ಕ್ರೈಸ್ಟ್ ಯುನಿವರ್ಸಿಟಿ ‘ಕನ್ನಡ ಸಂಘ’ದ ಸಾರಥಿ ಎಂ ಟಿ ರತಿ ಸಂದರ್ಶನ | ‘ನನ್ಜೊತೆ ವಾಗ್ವಾದ ಮಾಡಿದ್ದ ಆ ವಿದ್ಯಾರ್ಥಿ, ಧಮನಿ ಅನ್ನೋ ಕ್ರಾಂತಿಕಾರಿ ತಂಡ ಕಟ್ಟಿದ’

Date:

ಬೆಂಗಳೂರಿನ ಕ್ರೈಸ್ಟ್ ಕಾಲೇಜು (ಈಗ ಯುನಿವರ್ಸಿಟಿ) ಅಂದಾಕ್ಷಣ ನೆನಪಾಗೋದು ಅಲ್ಲಿನ ಕನ್ನಡ ಸಂಘ. ಈ ಕನ್ನಡ ಸಂಘದ ಹೆಗ್ಗಳಿಕೆ ಏನಂದ್ರೆ, ಇಡೀ ರಾಜ್ಯಕ್ಕೆ ಕ್ರೈಸ್ಟ್ ಕಾಲೇಜನ್ನು ಪರಿಚಯಿಸಿದ್ದು. ಈಗಲೂ ಬಹಳಷ್ಟು ಜನಕ್ಕೆ ಕ್ರೈಸ್ಟ್ ಕಾಲೇಜು ಅಥವಾ ಯುನಿವರ್ಸಿಟಿ ಗೊತ್ತಿರೋದೇ ಕನ್ನಡ ಸಂಘದ ಮೂಲಕ. ಇದಕ್ಕೆ ಬಹಳ ದೊಡ್ಡ ಅಡಿಪಾಯ ಹಾಕಿದವರು ಮೇಷ್ಟ್ರು ಚಿ ಶ್ರೀನಿವಾಸರಾಜು.

ಕನ್ನಡ ಸಂಘವು ಪ್ರತೀ ವರ್ಷ ನಡೆಸುವ ಕವಿತೆ ಮತ್ತು ಕಥಾ ಸ್ಪರ್ಧೆಗಳಲ್ಲಿ ಬಹುಮಾನ ಗೆದ್ದ ಬಹುತೇಕ ವಿದ್ಯಾರ್ಥಿಗಳು ಈಗ ಚಿರಪರಿಚಿತ ಬರಹಗಾರರಾಗಿದ್ದಾರೆ. ಆ ಸ್ಪರ್ಧೆಗಳ ಪ್ರಾಮಾಣಿಕತೆ, ಅಚ್ಚುಕಟ್ಟುತನ, ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಸಿಗುವ ಪ್ರೀತಿ ಮತ್ತು ಪ್ರೋತ್ಸಾಹ ನಿಜಕ್ಕೂ ಬೆಲೆ ಕಟ್ಟಲಾಗದ್ದು.

