ಬೆಂಗಳೂರಿನಲ್ಲಿ ಡೆಂಘೀಗೆ 27 ವರ್ಷದ ಯುವಕ ಬಲಿ: ರಾಜ್ಯಾದ್ಯಂತ ಸಾವಿನ ಸಂಖ್ಯೆ 6ಕ್ಕೆ ಏರಿಕೆ

Date:

ಬೆಂಗಳೂರಿನ 27 ವರ್ಷದ ಯುವಕ ಡೆಂಘೀ ಸೋಂಕಿನಿಂದಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟ ಯುವಕ ಕಗ್ಗದಾಸಪುರದ ನಿವಾಸಿ ಎಂದು ಬಿಬಿಎಂಪಿ ಖಚಿತಪಡಿಸಿದೆ.

ಕಳೆದ ಶುಕ್ರವಾರ ಎರಡು ಡೆಂಘೀ ಶಂಕಿತ ಸಾವಿನ ಪ್ರಕರಣಗಳು ಸಂಭವಿಸಿದ್ದವು. ಇದರಲ್ಲಿ ಒಂದು ಸಾವು ಡೆಂಘೀವಿನಿಂದಾಗಿದೆ ಎಂದು ಬಿಬಿಎಂಪಿ ಹೆಲ್ತ್ ಆಡಿಟ್ ಖಚಿತಪಡಿಸಿದೆ. ಮತ್ತೊಂದು ಕ್ಯಾನ್ಸರ್ ಕಾರಣ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಹಳ ಕಾಲ ನೆನಪಿನಲ್ಲುಳಿಯುವ ಫೈನಲ್ ಪಂದ್ಯ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೆಂಗಳೂರು ನಗರದಲ್ಲಿ 1743 ಡೆಂಘೀ ಪ್ರಕರಣಗಳು ದಾಖಲಾಗಿದೆ. ಮಹಿಳೆಯರು ಮತ್ತು ಮಕ್ಕಳಿಗೆ ಡೆಂಘೀ ಸೋಂಕಿಗೆ ಬೇಗ ಒಳಗಾಗುತ್ತಿದ್ದಾರೆ. ಗರ್ಭಿಣಿಯರಲ್ಲಿ ಡೆಂಗ್ಯು ಹೆಚ್ಚಿನ ಹಾನಿ ಎಸಗುತ್ತಿರುವುದರಿಂದಾಗಿ ಎಚ್ಚರ ವಹಿಸಲು ಬಿಬಿಎಂಪಿಯಿಂದ ಸಲಹೆ ನೀಡಲಾಗಿದೆ. ಇದೂವರೆಗೂ ನಗರದಲ್ಲಿ ಇಬ್ಬರು ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ರಾಜ್ಯಾದ್ಯಂತ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಘೀ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದರಿಂದ ಜನರು ಹೆಚ್ಚಿನ ಎಚ್ಚರ ವಹಿಸಬೇಕು ಎಂದು ಆರೋಗ್ಯ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಡೆಂಘೀ ಲಕ್ಷಣಗಳು

ಗಮನಾರ್ಹವಾಗಿ ಹರಡುತ್ತಿರುವ ಡೆಂಘೀ ಜ್ವರವು ಏಡಿಸ್ ಈಜಿಪ್ಟಿ ಎಂಬ ಸೋಂಕುಪೀಡಿತ ಹೆಣ್ಣು ಸೊಳ್ಳೆಯಿಂದ ಹರಡುವ ವೈರಸ್ ಮೂಲಕ ಬರುವ ಸೋಂಕು. ಡೆಂಘೀ ಜ್ವರ ಇರುವ ರೋಗಿಯ ರಕ್ತ ಹೀರಿದ ಸೊಳ್ಳೆಯು ಬೇರೆ ವ್ಯಕ್ತಿಗಳಿಗೆ ಕಚ್ಚುವುದರಿಂದ ಈ ವೈರಸ್ ಒಬ್ಬರಿಂದೊಬ್ಬರಿಗೆ ಹರಡುತ್ತದೆ. ಡೆಂಘೀ ಜ್ವರ ಹರಡುವ ಸೊಳ್ಳೆಗಳು ಸಾಮಾನ್ಯವಾಗಿ ಹಗಲುಹೊತ್ತಿನಲ್ಲಿ ಕಡಿಯುತ್ತವೆ.

