ಆ. 4ರಂದು ನೆಟ್‌ಫ್ಲಿಕ್ಸ್‌ನಲ್ಲಿ ಬಿಡುಗಡೆಗೊಳ್ಳಲಿದೆ ‘ಕಾಡುಗಳ್ಳ ವೀರಪ್ಪನ್ ಬೇಟೆ’ಯ ಕಥೆ

Date:

  • ಆಗಸ್ಟ್ 4ರಂದು ಬಿಡುಗಡೆಗೊಳಿಸಲಿದೆ ಒಟಿಟಿ ಸಂಸ್ಥೆ ನೆಟ್‌ಫ್ಲಿಕ್ಸ್
  • 108 ದಿನ ಡಾ. ರಾಜ್‌ಕುಮಾರ್ ಅವರನ್ನು ಅಪಹರಿಸಿದ್ದ ವೀರಪ್ಪನ್

ಕರ್ನಾಟಕ ಮತ್ತು ತಮಿಳುನಾಡಿನ ಕಾಡುಗಳಲ್ಲಿ ವಾಸವಿದ್ದ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಕುರಿತ ಕಥೆಯು ನೆಟ್‌ಫ್ಲಿಕ್ಸ್(Netflix)ನಲ್ಲಿ ಬರಲು ಸಿದ್ಧವಾಗಿದೆ.

ಆಗಸ್ಟ್ 4ರಂದು ಬಿಡುಗಡೆಗೊಳಿಸಲಿರುವ ‘ದಿ ಹಂಟ್ ಫಾರ್ ವೀರಪ್ಪನ್‌’ ಡಾಕ್ಯುಮೆಂಟರಿಯ ಟೀಸರ್ ಹಾಗೂ ಟ್ರೇಲರ್ ಅನ್ನು ನೆಟ್‌ಫ್ಲಿಕ್ಸ್ ಈಗಾಗಲೇ ಬಿಡುಗಡೆ ಮಾಡಿದೆ.

ಪೊಲೀಸರು ಮತ್ತು ರಾಜಕಾರಣಿಗಳ ದುಃಸ್ವಪ್ನವಾಗಿದ್ದ ವೀರಪ್ಪನ್‌, ತಮಿಳುನಾಡು, ಕರ್ನಾಟಕ ಮತ್ತು ಕೇರಳದ ಕಾಡುಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದನು. ‘ಕಾಡುಗಳ್ಳ ವೀರಪ್ಪನ್’ ಎಂದೇ ಕುಖ್ಯಾತಿ ಪಡೆದಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಒಬ್ಬ ಕಾಡುಗಳ್ಳ​ನಿಂದ ದೊಡ್ಡ ಡಕಾಯಿತನಾಗುವವರೆಗಿನ ವೀರಪ್ಪನ್ ಪ್ರಯಾಣ, ಇಡೀ ದೇಶವೇ ತನ್ನತ್ತ ನೋಡುವತ್ತ ಮಾಡಿದ್ದ ಕುಖ್ಯಾತ ಮಾನವ ಬೇಟೆಯ ಕತೆ ತೆರೆಯ ಮೇಲೆ ಬರಲಿದೆ’ ಎಂದು ನೆಟ್‌ಫ್ಲಿಕ್ಸ್ ಟೀಸರ್ ಅನ್ನು ಹಂಚಿಕೊಂಡಿತ್ತು.

‘ಪತಿ, ತಂದೆ, ನಾಯಕ ಮತ್ತು ವಾಟೆಂಡ್ ಕ್ರಿಮಿನಲ್ ಅಲ್ಲದೆ, ಉದ್ದ ಮತ್ತು ದಪ್ಪ ಮೀಸೆ ಮತ್ತು ಮುಖದ ತುಂಬ ಮೂಳೆಗಳೇ ಕಾಣಿಸುವಂತ ವ್ಯಕ್ತಿಯ ಚಿತ್ರಣವು ಪ್ರಸಿದ್ಧವಾಗಿದ್ದರೂ, ವೀರಪ್ಪನ್‌ ಜೀವನದ ಇತರ ಹಲವು ಅಂಶಗಳು ದಕ್ಷಿಣ ಭಾರತದ ಕರಾಳ ಕಾಡುಗಳಲ್ಲಿ ಮರೆಯಾಗಿವೆ. ಈ ವೆಬ್ ಸರಣಿಯು ಈ ಸಾಹಸಗಾಥೆಯನ್ನು ಅವರಿಗೆ ಹತ್ತಿರವಿರುವವರಿಂದ ಹೊರ ಜಗತ್ತಿಗೆ ತಿಳಿಸಲು ಶ್ರಮಿಸಿದೆ’ ಎಂದು ನೆಟ್‌ಫ್ಲಿಕ್ಸ್‌ ಹೇಳಿದೆ.

