ಸಿಡಿದ ಸೂರ್ಯನ ಭಾಗ; ಅಪರೂಪದ ವಿದ್ಯಮಾನಕ್ಕೆ ಸಾಕ್ಷಿಯಾದ ಬಾಹ್ಯಾಕಾಶ ವಿಜ್ಞಾನಿಗಳು

Date:

  • ಖಗೋಳಶಾಸ್ತ್ರಜ್ಞರನ್ನು ಸದಾ ಬೆರಗುಗೊಳಿಸುವ ನಕ್ಷತ್ರ ಸೂರ್ಯ
  • ಬಾಹ್ಯಾಕಾಶ ವಿಜ್ಞಾನಿಗಳ ಸಮುದಾಯವನ್ನು ಬೆರಗುಗೊಳಿಸಿದ ದೃಶ್ಯ

ಸೂರ್ಯ, ತನ್ನ ಅಗಾಧ ಗುರುತ್ವ ಬಲದ ಶಕ್ತಿಯಿಂದ ಇಡೀ ಸೌರವ್ಯೂಹವನ್ನು ನಿಯಂತ್ರಿಸುವ ನಕ್ಷತ್ರ. ಸೂರ್ಯನಲ್ಲಾಗುವ ಸಣ್ಣ ಬದಲಾವಣೆಯೂ, ಸೌರಮಂಡಲದ ಮೇಲೆ ಅಗಾಧ ಪರಿಣಾಮ ಬೀರುವ ಸಾಮರ್ಥ್ಯ ಹೊಂದಿದೆ.

ಖಗೋಳಶಾಸ್ತ್ರಜ್ಞರನ್ನು ಸದಾ ಬೆರಗುಗೊಳಿಸುವ ನಕ್ಷತ್ರವಾದ ಸೂರ್ಯ ಇದೀಗ ಇನ್ನೊಂದು ಭಾರಿ ಆಸಕ್ತಿದಾಯಕ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಸೂರ್ಯನ ಒಂದು ದೊಡ್ಡ ಭಾಗ ಸಿಡಿದು ಅದರ ಉತ್ತರ ಧ್ರುವದಲ್ಲಿ ಸುಂಟರಗಾಳಿಯಂಥ ಬೃಹತ್ ಸುಳಿ ಸೃಷ್ಟಿಯಾಗಿದೆ. ಈ ರೀತಿಯಲ್ಲಿ ಸೂರ್ಯನ ಭಾಗ ತುಂಡಾಗಿದ್ದಕ್ಕೆ ಕಾರಣವನ್ನು ವಿಜ್ಞಾನಿಗಳು ವಿಶ್ಲೇಷಿಸುತ್ತಿದ್ದಾರೆ. ಈ ವಿದ್ಯಮಾನದ ವಿಡಿಯೋ ದೃಶ್ಯ ಬಾಹ್ಯಾಕಾಶ ವಿಜ್ಞಾನಿಗಳ ಸಮುದಾಯವನ್ನು ಬೆರಗುಗೊಳಿಸಿದೆ.

ಈ ವಿಸ್ಮಯ ವಿದ್ಯಮಾನವನ್ನು ನಾಸಾದ ಜೇಮ್ಸ್ ವೆಬ್ ಸ್ಪೇಸ್ ಟೆಲಿಸ್ಕೋಪ್‌ ಸೆರೆಹಿಡಿದಿದೆ. ಈ ವಿಡಿಯೋವನ್ನು ಕಳೆದ ವಾರ ಬಾಹ್ಯಾಕಾಶ ಹವಾಮಾನ ಮುನ್ಸೂಚಕರಾದ ಡಾ ತಮಿತಾ ಸ್ಕೋವ್ ಅವರು, ತಮ್ಮ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸೂರ್ಯನು ಸೌರ ಜ್ವಾಲೆಗಳನ್ನು ಹೊರಸೂಸುತ್ತಲೇ ಇರುತ್ತಾನೆ. ಅದು ಕೆಲವೊಮ್ಮೆ ಭೂಮಿಯ ಮೇಲಿನ ಸಂವಹನ ವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ವಿಜ್ಞಾನಿಗಳು ಇತ್ತೀಚಿನ ಬೆಳವಣಿಗೆಯ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಾಸಾದ ಪ್ರಕಾರ ಸೌರ ಜ್ವಾಲೆಯು ಸೂರ್ಯನ ಮೇಲ್ಮೈಯಿಂದ ಹೊರಕ್ಕೆ ವಿಸ್ತರಿಸುವ ದೊಡ್ಡ ಪ್ರಕಾಶಮಾನವಾದ ಲಕ್ಷಣವಾಗಿದೆ. ಈ ಹಿಂದೆ ಇಂತಹ ಹಲವಾರು ನಿದರ್ಶನಗಳು ಪತ್ತೆಯಾಗಿವೆ. ಆದರೆ ಈ ಬಾರಿ ಈ ಸೌರ ಜ್ವಾಲೆ ಸೂರ್ಯನ ಬೃಹತ್‌ ಭಾಗವನ್ನೇ ದೂರ ಸರಿಸಿರುವುದು ಖಗೋಳ ವಿಜ್ಞಾನ ಸಮುದಾಯವನ್ನು ದಿಗ್ಭ್ರಮೆಗೊಳಿಸಿದೆ.