ಎಲ್ಲ ಡೆಂಘೀ ಸೋಂಕು ಪೀಡಿತ ವ್ಯಕ್ತಿಗಳಲ್ಲಿ ತೀವ್ರವಾದ ರೋಗಲಕ್ಷಣಗಳು ಕಾಣಿಸಿಕೊಳ್ಳುವುದಿಲ್ಲ. ಹೆಚ್ಚಿನ  ಜನರಲ್ಲಿ ಯಾವುದೇ ರೋಗ ಲಕ್ಷಣಗಳು ಇರದೇ ಇರಬಹುದು. ಇನ್ನು ಕೆಲವು ಜನರಲ್ಲಿ ವಿಪರೀತ ಆಯಾಸ, ಮೈಕೈ ನೋವು , ಮಾಂಸಖಂಡ ಮತ್ತು ಗಂಟುಗಳ ನೋವು, ಸ್ನಾಯು ಸೆಳೆತ, ತಲೆನೋವು, ವಾಂತಿ ಇತ್ಯಾದಿ ಸಾಮಾನ್ಯ ಜ್ವರದ ಲಕ್ಷಣಗಳು ಮಾತ್ರ ಇದ್ದು, ಒಂದೆರಡು ವಾರಗಳಲ್ಲಿ ಗುಣಮುಖರಾಗಬಹುದು.

ಬೆರಳೆಣಿಕೆಯಷ್ಟು ಜನರಲ್ಲಿ ಮಾತ್ರ ಜ್ವರವು ಉಲ್ಬಣಿಸಿ ತೀವ್ರವಾದ ಹೊಟ್ಟೆನೋವು, ಭೇದಿ, ರಕ್ತಸ್ರಾವ, ಉಸಿರಾಟದ ಲಕ್ಷಣಗಳು, ಅಂಗಾಂಗಗಳ ವೈಫಲ್ಯ ಮತ್ತು ಆಘಾತ ಕಾಣಿಸಿಕೊಳ್ಳಬಹುದು.

ಸೊಳ್ಳೆ ನಿಯಂತ್ರಣ ಮುಖ್ಯ

ಡೆಂಘೀ ಜ್ವರದ ಹರಡುವಿಕೆಯನ್ನು ತಡೆಗಟ್ಟಲು ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯ. ಸೊಳ್ಳೆಗಳು ನಿಂತ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತವೆ. ಆದುದರಿಂದ ಸೊಳ್ಳೆಗಳ ಉತ್ಪತ್ತಿಯನ್ನು ನಿಯಂತ್ರಿಸಲು ಎಲ್ಲಿಯೂ ನೀರು ನಿಲ್ಲದಂತೆ ಜಾಗ್ರತೆ ವಹಿಸಬೇಕು ಅಥವಾ ನೀರು ನಿಲ್ಲುವಂತಹ ಯಾವುದೇ ರೀತಿಯ ವಸ್ತುಗಳನ್ನು ಹೊರಗೆ ಎಸೆಯದೆ ಪರಿಸರವನ್ನು ಸ್ವತ್ಛವಾಗಿಟ್ಟುಕೊಳ್ಳಬೇಕು.

ಮನೆಯ ಕಿಟಕಿಗಳಿಗೆ ಸೊಳ್ಳೆ ಪರದೆಗಳನ್ನು ಬಳಸಬಹುದು. ಕೈಕಾಲುಗಳಿಗೆ ಸೊಳ್ಳೆ ನಿವಾರಕವನ್ನು
ಹಚ್ಚಬಹುದು. ಆದರೆ ಮಕ್ಕಳಲ್ಲಿ ಯಾವುದೇ ಸೊಳ್ಳೆ ನಿವಾರಕಗಳನ್ನು ಬಳಸುವಾಗ ವೈದ್ಯರ ಸಲಹೆ ಮತ್ತು ತಯಾರಕರ ಸೂಚನೆಗಳನ್ನು ತಪ್ಪದೆ ಅನುಸರಿಸಬೇಕು. ಸೊಳ್ಳೆ ಕಡಿತದಿಂದ ಸುರಕ್ಷಿತವಾಗಿರಲು ಮೈ ಮುಚ್ಚುವಂತಹ ಬಟ್ಟೆಗಳನ್ನು ಧರಿಸಬೇಕು.

ಮಲಗುವಾಗ ಸೊಳ್ಳೆ ಪರದೆಯನ್ನು ಉಪಯೋಗಿಸುವುದು ಉತ್ತಮ. ಪ್ರತಿಯೊಬ್ಬರೂ ಡೆಂಗ್ಯೂ ಎಂಬ ಮಾರಕ ಜ್ವರ ಹರಡುವ ರೀತಿ ಮತ್ತು ಡೆಂಗ್ಯೂ ಹರಡದಂತೆ ತಡೆಗಟ್ಟುವ ವಿಧಾನಗಳನ್ನು ಅರ್ಥ
ಮಾಡಿಕೊಂಡು, ಸುತ್ತಮುತ್ತಲಿನ ಪರಿಸರವನ್ನು ಸ್ವತ್ಛವಾಗಿಟ್ಟು ಡೆಂಘೀ ಹರಡದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...