ಬೆಂಗಳೂರಿನಲ್ಲಿದ್ದ ನಟ ವಿಷ್ಣುವರ್ಧನ್ ಸ್ಮಾರಕ ನೆಲಸಮ

Date:

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ನಟ ವಿಷ್ಣುವರ್ಧನ್ ಅವರ ಸ್ಮಾರಕವನ್ನು ನೆಲಸಮ ಮಾಡಲಾಗಿದೆ.

ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನು ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಸಮಾಧಿ ಸ್ಥಳಕ್ಕೆ ಅಭಿಮಾನಿಗಳಿಗೆ ಪ್ರವೇಶ ಸಿಗುತ್ತಿಲ್ಲ. ಈಗಾಗಲೇ ಮೈಸೂರಿನಲ್ಲಿ ಅವರ ಸ್ಮಾರಕ ನಿರ್ಮಾಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಷ್ಣುವರ್ಧನ್‌ ಮೃತಪಟ್ಟ ನಂತರ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು. ನಂತರದಲ್ಲಿ ವಿಷ್ಣು ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕವಾಗಿ ಘೋಷಿಸಬೇಕೆಂಬ ಹೋರಾಟ ನಡೆಯುತ್ತಲೇ ಇತ್ತು. ಆದರೆ ಹೈಕೋರ್ಟ್‌ ಸೂಚನೆ ಮೇರೆಗೆ ಸಮಾಧಿಯನ್ನು ತೆರವುಗೊಳಿಸಲಾಗಿದೆ.

ಇದನ್ನು ಓದಿದ್ದೀರಾ? 71ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರಕಟ: ಕನ್ನಡದ ‘ಸನ್‌ಫ್ಲವರ್ಸ್ ವರ್‌ ದಿ ಫಸ್ಟ್ ಒನ್ ಟು ನೋ’ ಕಿರುಚಿತ್ರಕ್ಕೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ

ಸದ್ಯ ಮೈಸೂರಿನಲ್ಲಿ ಈಗಾಗಲೇ ಒಟ್ಟು 2.75 ಎಕರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದೆ. ವಿಷ್ಣು ಸಿನಿಮಾದಲ್ಲಿನ ಪ್ರಶಸ್ತಿಗಳೂ ಸ್ಮಾರಕದ ಮ್ಯೂಸಿಯಂನಲ್ಲಿದೆ. ವಿಷ್ಣು ಪುತ್ಥಳಿಯನ್ನೂ ನಿರ್ಮಿಸಲಾಗಿದೆ. ನಟನ ಚಲನಚಿತ್ರ ಪ್ರಯಾಣದ ಗ್ಯಾಲರಿ, ವಿಷ್ಣು ಅವರ ಅಪರೂಪದ 600ಕ್ಕೂ ಹೆಚ್ಚು ಫೋಟೋಗಳು, ವಿಷ್ಣು ಬಳಸುತ್ತಿದ್ದ ವಸ್ತುಗಳು, ಬಟ್ಟೆ ಇಲ್ಲಿ ನೋಡಬಹುದಾಗಿದೆ.

ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಷ್ಣುವರ್ಧನ್ ಸ್ಮಾರಕಕ್ಕೆ ಸೆಪ್ಟೆಂಬರ್ 15, 2020 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ವಿಷ್ಣು ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಸಭಾಂಗಣ ಕೂಡ ಇಲ್ಲಿ ನಿರ್ಮಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...