ಹೊಸ ಸಂಸತ್‌ ಭವನದಲ್ಲಿ ಪ್ರಜಾಪ್ರಭುತ್ವದ ಸಂಭ್ರಮಾಚರಣೆ ನಡೆಯಲ್ಲ ; ವಿಶಾಲ್‌ ದದ್ಲಾನಿ

Date:

ಲಾಕ್‌ಡೌನ್‌ನಲ್ಲೂ ಜಾರಿಯಲ್ಲಿದ್ದ ಹೊಸ ಸಂಸತ್‌ ಭವನದ ಕಾಮಗಾರಿ

ಜನರ ಕಲ್ಯಾಣಕ್ಕಿಂತ ಪ್ರಚಾರ ಮುಖ್ಯ ಎಂದುಕೊಂಡವರದ್ದು ಹುಚ್ಚುತನ

ಬಹುಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ದೆಹಲಿಯ ಹೊಸ ಸಂಸತ್‌ ಭವನ ಭಾನುವಾರ ಉದ್ಘಾಟನೆಗೊಳ್ಳಲಿದೆ. ರಾಷ್ಟ್ರಪತಿಗಳ ಬದಲಿಗೆ ಪ್ರಧಾನಿ ನರೇಂದ್ರ ಮೋದಿ ಈ ನೂತನ ಸಂಸತ್‌ ಭವನವನ್ನು ಉದ್ಘಾಟನೆ ಮಾಡುತ್ತಿರುವುದಕ್ಕೆ ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ಇದೇ ಹೊತ್ತಿನಲ್ಲಿ ಬಾಲಿವುಡ್‌ನ ಖ್ಯಾತ ಸಂಗೀತ ವಿಶಾಲ್‌ ದದ್ಲಾನಿ ನೂತನ ಸಂಸತ್‌ ಭವನದ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೊಸ ಸಂಸತ್‌ ಭವನದ ಬಗ್ಗೆ ಟ್ವೀಟ್‌ ಮಾಡಿರುವ ವಿಶಾಲ್‌ ದದ್ಲಾನಿ, “ಹೀಗೆ ಹೇಳುತ್ತಿರುದಕ್ಕೆ ಕ್ಷಮಿಸಿ. ಆದರೆ, ಅಗತ್ಯ ಆರೋಗ್ಯ ಸೇವೆಗಳು ಸಿಗದೆ ನೂರಾರು, ಸಾವಿರಾರು ಜನರು ಸಾಯುತ್ತಿರುವ ಹೊತ್ತಿನಲ್ಲಿ ಸಾರ್ವಜನಿಕರ 20 ಸಾವಿರ ಕೋಟಿ ಹಣದಿಂದ ನಿರ್ಮಾಣವಾಗಿರುವ ಈ ಕಟ್ಟಡದಲ್ಲಿ ʼಪ್ರಜಾಪ್ರಭುತ್ವದ ಸಂಭ್ರಮಾಚರಣೆʼ ನಡೆಯುವುದಿಲ್ಲ. ಜನರ ಕಲ್ಯಾಣಕ್ಕಿಂತ ಪ್ರಚಾರವೇ ಮುಖ್ಯ ಎಂದುಕೊಂಡವರದ್ದು ಹುಚ್ಚುತನವಷ್ಟೇ” ಎಂದು ಪ್ರಧಾನಿ ಮೋದಿ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಿರಿಯ ಪತ್ರಕರ್ತ ಆರ್‌ ಪ್ರಸಾದ್‌ ಎಂಬುವವರು ವಿಶಾಲ್‌ ಅವರ ಟ್ವೀಟ್‌ಗೆ ಧ್ವನಿಗೂಡಿಸಿ, “ಕೊರೊನಾ ಎರಡನೇ ಅಲೆಯ ಸಂದರ್ಭದಲ್ಲಿ ಲಕ್ಷಾಂತರ ಜನರು ಸಾವಿಗೀಡಾದರು. ದೆಹಲಿ ಕೂಡ ಲಾಕ್‌ಡೌನ್‌ ಆಗಿತ್ತು. ಎಲ್ಲ ನಿರ್ಮಾಣ ಕಾಮಗಾರಿಗಳನ್ನು ನಿರ್ಬಂಧಿಸಲಾಗಿತ್ತು. ಅಂತಹ ಸಂದರ್ಭದಲ್ಲಿ ʼಸೆಂಟ್ರಲ್‌ ವಿಸ್ತಾʼ (ಹೊಸ ಸಂಸತ್‌ ಭವನ) ನಿರ್ಮಾಣ ಕಾಮಗಾರಿಯನ್ನು ಮಾತ್ರ ʼಅತ್ಯಗತ್ಯ ಸೇವೆʼ ಎಂದು ಘೋಷಿಸಲಾಯಿತು. ಈ ಕಟ್ಟಡದ ನಿರ್ಮಾಣಕ್ಕೆ ಜನರನ್ನು ಕರೆತರುವ ಸಲುವಾಗಿ 180 ವಾಹನಗಳ ಸಂಚಾರಕ್ಕೆ ಅನುಮತಿ ನೀಡಲಾಗಿತ್ತು” ಎಂದು ಕೊರೊನಾ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಕಾರ್ಮಿಕರನ್ನು ಅಮಾನವೀಯವಾಗಿ ನಡೆಸಿಕೊಂಡ ರೀತಿಯನ್ನು ವಿವರಿಸಿದ್ದಾರೆ.

