ಕೆನಡಾದಲ್ಲಿ ಇನ್ನು ಮುಂದೆ ಪ್ರತಿ ಸಿಗರೇಟಿನ ಮೇಲೂ ಹಾನಿ ಎಚ್ಚರಿಕೆ ಸಂದೇಶ

Date:

ಕೆನಡಾ ದೇಶವು 2035 ರ ವೇಳೆಗೆ ರಾಷ್ಟ್ರ ವ್ಯಾಪಿ ತಂಬಾಕು ಸೇವನೆ ಶೇಕಡಾ 5ರಷ್ಟು ತಗ್ಗಿಸಬೇಕು ಎಂಬ ಗುರಿಯ ಹಿನ್ನೆಲೆಯಲ್ಲಿ ಪ್ರತಿ ಸಿಗರೇಟಿನ ಮೇಲೆ ಆರೋಗ್ಯ ಹಾನಿ ಎಚ್ಚರಿಕೆ ಮುದ್ರಿಸುವ ನಿರ್ಧಾರಕ್ಕೆ ಬಂದಿದೆ. ಈ ಮೂಲಕ ಅರೋಗ್ಯ ಹಾನಿ ಎಚ್ಚರಿಕೆ ಮುದ್ರಿಸಿದ ದೇಶಗಳ ಪೈಕಿ ಕೆನಡಾ ವಿಶ್ವದ ಮೊದಲ ರಾ‍‍‍ಷ್ಟ್ರವಾಗಲಿದೆ.

ಪ್ರತಿ ವರ್ಷ ಮೇ 31ರ ದಿನವನ್ನು ವಿಶ್ವ ತಂಬಾಕು ರಹಿತ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ. ಕೆನಡಾದಲ್ಲಿ ಯುವ ಸಮುದಾಯವೇ ಸಿಗರೇಟಿನ ವ್ಯಸನಕ್ಕೆ ಹೆಚ್ಚು ತುತ್ತಾಗುತ್ತಿದ್ದಾರೆ. ಈ ಕಾರಣದಿಂದ ಸಿಗರೇಟಿನ ಮೇಲೆ ನೇರವಾಗಿ ಆರೋಗ್ಯ ಹಾನಿ ಜಾಗೃತಿ ಮೂಡಿಸುವ ಸಾಲುಗಳನ್ನು ಕೆನಡಾ ದೇಶ ಮೊದಲ ಬಾರಿಗೆ ಮುದ್ರಿಸಿದೆ.

ಹೊಸ ತಂಬಾಕು ಉತ್ಪನ್ನಗಳ ಪ್ಯಾಕೇಟ್‌ ಮತ್ತು ಲೇಬಲ್‌ ಮಾಡುವ ನಿಯಮಗಳನ್ನು ಕೆನಡಾ ಸರ್ಕಾರ ಪಾಲಿಸುತ್ತಿದೆ. ಆದಕಾರಣ ಯುವಕರನ್ನು ಮತ್ತು ತಂಬಾಕು ಅಲ್ಲದ ಬಳಕೆದಾರರನ್ನು ನಿಕೋಟಿನ್ ವ್ಯಸನದಿಂದ ದೂರವಿಡಲು ನಿರ್ಧಾರ ಕೈಗೊಂಡಿದೆ. ಯುವಕರಿಗೆ ತಂಬಾಕು ಆಕರ್ಷಣೆ ಆಗದಂತೆ ತಡೆಯಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ ಎಂದು ಕೆನಡಾದ ಆರೋಗ್ಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮರಳಿ ವಿಶ್ವದ ನಂ.1 ಶ್ರೀಮಂತ ಪಟ್ಟಕ್ಕೇರಿದ ಎಲಾನ್ ಮಸ್ಕ್; ಮತ್ತೆ ಕುಸಿತ ಕಂಡ ಅಂಬಾನಿ, ಅದಾನಿ

