ಖೇಲಾ ಚಿತ್ರದ ʼಪುಣ್ಯಾತ್ ಗಿತ್ತೀʼ ಹಾಡಿಗೆ ಭರ್ಜರಿ ಪ್ರತಿಕ್ರಿಯೆ

Date:

ಭರತ್ ಫಿಲಂಸ್ ಲಾಂಛನದಲ್ಲಿ ವಿ ಜೆ ಭರತ್ ನಿರ್ಮಿಸಿ, ನಿರ್ದೇಶಿಸುತ್ತಿರುವ ವಿಭಿನ್ನ ಕಥಾಹಂದರ ಹೊಂದಿರುವ “ಖೇಲಾ” ಚಿತ್ರದ ʼಪುಣ್ಯಾತ್‌ ಗಿತ್ತೀʼ ಹಾಡು ಬಿಡುಗಡೆಯಾಗಿದ್ದು, ಭರ್ಜರಿ ಪ್ರಶಂಸೆ ಗಿಟ್ಟಿಸುತ್ತಿದೆ.

ಖ್ಯಾತ ಗಾಯಕ ವೇಲ್ ಮುರುಗನ್ ಹಾಡಿರುವ ಈ ಹಾಡಿಗೆ ಪ್ರಮೋದ್ ಜೋಯಿಸ್ ಸಾಹಿತ್ಯ ಬರೆದಿದ್ದು, ಎಂ.ಎಸ್ ತ್ಯಾಗರಾಜ್ ಸಂಗೀತ ಸಂಯೋಜಿಸಿದ್ದಾರೆ. ʼಭರತ್‌ ಫಿಲಂಸ್‌ʼ ಯೂಟ್ಯೂಬ್‌ ಚಾನೆಲ್‌ನಲ್ಲಿ ಹಾಡು ಬಿಡುಗಡೆಯಾಗಿದ್ದು, ಈಗಾಗಲೇ 4 ಲಕ್ಷಕ್ಕೂ ಅಧಿಕ ವೀಕ್ಷಣೆ ಪಡೆದಿದೆ.

ʼಶ್ರಾವಣಿ ಸುಬ್ರಹ್ಮಣ್ಯʼ ಹಾಗೂ ʼಮೈನಾʼ ಧಾರಾವಾಹಿಗಳ ಖ್ಯಾತಿಯ ವಿಹಾನ್ ಪ್ರಭಂಜನ್ ನಾಯಕನಾಗಿ ಹಾಗೂ ಆಶಿಕ ರಾವ್ ನಾಯಕಿಯಾಗಿ ನಟಿಸಿದ್ದು, ವಿಶೇಷ ಪಾತ್ರದಲ್ಲಿ ಸಂಗೀತ ಭಟ್, ಯುವರಾಜ್ ಗೌಡ ಸೇರಿದಂತೆ ಯುವ ಕಲಾವಿದರ ತಾರಾಗಣ ಚಿತ್ರಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಚಿತ್ರದ ಕುರಿತು, “ನಾನು ಕನ್ನಡದ ಹಿರಿಯ ನಿರ್ಮಾಪಕ ಹಾಗೂ ನಿರ್ದೇಶಕ ವಿಷ್ಣುಕಾಂತ್ ಅವರ ಪುತ್ರ. ಅಪ್ಪನ ಮಾರ್ಗದರ್ಶನದಲ್ಲಿ ಚೊಚ್ಚಲ ಚಿತ್ರವನ್ನು ನಿರ್ಮಿಸುವುದರ ಜೊತೆಗೆ ನಿರ್ದೇಶನವನ್ನೂ ಮಾಡಿದ್ದೇನೆ. ಪ್ರಮುಖವಾಗಿ ಇದೊಂದು ಪ್ರೇಮ ಕಥಾನಕವಾಗಿದ್ದರೂ, ತಾಯಿ-ಮಗನ ಬಾಂಧವ್ಯ, ಸಸ್ಪೆನ್ಸ್, ಥ್ರಿಲ್ಲರ್ ಜತೆ ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ನಮ್ಮ ಚಿತ್ರದಲ್ಲಿದೆ. ತಾಯಂದಿರ ದಿನದಂದು ಮೊದಲ ಹಾಡು ಬಿಡುಗಡೆಯಾಗಿತ್ತು. ಇಂದು “ಪುಣ್ಯಾತ್ ಗಿತ್ತೀ” ಹಾಡನ್ನು ಬಿಡುಗಡೆ ಮಾಡಿದ್ದೇವೆ. ಎಲ್ಲಾ ಹಾಡುಗಳು ಉತ್ತಮವಾಗಿ ಮೂಡಿ ಬಂದಿದೆ. ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಒಂದು ಹಾಡು ಹಾಗು ಒಂದು ಫೈಟ್ ನ‌ ಚಿತ್ರೀಕರಣ ಮಾತ್ರ ಬಾಕಿ ಇದೆ” ಎಂದು ನಿರ್ಮಾಪಕ ಹಾಗೂ ನಿರ್ದೇಶಕ‌ ಭರತ್ ವಿ.ಜೆ ತಿಳಿಸಿದರು.

ಇದನ್ನೂ ಓದಿ: ʼಮಾದೇವʼ ಪ್ರಿ ರಿಲೀಸ್‌ ಇವೆಂಟ್; ‘ಎದೇಲಿ ತಂಗಾಳಿ’ ಹಾಡು ಬಿಡುಗಡೆ

“ತಾಯಂದಿರ ದಿನದಂದು ಬಿಡುಗಡೆಯಾದ ತಾಯಿ-ಮಗನ ಬಾಂಧವ್ಯದ ಹಾಡು ಈಗಾಗಲೇ ಜನಪ್ರಿಯವಾಗಿದೆ. ಇಂದು ಬಿಡುಗಡೆಯಾಗಿರುವ ʼಪುಣ್ಯಾತ್ ಗಿತ್ತೀʼ ಹಾಡು ಕೂಡ ಎಲ್ಲರ ಮೆಚ್ಚುಗೆ ಪಡೆಯುತ್ತಿದೆ.‌ ನಾನು ಈ ಚಿತ್ರದ ನಾಯಕ .‌ಚಿತ್ರದಲ್ಲಿ ಕಾಲೇಜು ಹುಡುಗ” ಎಂದು ನಾಯಕ ವಿಹಾನ್ ಪ್ರಭಂಜನ್ ಹೇಳಿದರು.

ಚಿತ್ರದಲ್ಲಿ ಐದು ಹಾಡುಗಳಿದ್ದು, ಈ ಹಾಡು ಸೇರಿದಂತೆ ಎರಡು ಹಾಡುಗಳನ್ನು ಪ್ರಮೋದ್ ಜೋಯಿಸ್ ಬರೆದಿದ್ದಾರೆ ಎಂದರು ಸಂಗೀತ ನಿರ್ದೇಶಕ ಎಂ.ಎಸ್.ತ್ಯಾಗರಾಜ್.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...