ಗೋವಾ ಚಿತ್ರೋತ್ಸವ | ‘ದ ಕೇರಳ ಸ್ಟೋರಿ’ ಚಿತ್ರ ಪ್ರದರ್ಶನಕ್ಕೆ ವಿರೋಧ: ಕರಪತ್ರ ಹಂಚಿದವರ ಬಂಧನ

Date:

ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ಸುದಿಪ್ತೋ ಸೇನ್ ಅವರ ವಿವಾದಾತ್ಮಕ ಚಲನಚಿತ್ರ ‘ದ ಕೇರಳ ಸ್ಟೋರಿ’ ಸಿನಿಮಾದ ಪ್ರದರ್ಶನವನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟಿಸಿದ ಕೇರಳದ ಇಬ್ಬರು ಪ್ರತಿನಿಧಿಗಳನ್ನು ಪಣಜಿ ಪೊಲೀಸ್ ಠಾಣೆಯಲ್ಲಿ ಒಂದು ಗಂಟೆಗಳ ಕಾಲ ಬಂಧಿಸಿಟ್ಟಿದ್ದ ಘಟನೆ ವರದಿಯಾಗಿದೆ.

‘ದ ಕೇರಳ ಸ್ಟೋರಿ’ ಸಿನಿಮಾವು ಸುಳ್ಳು ಬಂಡಲ್ ಕತೆಯನ್ನು ಒಳಗೊಂಡಿದೆ. ಚಿತ್ರದ ಮೂಲದ ಬಗ್ಗೆ ನಿರ್ದೇಶಕರು ಈವರೆಗೆ ತಿಳಿಸಿಲ್ಲ. ಹಾಗಾಗಿ ಸಿನಿಮಾ ಪ್ರದರ್ಶನವನ್ನು ವಿರೋಧಿಸಿ ಕೇವಲ ಕರಪತ್ರ ಹಿಡಿದಿದ್ದರೆಂಬ ಕಾರಣಕ್ಕೆ ಗೋವಾ ಪೊಲೀಸರು ಶ್ರೀನಾಥ್ ಮತ್ತು ಅರ್ಚನಾ ರವಿ ಎಂಬುವವರನ್ನು ಸೋಮವಾರ(ನ.27) ಸಂಜೆಯ ವೇಳೆಗೆ ಒಂದು ಗಂಟೆ ಬಂಧನದಲ್ಲಿ ಇಟ್ಟಿದ್ದರು ಎಂದು ವರದಿಯಾಗಿದೆ.

2023ರ ವರ್ಷ ಮೇ 5ರಂದು ಬಿಡುಗಡೆಯಾಗಿದ್ದ ‘ದ ಕೇರಳ ಸ್ಟೋರಿ’ ಚಿತ್ರವು ತಪ್ಪು ಮಾಹಿತಿ ಮತ್ತು ಮುಸ್ಲಿಮರ ವಿರುದ್ಧ ಉದ್ದೇಶಿತ ದ್ವೇಷ ಪ್ರಚಾರವನ್ನು ಬಿಚ್ಚಿಟ್ಟಿದೆ ಎಂದು ಆರೋಪ ಕೇಳಿ ಬಂದಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕೇರಳದಿಂದ ಬಂದಿದ್ದ ಪ್ರತಿನಿಧಿಗಳಾಗಿ ಬಂದಿದ್ದ ಚಿತ್ರ ಕಲಾವಿದೆ ಅರ್ಚನಾ ರವಿ ಮತ್ತು ಸಾಕ್ಷ್ಯಚಿತ್ರ ನಿರ್ಮಾಪಕ ಶ್ರೀನಾಥ್ ಎಂಬುವವರು ಕೇರಳ ಸ್ಟೋರಿ ಕಥೆಯನ್ನು ವ್ಯಂಗ್ಯವಿರುವ ಮೀಮ್‌ಗಳ ಪ್ರತಿಗಳನ್ನು ಜನರಿಗೆ ಹಂಚಿ ತಮ್ಮ ವಿರೋಧ ಸೂಚಿಸಿದ್ದಾರೆ. ಅಲ್ಲದೇ, ಸುದಿಪ್ತೋ ಸೇನ್ ಅವರ ಸಂದರ್ಶನ ವೇಳೆ ಕೂಡ ಭಾಗವಹಿಸಿ ಇತರ ಪ್ರತಿನಿಧಿಗಳಿಗೆ ಮೀಮ್‌ಗಳನ್ನು ವಿತರಿಸಿದರು. ಅಲ್ಲದೇ, ಖುದ್ದು ನಿರ್ದೇಶಕ ಸುದಿಪ್ತೋ ಸೇನ್‌ಗೂ ವಿತರಿಸಿದ್ದಾರೆ.