“ತಂಬಾಕು ಸೇವನೆಯಿಂದ ಪ್ರತಿ ವರ್ಷ 48 ಸಾವಿರ ಕೆನಡಿಯನ್ನರು ಮೃತಪಡುತ್ತಿದ್ದಾರೆ. ಇದನ್ನು ನಿಯಂತ್ರಣಕ್ಕೆ ತರುವ ಉದ್ದೇಶದಿಂದ ಪ್ರತಿ ಸಿಗರೇಟಿನ ಮೇಲೆ ಆರೋಗ್ಯ ಹಾನಿಕಾರ ಇನ್ನಿತರ ಎಚ್ಚರಿಕೆ ಲೇಬಲ್‌ಗಳು ಮುದ್ರಿಸಲಾಗುವ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ನಿಯಮವು ಧೂಮಪಾನ ಮಾಡುವ ಪ್ರತಿಯೊಬ್ಬರನ್ನು ತಲುಪುತ್ತದೆ. ಇದರಿಂದ ವ್ಯಸನಕ್ಕೆ ಈಡಾಗುವವರನ್ನು ತಡೆಯಲು, ತಂಬಾಕು ಸೇವನೆ ಕಡಿಮೆ ಮಾಡಲು ಸಹಾಯವಾಗುತ್ತದೆ” ಎಂದು ಕೆನಡಿಯನ್ ಕ್ಯಾನ್ಸರ್‌ ಸೊಸೈಟಿಯ ಹಿರಿಯ ನೀತಿ ವಿಶ್ಲೇಷಕರಾದ ರಾಬ್ ಕನ್ನಿಂಗ್ ಹ್ಯಾಮ್ ತಿಳಿಸಿದ್ದಾರೆ.

“ಪ್ರತಿ ದೇಶದಲ್ಲಿ ಧೂಮಪಾನಿಗಳ ಸಂಖ್ಯೆಯನ್ನು ಕಡಿಮೆ ಮಾಡುವ ಗುರಿ ಆಯಾ ದೇಶದ ಆರೋಗ್ಯ ಸಚಿವಾಲಯಗಳು ಹೊಂದಿವೆ. ಆದಕಾರಣ ವಿಶ್ವದಲ್ಲಿ ತಂಬಾಕು ಉತ್ಪನ್ನಗಳ ಪ್ಯಾಕೇಟ್‌ಗಳಲ್ಲಿ ಆರೋಗ್ಯ ಸಂದೇಶವನ್ನು ಹೆಚ್ಚಿಸಬೇಕಿದೆ. ಸದ್ಯ ಕೆನಡಾ ದೇಶ ಸಿಗರೇಟ್‌ ಮೇಲೆ ಮುದ್ರಿಸಿರುವ ಎಚ್ಚರಿಕೆ ಸಂದೇಶಗಳು ತಂಬಾಕು ಸೇವನೆ ತಡೆ ಹೆಚ್ಚುವರಿ ಕ್ರಮಗಳಿಗೆ ಪೂರಕವಾಗಿದೆ” ಎಂದು ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದ ವಿವಿಧ ಆರೋಗ್ಯ ಇಲಾಖೆಗಳಲ್ಲೂ ವ್ಯಸನ ತಡೆ ಕ್ರಮ ಪರಿಣಾಮಕಾರಿ ಜಾರಿಗೆ ಸೂಚಿಸಲಾಗಿದೆ. ಅಂತೆಯೇ ಶಾಲಾ-ಕಾಲೇಜು, ಆಸ್ಪತ್ರೆಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ನಿಷೇಧಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧ ಸೇರಿದಂತೆ ಹಲವು ಕ್ರಮ ಜಾರಿಯಲ್ಲಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಲ್ಫ್‌ ಸಂಘರ್ಷ : ಗೊಬ್ಬರದಿಂದ ವಜ್ರದವರೆಗೂ ತಟ್ಟಿದ ಬಿಸಿ!

ಗಲ್ಫ್ ಸಂಘರ್ಷದಿಂದ ತೈಲ ಹಾಗೂ ಅನಿಲ ಆಮದುವಿನಲ್ಲಿ ಉಂಟಾಗಿರುವ ಬಿಕ್ಕಟ್ಟನ್ನು ಮಾತ್ರವೇ...

ಮಧ್ಯಪ್ರಾಚ್ಯ ಬಿಕ್ಕಟ್ಟು: ಇರಾನ್ ತೈಲ ಖರೀದಿಗೆ ಮುಂದಾದ ಭಾರತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಹಾಗೂ ಭೌಗೋಳಿಕ ರಾಜಕೀಯ...

‘ಉಮರ್ ಖಾಲಿದ್ ಬಂಧನ ಅಕ್ರಮ’ ವಿಶ್ವಸಂಸ್ಥೆಯ ಅಂಗಸಂಸ್ಥೆ: ಐದು ವರ್ಷದಿಂದ ಜೈಲಿನಲ್ಲಿರುವ ಹೋರಾಟಗಾರ

ವಿದ್ಯಾರ್ಥಿ ನಾಯಕ, ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಕಳೆದ ಐದು ವರ್ಷಗಳಿಗೂ...