹಿಸಿ ಆರೋಗ್ಯ ವಿಚಾರಿಸುತ್ತಿದ್ದಾರೆ. ಚಿತ್ರತಂಡದ ಎಲ್ಲರೂ ಆರೋಗ್ಯವಾಗಿದ್ದೇವೆ. ಅಂತಹ ದೊಡ್ಡ ಅಪಘಾತವೇನಲ್ಲ, ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಿಮ್ಮ ಕಾಳಜಿಗೆ ಧನ್ಯವಾದ ಎಂದಿದ್ದಾರೆ.

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತʼದಿ ಕೇರಳ ಸ್ಟೋರಿʼ ಚಿತ್ರ ಮೂಡಿಬಂದಿದೆ. ಆದರೆ, ಈ ಚಿತ್ರ ತಿರುಚಿದ ಕಥಾಹಂದರವನ್ನು ಹೊಂದಿದೆ ಎಂಬ ಆರೋಪವಿದೆ. ವಿವಾದಕ್ಕೆ ಕಾರಣವಾಗಿರುವ ಈ ಚಿತ್ರವನ್ನು ಪಶ್ಚಿಮ ಬಂಗಾಳ ಸರ್ಕಾರ ನಿಷೇಧಿಸಿದ್ದು, ತಮಿಳುನಾಡಿನಲ್ಲೂ ಪ್ರದರ್ಶನಗಳು ರದ್ದುಗೊಂಡಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...