ಬೆಂಗಳೂರು | ಯುವಜನರಲ್ಲಿ ಹೃದಯಾಘಾತ ಪ್ರಕರಣಗಳ ಹೆಚ್ಚಳ

Date:

ಕರ್ನಾಟಕದಲ್ಲಿ ಸದ್ಯ ಎಲ್ಲ ವಯೋಮಾನದವರಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚಳವಾಗುತ್ತಿವೆ. ಯುವಜನರಲ್ಲಿಯೂ ಶೇ.22ರಷ್ಟು ಪ್ರಕರಣಗಳು ಏರಿಕೆಯಾಗಿವೆ. ಈ ಹಿನ್ನೆಲೆ, ಹೃದಯಾಘಾತ ನಿರ್ವಹಣೆ ಕಾರ್ಯಕ್ರಮವಾದ ‘ಎಸ್‌ಟಿಇಎಮ್ಐ’ 2023ರ ಏಪ್ರಿಲ್‌ನಿಂದ ಪ್ರಾರಂಭವಾಗಿದೆ. ಕಾರ್ಯಕ್ರಮದಡಿ ಇಲ್ಲಿಯವರೆಗೂ 50,000 ಜನರನ್ನು ಪರೀಕ್ಷಿಸಲಾಗಿದೆ ಎಂದು ಎಸ್‌ಟಿಇಎಮ್ಐ ಉಸ್ತುವಾರಿ ಶಿಖರ್ ಶ್ರೀವಾಸ್ತವ ತಿಳಿಸಿದ್ದಾರೆ.

ಎಸ್‌ಟಿ ಸೆಗ್ಮೆಂಟ್ ಎಲಿವೇಷನ್ ಮಯೋಕಾರ್ಡಿಯಲ್ ಇನ್ಫಾರ್‍ಕ್‌ಷನ್ (ಎಸ್ಟಿಇಎಮ್ಐ) ಕಾರ್ಯಕ್ರಮವನ್ನು ಮಹಾರಾಷ್ಟ್ರ, ಗೋವಾ, ಓಡಿಶಾ, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಕರ್ನಾಟಕದಲ್ಲಿ ನಾಲ್ಕು ತಿಂಗಳಲ್ಲಿ 50,000 ಜನರಿಗೆ ಸ್ಕ್ಯಾನ್ ಮಾಡಲಾಗಿದೆ. ಯೋಜನೆಯು 1,684ಕ್ಕೂ ಹೆಚ್ಚು ನಿರ್ಣಾಯಕ ಪ್ರಕರಣಗಳಲ್ಲಿ ಸಮಯೋಚಿತ ತಪಾಸಣೆ ಮತ್ತು ನಿರ್ವಹಣೆಯಲ್ಲಿ ಸಹಾಯ ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ.

ಜಯದೇವ ಹೃದ್ರೋಗ ಮತ್ತು ಸಂಶೋಧನಾ ವಿಜ್ಞಾನ ಸಂಸ್ಥೆಯ ನಿರ್ದೇಶಕ ಡಾ. ಸಿ.ಎನ್ ಮಂಜುನಾಥ್ ಮಾತನಾಡಿ, “ಕಳೆದ 10-15 ವರ್ಷಗಳಲ್ಲಿ ಯುವ ಮತ್ತು ಮಧ್ಯ ವಯಸ್ಕರಲ್ಲಿನ ಹೃದಯಾಘಾತ ಪ್ರಕರಣಗಳಲ್ಲಿ ಶೇ.22ರಷ್ಟು ಏರಿಕೆಯಾಗಿದೆ. ಜೀವನಶೈಲಿ ಬದಲಾವಣೆ, ಮದ್ಯಪಾನ, ಧೂಮಪಾನ, ಅನಾರೋಗ್ಯಕರ ಆಹಾರ ಸೇವನೆ, ಒತ್ತಡ ಮತ್ತು ವ್ಯಾಯಾಮದ ಕೊರತೆಯಿಂದಾಗಿ ಆಘಾತಗಳು ಸಂಭವಿಸಿವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವಿಶೇಷವಾಗಿ ಆಂಜಿಯೋಪ್ಲ್ಯಾಸ್ಟಿ ಮಾಡಲು ಅಥವಾ ಹೃದಯಾಘಾತ ಪ್ರಕರಣಗಳನ್ನು ನಿರ್ವಹಿಸಲು ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆಯಿದೆ. ತಜ್ಞರಿಲ್ಲದ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಆರೈಕೆ ನೀಡಲು ಈ ಕಾರ್ಯಕ್ರಮವು ಸಹಾಯ ಮಾಡಿದೆ. ಚಿಕಿತ್ಸೆ ವಿಳಂಬವಾದರೆ ಸಾವಿನ ಅಪಾಯ ಶೇ.7ರಷ್ಟು ಹೆಚ್ಚುತ್ತದೆ” ಎಂದು ವಿವರಿಸಿದರು.

“ಹಬ್ ಮತ್ತು ಸ್ಪೋಕ್ ಮಾದರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಈ ಯೋಜನೆಯು ಕರ್ನಾಟಕದಾದ್ಯಂತ 15 ಜಿಲ್ಲೆಗಳಲ್ಲಿ ಪ್ರಾರಂಭವಾಗಿದೆ. ಈ ಯೋಜನೆಯನ್ನು ಮುಂದಿನ ಎರಡು ತಿಂಗಳಲ್ಲಿ ಇನ್ನೂ ವಿಸ್ತರಿಸುವ ನಿರೀಕ್ಷೆಯಿದೆ. ತಾಲೂಕು, ಜಿಲ್ಲಾ ಮತ್ತು ಸಾಮಾನ್ಯ ಆಸ್ಪತ್ರೆಗಳನ್ನು ಒಳಗೊಂಡಿರುವ 45 ಆರೋಗ್ಯ ಸೌಲಭ್ಯಗಳನ್ನು ಎಸ್ಟಿಇಎಮ್ಐ ಪತ್ತೆ ಮತ್ತು ಥ್ರಂಬೋಲಿಸಿಸ್‌ಗೆ ಸ್ಪೋಕ್‌ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಜಯದೇವ ಹೃದಯರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ – ಬೆಂಗಳೂರು, ಮೈಸೂರು ಮತ್ತು ಕಲಬುರಗಿಗೆ ಕ್ಯಾಥ್ ಲ್ಯಾಬ್ ಸೌಲಭ್ಯಗಳನ್ನು ಹೊಂದಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...