ಸೆಟ್ಟೇರಿತು ಜೂನಿಯರ್‌ ಎನ್‌ಟಿಆರ್‌ 30ನೇ ಚಿತ್ರ

Date:

  • ಜೂನಿಯರ್‌ ಎನ್‌ಟಿಆರ್‌ಗೆ ಜೊತೆಯಾದ ಜಾಹ್ನವಿ ಕಪೂರ್‌
  • ಚಿತ್ರತಂಡಕ್ಕೆ ಶುಭ ಹಾರೈಸಿದ ಪ್ರಶಾಂತ್‌ ನೀಲ್‌, ರಾಜಮೌಳಿ

ತೆಲುಗಿನ ಸ್ಟಾರ್‌ ನಟ ಜೂನಿಯರ್‌ ಎನ್‌ಟಿಆರ್‌ ʼಆರ್‌ಆರ್‌ಆರ್‌ʼ ಸಿನಿಮಾದ ಯಶಸ್ಸಿನ ಬಳಿಕ ಸಾಲು ಸಾಲು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ಅವರ 30ನೇ ಚಿತ್ರದ ಮುಹೂರ್ತ ಅದ್ದೂರಿಯಾಗಿ ನೆರವೇರಿದೆ.

ಕಳೆದ ಕೆಲ ತಿಂಗಳ ಹಿಂದಷ್ಟೇ ಜೂನಿಯರ್‌ ಎನ್‌ಟಿಆರ್‌ ತಾವು ತೆಲುಗಿನ ಖ್ಯಾತ ನಿರ್ದೇಶಕ ಕೊರಟಾಲ ಶಿವ ಅವರೊಂದಿಗೆ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ಇತ್ತೀಚೆಗೆ ಬಿಡುಗಡೆಯಾಗಿದ್ದ ಚಿತ್ರದ ವಿಶೇಷ ಪೋಸ್ಟರ್‌ ಸಿನಿ ರಸಿಕರ ಕುತೂಹಲ ಕೆರಳಿಸಿತ್ತು. ಜೊತೆಗೆ ಬಾಲಿವುಡ್‌ನ ಬಹು ಬೇಡಿಕೆಯ ನಟಿ ಜಾಹ್ನವಿ ಕಪೂರ್‌ ಈ ಚಿತ್ರದಲ್ಲಿ ನಾಯಕ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಯನ್ನು ಕೂಡ ಚಿತ್ರತಂಡ ಬಹಿರಂಗ ಪಡಿಸಿತ್ತು.

ಗುರುವಾರ ಹೈದರಾಬಾದ್‌ನಲ್ಲಿ ಚಿತ್ರದ ಮುಹೂರ್ತ ಸಮಾರಂಭ ಅದ್ದೂರಿಯಾಗಿ ಜರುಗಿದ್ದು, ಚಿತ್ರದ ನಾಯಕ ಜೂನಿಯರ್‌ ಎನ್‌ಟಿಆರ್‌, ನಾಯಕಿ ಜಾಹ್ನವಿ ಕಪೂರ್‌, ನಿರ್ದೇಶಕ ಕೊರಟಾಲ ಶಿವ, ಸಂಗೀತ ನಿರ್ದೇಶಕ ಅನಿರುದ್ಧ್‌ ರವಿಚಂದ್ರನ್‌, ಪ್ರಕಾಶ್‌ ರಾಜ್‌ ಸೇರಿದಂತೆ ಚಿತ್ರತಂಡದ ಹಲವರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದ ‘ಆರ್‌ಆರ್‌ಆರ್‌’ ಖ್ಯಾತಿಯ ನಿರ್ದೇಶಕ ರಾಜಮೌಳಿ ಮತ್ತು ‘ಕೆಜಿಎಫ್‌’ ಖ್ಯಾತಿಯ ನಿರ್ದೇಶಕ ಪ್ರಶಾಂತ್‌ ನೀಲ್‌ ಚಿತ್ರೀಕರಣಕ್ಕೆ ಚಾಲನೆ ನೀಡಿ, ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮುಹೂರ್ತದ ಬಳಿಕ ಮಾತನಾಡಿರುವ ಕೊರಟಾಲ ಶಿವ, “ಚಿತ್ರದಲ್ಲಿ ನಿರ್ಲಕ್ಷ್ಯಕ್ಕೊಳಪಟ್ಟ ಭಾರತದ ಕರಾವಳಿ ತೀರದ ಜನರ ಕಥೆಯನ್ನು ಹೇಳುವ ಪ್ರಯತ್ನದಲ್ಲಿದ್ದೇನೆ. ನಾಗರಿಕ ಪ್ರಪಂಚದ ಪರಿಚಯವೇ ಇರದ ಜನರ ಕಥೆ ಇದೆ. ನನ್ನ ವೃತ್ತಿ ಬದುಕಿನಲ್ಲಿ ಮೈಲಿಗಲ್ಲಾಗಿ ಉಳಿಯುಂಥ ಕಥೆ ಇದು” ಎಂದು ಚಿತ್ರದ ಬಗ್ಗೆ ಭರವಸೆ ವ್ಯಕ್ತಪಡಿಸಿದ್ದಾರೆ.

ಕೊರಟಾಲ ಶಿವ ಈ ಹಿಂದೆ ಜೂನಿಯರ್‌ ಎನ್‌ಟಿಆರ್‌ ನಟನೆಯ ʼಜನತಾ ಗ್ಯಾರೇಜ್‌ʼ ಚಿತ್ರವನ್ನು ನಿರ್ದೇಶಿಸಿದ್ದರು. ಕಡಲ ಕಥನದ ಮೂಲಕ ಈ ಹಿಟ್‌ ಜೋಡಿ ಮತ್ತೆ ಒಂದಾಗಿದ್ದು, ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿದೆ. ಇನ್ನೂ ಹೆಸರಿಡದ ಈ ಚಿತ್ರ ಪ್ಯಾನ್‌ ಇಂಡಿಯಾ ಮಾದರಿಯಲ್ಲಿ ಸಿದ್ಧಗೊಳ್ಳುತ್ತಿದ್ದು, ಬಾಲಿವುಡ್‌ನ ಖ್ಯಾತ ನಟ ಸೈಫ್‌ ಅಲಿಖಾನ್‌ ಖಳನ ಪಾತ್ರದಲ್ಲಿ ನಟಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಬಹುಭಾಷಾ ನಟ ಪ್ರಕಾಶ್‌ ರಾಜ್‌ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹರಿಕೃಷ್ಣ ಕೆ ಮತ್ತು ಸುಧಾಕರ್‌ ಮಿಕ್ಕಿಲಿನೇನಿ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಸಿನಿಮಾ, 2024 ಏಪ್ರಿಲ್‌ ವೇಳೆಗೆ ತೆರೆಗೆ ಬರುವ ಸಾಧ್ಯತೆ ಇದೆ.

f1fabf4f0e4ab96da4f5d26f3bc2b89e
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...