ಇಂತಹ ಅತ್ಯಪರೂಪದ ಸಂಘವನ್ನು ಕಳೆದ ಹದಿನೈದು ವರ್ಷದಿಂದ ಮುನ್ನಡೆಸುತ್ತ ಬರುತ್ತಿರುವವರು ಕನ್ನಡ ಪ್ರಾಧ್ಯಾಪಕರಾದ ಎಂ ಟಿ ರತಿ. ಕೊಡಗಿನ ಗ್ರಾಮೀಣ ಪ್ರದೇಶವರಾದ ಇವರು, ಬೆಂಗಳೂರನ್ನು ತಮ್ಮದಾಗಿಸಿಕೊಂಡ ಬಗೆ ಮತ್ತು ಅದೇ ಹೊತ್ತಿಗೆ ಕನ್ನಡ ಸಂಘದ ಹಿರಿಮೆಯನ್ನು ಕಾಪಾಡಿದ ರೀತಿ ಮೆಚ್ಚುವಂಥದ್ದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಆಡಿಯೊ ಸಂದರ್ಶನದಲ್ಲಿ ಅವರು, ಶ್ರೀನಿವಾಸರಾಜು ಅವರ ನಂತರ ಕನ್ನಡ ಸಂಘ ಮುನ್ನಡೆಸುವಾಗ ಎದುರಾದ ಸವಾಲುಗಳು, ತಮ್ಮ ನೆಚ್ಚಿನ ನೆಲವಾದ ಕೊಡಗಿನ ಜನಜೀವನವು ಸಹಜ ಬದುಕನ್ನು ಕಳೆದುಕೊಂಡ ಸ್ಥಿತ್ಯಂತರ, ಬೆಂಗಳೂರು ವಿವಿಯ ಕನ್ನಡ ವಿಭಾಗದ ಗತವೈಭವ, ತಮ್ಮ ಜೊತೆ ವಾಗ್ವಾದ ಮಾಡಿಕೊಂಡ ವಿದ್ಯಾರ್ಥಿಯೊಬ್ಬ ಕಟ್ಟಿದ ಕ್ರಾಂತಿಕಾರಿ ತಂಡ… ಮತ್ತಿತರೆ ವಿಷಯಗಳ ಬಗ್ಗೆ ಮಾತನಾಡಿದ್ದಾರೆ.

ಗಳನ್ನು ಆಲಿಸಲು ಕ್ಲಿಕ್ ಮಾಡಿ – ಈದಿನ.ಕಾಮ್ ಕೇಳುದಾಣ

ಪೋಸ್ಟ್ ಹಂಚಿಕೊಳ್ಳಿ:

ಈದಿನ.ಕಾಮ್ ಕೇಳುದಾಣ
ಈದಿನ.ಕಾಮ್ ಕೇಳುದಾಣ
ಬದುಕಿನ ಮೇಲಿನ ಪ್ರೀತಿ ಹೆಚ್ಚಿಸುವ ಆಡಿಯೊ-ಬರಹಗಳ ನಿಲುದಾಣ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊರಳಿಗೆ ಸುತ್ತಿಕೊಂಡ ಇರಾನ್ ಯುದ್ಧ; ಅಮೆರಿಕದಲ್ಲಿ ತೈಲ ಬಿಕ್ಕಟ್ಟು – ಟ್ರಂಪ್ ಜನಪ್ರಿಯತೆಗೆ ಕುತ್ತು

ಟ್ರಂಪ್ ಸೃಷ್ಟಿಸಿದ ಈ ವಿನಾಶಕಾರಿ ಯುದ್ಧದ ಬಿಸಿ ಅಮೆರಿಕದ ಜನಸಾಮಾನ್ಯರ ಬದುಕನ್ನು...

ಮೊಜ್ತಬಾ ಖಮೇನಿ | ತೆರೆಯ ಹಿಂದಿದ್ದ ‘ಗೇಟ್‌ಕೀಪರ್’ ಈಗ ಇರಾನ್‌ನ ಪರಮೋಚ್ಚ ನಾಯಕ

ತಂದೆಯ 'ಸುಪ್ರೀಂ ಲೀಡರ್ ಕಚೇರಿ'ಯ ಸಂಪೂರ್ಣ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ಮೊಜ್ತಬಾ ಅವರು...

ಮಹಿಳಾ ದಿನಾಚರಣೆ ವಿಶೇಷ: ಕಳೆದೆರಡು ದಶಕಗಳಲ್ಲಿ ಕ್ರೀಡಾಂಗಣವನ್ನಾಳಿದ 10 ಭಾರತೀಯ ಮಹಿಳೆಯರು

ಒಂದು ಕಾಲದಲ್ಲಿ ಕ್ರೀಡೆಯೆಂದರೆ ಕೇವಲ ಪುರುಷರ ಸ್ವತ್ತು ಎಂಬ ಅಲಿಖಿತ ನಿಯಮವಿತ್ತು;...