WhatsApp Image 2023 11 28 at 6.39.44 PM
ಜನರಿಗೆ ವಿತರಿಸಿದ್ದ ಮೀಮ್

“ಸುದಿಪ್ತೋ ಸೇನ್: ದಿ ಕೇರಳ ಸ್ಟೋರಿ, ಮೂಲ: ನನ್ನನ್ನು ನಂಬು ಬ್ರೋ!” ಎಂಬ ಶೀರ್ಷಿಕೆಯೊಂದಿಗೆ ವಿಚಿತ್ರವಾದ ಬೊಂಬೆ ಕೋತಿಯ ಜನಪ್ರಿಯ ಟೆಂಪ್ಲೇಟ್ ಅನ್ನು ಈ ಮೀಮ್ ಒಳಗೊಂಡಿತ್ತು.

ಇವರಿಬ್ಬರ ಶಾಂತಿಯುತ ಪ್ರತಿಭಟನೆಯನ್ನು ಗಮನಿಸಿದ ನಂತರ ಚಿತ್ರದ ನಿರ್ದೇಶಕ ಸುದಿಪ್ತೋ ಅವರೊಂದಿಗೆ ಮಾತಿನ ಚಕಮಕಿ ಕೂಡ ಕೆಲ ನಿಮಿಷಗಳವರೆಗೆ ನಡೆಸಿದ ಬಗ್ಗೆ ಕೇರಳದ ಪ್ರತಿನಿಧಿಗಳು ಇನ್‌ಸ್ಟಾಗ್ರಾನ್‌ ಲೈವ್ ಅಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಬೆಳವಣಿಗೆಯ ನಂತರ ಪೊಲೀಸರು ಮಧ್ಯಪ್ರವೇಶಿಸಿ, ಅವರನ್ನು ಠಾಣೆಗೆ ಕರೆದೊಯ್ದು, ಒಂದು ಗಂಟೆಗಳ ಕೂರಿಸಿದ್ದರು. ಸುದೀಪ್ತೋ ಅವರು ದೂರು ನೀಡಿದ ಬಳಿಕ ಚಲನಚಿತ್ರೋತ್ಸವದ ಸಂಘಟಕರು ತಮ್ಮ ಪಾಸ್‌ಗಳನ್ನು ಕಿತ್ತುಕೊಳ್ಳಲಾಯಿತು ಎಂದು ಶ್ರೀನಾಥ್ ಟ್ವಿಟ್ಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.

“ನೀವು ದ್ವೇಷವನ್ನು ಹರಡುತ್ತಿರುವುದರಿಂದ ನೀವು ಇದನ್ನು ಮಾಡಬಾರದು ಎಂದು ಪೊಲೀಸರು ಹೇಳಿದ್ದಾರೆ. ಆದರೆ ವಾಸ್ತವವಾಗಿ ನಾವು ದ್ವೇಷವನ್ನು ವಿರೋಧಿಸುತ್ತಿದ್ದೇವೆ. ಕೇರಳ ಸ್ಟೋರಿ ಕೇರಳದ ಜನರ ವಿರುದ್ಧ ದ್ವೇಷ ಪ್ರಚಾರದ ಚಿತ್ರವಾಗಿದೆ. ಹಾಗಾಗಿ, ಅದನ್ನು ನೋಡಿಯೂ ನಾವು ಸುಮ್ಮನೆ ಕೂರುವುದಿಲ್ಲ. ನಾವು ಕೇರಳದವರು. ಅಲ್ಪಸಂಖ್ಯಾತರ ವಿರುದ್ಧ ದ್ವೇಷ ಹರಡುವ ಚಲನಚಿತ್ರದ ವಿರುದ್ಧ ನಿಂತಿದ್ದೇವೆ” ಎಂದು ಶ್ರೀನಾಥ್ ಹೇಳಿದರು.

ಕಳೆದ ವರ್ಷ ಗೋವಾದಲ್ಲಿ ನಡೆದಿದ್ದ ಚಲನಚಿತ್ರೋವದಲ್ಲಿ ಮತ್ತೋರ್ವ ವಿವಾದಾತ್ಮಕ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಯವರ ದಿ ಕಾಶ್ಮೀರ್ ಫೈಲ್ಸ್‌ ಚಿತ್ರವನ್ನು ತೀರ್ಪುಗಾರರ ಸಮಿತಿಯ ಮುಖ್ಯಸ್ಥ, ಇಸ್ರೇಲಿ ಚಲನಚಿತ್ರ ನಿರ್ಮಾಪಕ ನಾದವ್ ಲ್ಯಾಪಿಡ್, “ಅಶ್ಲೀಲ” ಮತ್ತು “ಪ್ರೊಪಗ್ಯಾಂಡ ಚಲನಚಿತ್ರ” ಎಂದು ಉಲ್ಲೇಖಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...