ಸೂರ್ಯನ ಈ ಬೃಹತ್‌ ಭಾಗವು ಸರಿಸುಮಾರು 60 ಡಿಗ್ರಿ ಅಕ್ಷಾಂಶದಲ್ಲಿ, ಧ್ರುವವನ್ನು ಸುತ್ತಲು ಸರಿಸುಮಾರು 8 ಗಂಟೆಗಳನ್ನು ತೆಗೆದುಕೊಂಡಿತು ಎಂಬುದು ಹೆಚ್ಚಿನ ಅವಲೋಕನದಿಂದ ತಿಳಿದುಬಂದಿದೆ. ಇದರರ್ಥ, ಈ ಘಟನೆಯಲ್ಲಿ ಸಮತಲ ಗಾಳಿಯ ವೇಗದ ಅಂದಾಜಿನ ಮೇಲಿನ ಮಿತಿಯು, ಸೆಕೆಂಡಿಗೆ 96 ಕಿಲೋಮೀಟರ್ ಅಥವಾ ಸೆಕೆಂಡಿಗೆ 60 ಮೈಲುಗಳಷ್ಟಿತ್ತು ಎಂದು ಡಾ. ಸ್ಕೋವ್ ಮಾಹಿತಿ ನೀಡಿದ್ದಾರೆ.

ಸೌರ ಜ್ವಾಲೆಗಳು ಸಾಮಾನ್ಯ ಸಂಗತಿಯಾಗಿದ್ದರೂ, ಈ ನಿರ್ದಿಷ್ಟ ಸೌರ ಜ್ವಾಲೆ ಅದೆಷ್ಟು ಪ್ರಬಲವಾಗಿತ್ತೆಂದರೆ, ಸೂರ್ಯನ ಬೃಹತ್‌ ಭಾಗವೊಂದನ್ನೇ ತನ್ನತ್ತ ಸೆಳೆದಿದೆ. ಈ ಅಪರೂಪದ ವಿದ್ಯಮಾನ, ಸೌರ ಜ್ವಾಲೆಗಳ ಕುರಿತು ಹೆಚ್ಚಿನ ಅಧ್ಯಯನಕ್ಕೆ ನಮ್ಮನ್ನು ಪ್ರೋತ್ಸಾಹಿಸಿದೆ ಎಂದು ನಾಸಾ ಹೇಳಿದೆ.

ದಶಕಗಳಿಂದ ಸೂರ್ಯನನ್ನು ಗಮನಿಸುತ್ತಿರುವ ಅಮೆರಿಕದ ನ್ಯಾಷನಲ್ ಸೆಂಟರ್ ಫಾರ್ ಅಟ್ಮಾಸ್ಫಿಯರಿಕ್ ರಿಸರ್ಚ್‌ನ ಸೌರ ಭೌತಶಾಸ್ತ್ರಜ್ಞ ಸ್ಕಾಟ್ ಮ್ಯಾಕಿಂತೋಷ್, ಸೌರ ಜ್ವಾಲೆಯ ತುಣುಕು ಮುರಿದುಹೋದಾಗ ಸಂಭವಿಸಿದಂತಹ ಇಂತಹ ಬೃಹತ್‌ ಸುಂಟರಗಾಳಿಯನ್ನು ನಾನು ಹಿಂದೆಂದೂ ನೀಡಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾರ್ಡ್‌ ಪ್ರಮಾದ | 100 ಬಿಲಿಯನ್ ಷೇರು ನಷ್ಟ ಅನುಭವಿಸಿದ ಆಲ್ಫಾಬೆಟ್ ಇಂಕ್

ಬಾಹ್ಯಾಕಾಶ ವಿಜ್ಞಾನಿಗಳು ಈಗ ಈ ವಿಚಿತ್ರ ಘಟನೆಯ ಬಗ್ಗೆ ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಮತ್ತು ಸ್ಪಷ್ಟವಾದ ಚಿತ್ರವನ್ನು ಪ್ರಸ್ತುತಪಡಿಸಲು ಆರಂಭಿಸಿದ್ದಾರೆ. ನಮ್ಮ ಮಾತೃ ನಕ್ಷತ್ರವನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದ್ದು, ಈ ತಿಂಗಳು ಭೂಮಿಯ ಮೇಲಿನ ಸಂವಹನ ವ್ಯವಸ್ಥೆಯನ್ನು ಅಡ್ಡಿಪಡಿಸಿದ ಅನೇಕ ಶಕ್ತಿಶಾಲಿ ಸೌರ ಜ್ವಾಲೆಗಳನ್ನು ಸೂರ್ಯ ಹೊರಸೂಸಿದ್ದಾನೆ ಎಂದು ನಾಸಾದ ಖಗೋಳ ವಿಜ್ಞಾನಿಗಳು ಸ್ಪಷ್ಟಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು...

ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ತಂದೆಯ 'ಸುಪ್ರೀಂ ಲೀಡರ್ ಕಚೇರಿ'ಯ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೊಜ್ತಬಾ ಅವರು...

ಮಹಿಳಾ ದಿನಾಚರಣೆ ವಿಶೇಷ: ಕಳೆದೆರಡು ದಶಕಗಳಲ್ಲಿ ಕ್ರೀಡಾಂಗಣವನ್ನಾಳಿದ 10 ಭಾರತೀಯ ಮಹಿಳೆಯರು

ಒಂದು ಕಾಲದಲ್ಲಿ ಕ್ರೀಡೆಯೆಂದರೆ ಕೇವಲ ಪುರುಷರ ಸ್ವತ್ತು ಎಂಬ ಅಲಿಖಿತ ನಿಯಮವಿತ್ತು;...