ಬಸ್‌ಗಳ ಮೇಲೆ ಪಾನ್ ಮಸಾಲ ಜಾಹೀರಾತು ನಿಷೇಧಿಸಿ

Date:

  • ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಜಾಹೀರಾತು ನಿಷೇಧ
  • ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ; ‘ಸ್ಟಾಪ್ ಟೊಬ್ಯಾಕೊ’ ದೂರು ನೀಡಿ

ಈಗಾಗಲೇ ರಾಜ್ಯದಲ್ಲಿ ಸಿಗರೇಟ್, ಗುಟ್ಕಾ ಮತ್ತಿತ್ತರ ಚಟಗಳಿಂದ ನಾಗರಿಕರು ಹಲವಾರು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಮಧ್ಯೆ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ‘ವಿಮಲ್ ಎಲೈಚಿ’ ಜಾಹೀರಾತು ಅಳವಡಿಸಿ ಪ್ರಚೋದಿಸುವುದನ್ನು ನಿಲ್ಲಿಸಿ ಎಂದು ತಂಬಾಕು ಮುಕ್ತ ಕರ್ನಾಟಕ (ಸಿಎಫ್‌ಟಿಎಫ್‌ಕೆ) ಒಕ್ಕೂಟವು ಬಸ್ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಪತ್ರ ಬರೆದಿದೆ.

ಕಮಲಾ ಪಸಂದ್, ವಿಮಲ್ ಪಾನ್ ಮಸಾಲಾ, ರಜನಿಗಂಧ, ಇಂಪೀರಿಯಲ್ ಬ್ಲೂ ಮತ್ತು ಸ್ಟೆರ್ಲಿಂಗ್ ರಿಸರ್ವ್‌‌ನಂತಹ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಕಂಪನಿಗಳಿಗೆ ಅಂತಹ ಜಾಹೀರಾತುಗಳ ವಿರುದ್ಧ ಕೇಂದ್ರ ಗ್ರಾಹಕ ರಕ್ಷಣಾ ಪ್ರಾಧಿಕಾರವು ಈಗಾಗಲೇ ನೋಟಿಸ್ ನೀಡಿದೆ ಎಂದು ಸಿಎಫ್‌ಟಿಎಫ್‌ಕೆ ಸಂಚಾಲಕ ಎಸ್ ಜೆ ಚಂದರ್ ಹೇಳಿದ್ದಾರೆ.

ಭಾರತದಲ್ಲಿ ತಂಬಾಕು ಮತ್ತು ಆಲ್ಕೋಹಾಲ್ ಉತ್ಪನ್ನಗಳ ನೇರ ಜಾಹೀರಾತು ನಿಷೇಧಿಸಿರುವುದರಿಂದ, ತಯಾರಕರು ಬದಲಿ ಮಾರ್ಗ ಬಳಸಿ, ಗ್ರಾಹಕರನ್ನು ತನ್ನೆಡೆಗೆ ಸೆಳೆಯಲು ಸೃಜನಶೀಲ ವಿಧಾನಗಳನ್ನು ಬಳಸಿಕೊಳ್ಳುತ್ತಿವೆ. ‘ಎಲೈಚಿ’ ನೆಪದಲ್ಲಿ ವಿಮಲ್ ಜಗಿಯುವ ತಂಬಾಕು ಉತ್ಪನ್ನಗಳ ಮಾರಾಟ ಮತ್ತಷ್ಟು ಬಲಪಡೆಯಲು ಈ ಜಾಹೀರಾತುಗಳನ್ನು ಬಳಸಿಕೊಳ್ಳಲಾಗುತ್ತಿದೆ. ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಜಾಹೀರಾತು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಅನಧಿಕೃತ ಗರ್ಭಪಾತ; ಮಹಿಳಾ ಶುಶ್ರೂಷಕಿ ವಿರುದ್ಧ ದೂರು

ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಲಕ್ಷಾಂತರ ಜನರು ಬಳಸುತ್ತಾರೆ. ರಸ್ತೆಯಲ್ಲಿ ದಿನನಿತ್ಯ ಸಂಚರಿಸುವ ಮಕ್ಕಳು ಮತ್ತು ಯುವಕರು ಹಾಗೂ ಹಿರಿಯರು ಜಾಹೀರಾತುಗಳನ್ನು ನೋಡುತ್ತಿರುತ್ತಾರೆ. ಇದು ಅವರನನ್ನು ಬಳಕೆ ಮಾಡುವಂತೆ ಪ್ರಚೋದಿಸುತ್ತದೆ. ಅದಲ್ಲದೆ, ಈ ಉತ್ಪನ್ನಗಳು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀಳುತ್ತದೆ. ಪಾನ್ ಮಸಾಲಾ ಕಂಪನಿಗಳೊಂದಿಗಿನ ಅವರ ಒಪ್ಪಂದವನ್ನು ರದ್ದುಗೊಳಿಸಬೇಕು ಎಂದು ಸಿಎಫ್‌ಟಿಎಫ್‌ಕೆ ಮನವಿ ಮಾಡಿದೆ.

“ಆರೋಗ್ಯ ಇಲಾಖೆಯು ಇತ್ತೀಚೆಗೆ ‘ಸ್ಟಾಪ್ ಟೊಬ್ಯಾಕೊ’ ಅಪ್ಲಿಕೇಶನ್ ಅನ್ನು ಬಿಡುಗಡೆ ಮಾಡಿದೆ. ಆ ಮೂಲಕ ಜನರು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವ ಬಗ್ಗೆ ದೂರು ನೀಡಬಹುದು ಮತ್ತು ನಾವು ಅನೇಕ ಗ್ರಾಮಗಳನ್ನು ತಂಬಾಕು ಮುಕ್ತಗೊಳಿಸಿದ್ದೇವೆ. ಬಿಎಂಟಿಸಿ ಮತ್ತು ಕೆಎಸ್ಆರ್‌ಟಿಸಿ ಎರಡಕ್ಕೂ ಬಾಡಿಗೆ ಜಾಹೀರಾತನ್ನು ತೆಗೆದುಹಾಕಲು ಸೂಚಿಸಲಾಗುತ್ತದೆ” ಎಂದು ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಡಿ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ: ಮಂದಕೃಷ್ಣ ಮಾದಿಗ ಆರೋಪ

ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್‌, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ...

ಒಳಮೀಸಲಾತಿ ಹೋರಾಟ | ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆದಿಲ್ಲ: ಮಾರಸಂದ್ರ ಮುನಿಯಪ್ಪ

ಸಿದ್ದರಾಮಯ್ಯ ಅವರು ಸಮಾಜವಾದದ ಬಗ್ಗೆ ಮಾತನಾಡುತ್ತಾರೆ. ನುಡಿದಂತೆ ನಡೆದಂತೆ ಸರ್ಕಾರವೆಂದು ಹೇಳುತ್ತಾರೆ....

ಫ್ರೀಡಂ ಪಾರ್ಕ್‌ನಿಂದ ವಿಧಾನಸೌಧಕ್ಕೆ ಬರಲಿದೆ ಒಳಮೀಸಲಾತಿ ಹೋರಾಟ: ಸರ್ಕಾರಕ್ಕೆ ಮಾದರ ಚೆನ್ನಯ್ಯ ಸ್ವಾಮೀಜಿ ಎಚ್ಚರಿಕೆ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು...

ಬೆಂಗಳೂರು | ನೇಮಕಾತಿಯಲ್ಲಿ ಒಳಮೀಸಲಾತಿಗೆ ಆಗ್ರಹಿಸಿ ಮೊಳಗುತ್ತಿದೆ ಘೋಷ

ಸರ್ಕಾರವು ಒಳಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ...