ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದ ಯೋಗಿ ಸರ್ಕಾರ

Date:

ವಿವಾದಿತ ಚಿತ್ರ ಪಶ್ಚಿಮ ಬಂಗಾಳದಲ್ಲಿ ನಿಷೇಧ

ತಮಿಳುನಾಡಿನಲ್ಲೂ ಚಿತ್ರದ ಪ್ರದರ್ಶನಗಳು ರದ್ದು

ವಿವಾದಾತ್ಮಕ ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ದೇಶಾದ್ಯಂತ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವಾಗಲೇ ಮಧ್ಯಪ್ರದೇಶ ಮತ್ತು ಉತ್ತರಪ್ರದೇಶ ಸರ್ಕಾರಗಳು ಚಿತ್ರಕ್ಕೆ ಬೆಂಬಲ ಸೂಚಿಸಿ, ತೆರಿಗೆ ವಿನಾಯಿತಿ ಘೋಷಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಿರುಚಿದ ಕಥಾಹಂದರವನ್ನು ಹೊಂದಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಮೂಲಕ ದೇಶವ್ಯಾಪಿಯಾಗಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಯಾಗಿಸಿ ದ್ವೇಷ ಹರಡುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆಕ್ಷೇಪಗಳು ಕೇಳಿ ಬರುತ್ತಿರುವಾಗಲೇ ಟ್ವೀಟ್‌ ಮಾಡಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, “ಉತ್ತರಪ್ರದೇಶದಲ್ಲಿ ʼದಿ ಕೇರಳ ಸ್ಟೋರಿʼ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗುವುದು” ಎಂದು ಘೋಷಿಸಿದ್ದಾರೆ. ಈ ಹಿಂದೆ ಮಧ್ಯಪ್ರದೇಶ ಸರ್ಕಾರ ಕೂಡ ವಿವಾದಿತ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿತ್ತು.

ಬಿಜೆಪಿ ಆಡಳಿತವಿರುವ ಎರಡು ರಾಜ್ಯಗಳಲ್ಲಿ ಈ ವಿವಾದಿತ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಿದರೆ, ಪಶ್ಷಿಮ ಬಂಗಾಳ ಸರ್ಕಾರ ಚಿತ್ರದ ಪ್ರದರ್ಶನಕ್ಕೆ ರಾಜ್ಯದಲ್ಲಿ ನಿಷೇಧ ಹೇರಿದೆ. ತಿರುಚಿದ ಕಥೆಯನ್ನು ಹೊಂದಿರುವ ಈ ಚಿತ್ರ ಕೇರಳದ ಘನತೆಗೆ ಧಕ್ಕೆ ತರುವಂಥದ್ದು, ಈ ಚಿತ್ರ ರಾಜ್ಯದಲ್ಲಿ ಪ್ರದರ್ಶನ ಕಂಡರೆ ದ್ವೇಷ ಹರಡುವ ಸಾಧ್ಯತೆ ಇದೆ. ಶಾಂತಿಯನ್ನು ಕಾಪಾಡುವ ನಿಟ್ಟಿನಲ್ಲಿ ʼದಿ ಕೇರಳ ಸ್ಟೋರಿʼ ಪ್ರದರ್ಶನವನ್ನು ನಿಷೇಧಗೊಳಿಸಲಾಗಿದೆ” ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇನ್ನು ತಮಿಳುನಾಡಿನಲ್ಲೂ ʼದಿ ಕೇರಳ ಸ್ಟೋರಿʼ ಪ್ರದರ್ಶನಗಳು ರದ್ದಾಗುತ್ತಿವೆ. ರಾಜ್ಯದೆಲ್ಲೆಡೆ ಚಿತ್ರಮಂದಿರದ ಮಾಲೀಕರೇ ಸ್ವಯಂ ಪ್ರೇರಿತರಾಗಿ ಪ್ರದರ್ಶನಗಳನ್ನು ರದ್ದು ಪಡಿಸಿದ್ದಾರೆ. ಕೇರಳದಲ್ಲಂತೂ ಈ ಚಿತ್ರಕ್ಕೆ ಭಾರೀ ವಿರೋಧ ವ್ಯಕ್ತವಾಗುತ್ತಿದ್ದು, ಇದೇ ಸಂದರ್ಭದಲ್ಲಿ 2018ರ ಕೇರಳ ಪ್ರವಾಹದ ಸುತ್ತ ಮೂಡಿಬಂದಿರುವ ಮಲಯಾಳಂನ ʼ2018ʼ ಚಿತ್ರವನ್ನು ಬೆಂಬಲಿಸಿ, ಇದು ನಿಜವಾದ ಕೇರಳ ಸ್ಟೋರಿ ಎಂದು ನೆಟ್ಟಿಗರು ಹೊಸ ಅಭಿಯಾನ ಪ್ರಾರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಶ್ಚಿಮ ಬಂಗಾಳದಲ್ಲಿ ʼದಿ ಕೇರಳ ಸ್ಟೋರಿʼ ಸಿನಿಮಾ ಪ್ರದರ್ಶನ ನಿಷೇಧ

ಕೇರಳದ ಯುವತಿಯರನ್ನು ಬಲವಂತವಾಗಿ ಮತಾಂತರಿಸಿ ಭಯೋತ್ಪಾದಕ ಸಂಘಟನೆ ʼಐಸಿಸ್‌ʼಗೆ ಸೇರ್ಪಡೆ ಮಾಡಲಾಗಿದೆ ಎಂಬ ಎಳೆಯ ಸುತ್ತ ʼದಿ ಕೇರಳ ಸ್ಟೋರಿʼ ಚಿತ್ರದ ಕಥೆ ಮೂಡಿಬಂದಿದೆ. ಆದರೆ, 32 ಸಾವಿರ ಯುವತಿಯರು ಮತಾಂತರಕ್ಕೊಳಗಾಗಿ ಭಯೋತ್ಪಾದನೆಗೆ ಬಲವಂತವಾಗಿ ತಳ್ಳಲ್ಪಟ್ಟಿದ್ದಾರೆ ಎಂದು ತಿರುಚಿದ ಕಥೆಯನ್ನು ಟೀಸರ್‌ನಲ್ಲಿ ತೋರಿಸಲಾಗಿತ್ತು. ಟೀಸರ್‌ ವಿವಾದಕ್ಕೆ ಸಿಲುಕಿಕೊಂಡು, ಸಿನಿಮಾ ನಿಷೇಧಿಸುವಂತೆ ಜನ ಕೋರ್ಟ್‌ ಮೆಟ್ಟಿಲೇರುತ್ತಲೇ ವರಸೆ ಬದಲಿಸಿದ್ದ ಚಿತ್ರತಂಡ, ಮತಾಂತರಕ್ಕೊಳಗಾಗಿದ್ದ ಮೂರು ಜನ ಮಹಿಳೆಯರʼ ಕಥೆ ಇದು ಎಂದು ಹೇಳಿಕೊಂಡಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...