ಕೊರೊನಾ ಲಾಕ್‌ಡೌನ್‌ ಸಂದರ್ಭದಲ್ಲೂ ನೂತನ ಸಂಸತ್‌ ಭವನದ ನಿರ್ಮಾಣ ಕಾರ್ಯ ಚಾಲ್ತಿಯಲ್ಲಿದ್ದ ಬಗ್ಗೆ ಪ್ರಸಾದ್‌ ಟ್ವೀಟ್‌ ಮಾಡುತ್ತಲೇ, ಆ ಟ್ವೀಟ್‌ ಅನ್ನು ಉಲ್ಲೇಖಿಸಿ ಮತ್ತೊಂದು ಟ್ವೀಟ್‌ ಮಾಡಿರುವ ವಿಶಾಲ್‌, “ಜನ ಬೀದಿಗಳಲ್ಲಿ ಸಾಯುತ್ತಿದ್ದ ಸಂದರ್ಭದಲ್ಲಿ ಈ ಕಟ್ಟಡದ ನಿರ್ಮಾಣ ಕಾರ್ಯವೇ ಸರ್ಕಾರಕ್ಕೆ ಮುಖ್ಯವಾಗಿತ್ತು. ನಿಜಕ್ಕೂ ದುರದೃಷ್ಟಕರ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒನ್ ಬ್ಯಾಟಲ್ ಆಫ್ಟರ್ ಅನದರ್ | ಸಾಧಾರಣ ಚಿತ್ರಕ್ಕೆ ಆಸ್ಕರ್ ಚಿನ್ನದ ಚೌಕಟ್ಟು!

ವಲಸೆಯಂತಹ ಜ್ವಲಂತ ಸಮಸ್ಯೆಯನ್ನು ಹೇಳುವ ರಾಜಕೀಯ ಚಿತ್ರವೆನಿಸಿದರೂ; ಕ್ರಾಂತಿಕಾರಿ ಚಟುವಟಿಕೆಗಳ ಕುರಿತು...

“ತಾಯಿನೇ ಎಲ್ಲಾ” ಎಂದಿದ್ದ ಪ್ರೇಮ್, ಈಗ “ಸರ್ಸೆ ನಿನ್ನ ಸೆರಗ” ಅಂತಾರೆ!; ಭಾರೀ ಟೀಕೆಗೆ ಗುರಿಯಾದ ʼಕೆಡಿ ದಿ ಡೆವಿಲ್‌ʼ ಹಾಡು

ಪ್ರೇಮ್‌ ನಿರ್ದೇಶನದ "ಕೆಡಿ ದಿ ಡೆವಿಲ್‌" ಸಿನಿಮಾ ಏಪ್ರಿಲ್‌ 30ರಂದು ಬಿಡುಗಡೆಯಾಗಲಿದೆ...

ಆಸ್ಕರ್ 2026​ ಪ್ರಶಸ್ತಿ | ಅತ್ಯುತ್ತಮ ನಟ ಮೈಕೆಲ್ ಬಿ, ನಟಿ ಜೆಸ್ಸಿ ಬಕ್ಲಿ: ಸಂಪೂರ್ಣ ವಿಜೇತರ ಪಟ್ಟಿ

ಆಸ್ಕರ್ 2026 ಪ್ರಶಸ್ತಿ ಸಮಾರಂಭವು ಮಾರ್ಚ್ 15ರಂದು ಲಾಸ್ ಏಂಜಲಿಸ್‌ನ ಡಾಲ್ಬಿ...