ಕನ್ನಡದ ವರನಟ ಡಾ. ರಾಜ್‌ಕುಮಾರ್ ಅನ್ನು ಅಪಹರಿಸಿದ್ದ ವೀರಪ್ಪನ್

ವೀರಪ್ಪನ್ ಹೆಚ್ಚು ಚರ್ಚೆಗೊಳಗಾದದ್ದು ಡಾ. ರಾಜ್‌ಕುಮಾರ್ ಅವರನ್ನು ಅಪಹರಿಸಿದ ಬಳಿಕ. 2000ನೇ ಇಸವಿಯ ಜುಲೈ 30ರ ರಾತ್ರಿ ಪತ್ನಿ ಪಾರ್ವತಮ್ಮ ಅವರೊಂದಿಗೆ ತಮ್ಮ ಹುಟ್ಟೂರು ಗಾಜನೂರಿಗೆ ಹೋಗಿದ್ದ ಡಾ. ರಾಜ್ ಕುಮಾರ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ಆ ಸುದ್ದಿ ರಾಜ್ಯದ ಜನತೆಗೆ ಮರುದಿನ ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿತ್ತು. ಈ ಘಟನೆ ನಡೆದ 108 ದಿನಗಳ ಬಳಿಕ ರಾಜ್ ಕುಮಾರ್ ಬಿಡುಗಡೆಯಾಗಿ ಮನೆಗೆ ಮರಳಿದ್ದರು. ರಾಜ್ ಕುಮಾರ್ ಅವರೊಂದಿಗೆ ಅವರ ಅಳಿಯ ಎಸ್‌ಎ ಗೋವಿಂದರಾಜ್, ಸಹ ನಿರ್ದೇಶಕ ನಾಗಪ್ಪ ಮಾರಡಗಿ, ಸಂಬಂಧಿ ನಾಗೇಶ್ ಅವರನ್ನು ವೀರಪ್ಪನ್ ಅಪಹರಿಸಿದ್ದ. ರಾಜ್ ಕುಮಾರ್ ಅಪಹರಣದ ಸಂದರ್ಭದಲ್ಲಿ ರಾಜ್ಯದಾದ್ಯಂತ ಗದ್ದಲ, ಪ್ರತಿಭಟನೆ, ಕೋಲಾಹಲವೇ ಸೃಷ್ಟಿಯಾಗಿತ್ತು.

drrajkumar

‘ದಿ ಹಂಟ್ ಫಾರ್ ವೀರಪ್ಪನ್’ ಅನ್ನು ಸೆಲ್ವಮಣಿ ಸೆಲ್ವರಾಜ್ ನಿರ್ದೇಶಿಸಿದ್ದಾರೆ. ಅವೇಡಸಿಯಸ್ ಒರಿಜಿನಲ್ಸ್‌ನ ಅಪೂರ್ವ ಬಕ್ಷಿ ಮತ್ತು ಮೋನಿಶಾ ತ್ಯಾಗರಾಜನ್ ನಿರ್ಮಿಸಿದ್ದಾರೆ. ಈ ವೆಬ್ ಸರಣಿಗೆ ವೀರಪ್ಪನ್ ಹೆಸರು ಬಳಸದಂತೆ ಆತನ ಪತ್ನಿ ಮುತ್ತುಲಕ್ಷ್ಮೀ ಮೊದಲು ವಿರೋಧ ವ್ಯಕ್ತಪಡಿಸಿದ್ದರು.

‘ದಿ ಹಂಟ್ ಫಾರ್ ವೀರಪ್ಪನ್’ನಲ್ಲಿ ಮುತ್ತುಲಕ್ಷ್ಮೀ ಸಹಿತ ವೀರಪ್ಪನ್ ಎನ್‌ಕೌಂಟರ್‌ನಲ್ಲಿ ಭಾಗಿಯಾಗಿದ್ದ ಹಲವು ನಿವೃತ್ತ ಪೊಲೀಸ್ ಅಧಿಕಾರಿಗಳು ಮಾತನಾಡಿದ್ದಾರೆ.

ವೀರಪ್ಪನ್ ಸೆರೆ ಕಾರ್ಯಾಚರಣೆ ಭಾರತದ ಅತ್ಯಂತ ದೀರ್ಘಾವಧಿಯ ಮತ್ತು ದುಬಾರಿ ಮಾನವ ಬೇಟೆಗಳಲ್ಲಿ ಒಂದಾಗಿದೆ. ಈ ವೆಬ್ ಸರಣಿಯು ನಾಲ್ಕು ಭಾಗಗಳಾಗಿದ್ದು, ತಮಿಳು, ಇಂಗ್ಲಿಷ್, ಹಿಂದಿ, ಕನ್ನಡ, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಲಭ್ಯವಿರಲಿದೆ ಎಂದು ಒಟಿಟಿ ಸಂಸ್ಥೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...