ಔಷಧಿಗಳ ಬೆಲೆ ಶೇ.6.73ರಷ್ಟು ಕಡಿಮೆ: ಮನ್ಸುಖ್ ಮಾಂಡವೀಯ

Date:

  • ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಿ ಜನರ ಜೇಬಿಗೆ ಕತ್ತರಿ ಹಾಕುವ ಕೆಲಸ; ಟೀಕೆ
  • ಏ.1ರಿಂದ ಅಗತ್ಯ ಔಷಧಿಗಳ ಬೆಲೆ ಏರಿಕೆ – ಬಡವರಿಗೆ ಮತ್ತೊಂದು ಹೊರೆ

850 ಅನುಸೂಚಿತ ಔಷಧಿಗಳಲ್ಲಿ 650 ಔಷಧಿಗಳ ದರ ಸರಾಸರಿ ಶೇ.6.73ರಷ್ಟು ಕಡಿಮೆಯಾಗಿವೆ ಎಂದು ರಾಷ್ಟ್ರೀಯ ಔಷಧಿಗಳ ದರ ನಿಗದಿ ಪ್ರಾಧಿಕಾರ (ಎನ್‌ಪಿಪಿಎ) ಹೇಳಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಎನ್‌ಪಿಪಿಎ, “ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿಯಲ್ಲಿರುವ (ಎನ್‌ಎಲ್‌ಇಎಂ) 870 ಅನುಸೂಚಿತ ಔಷಧಿಗಳ ಪೈಕಿ, ಈವರೆಗೆ 651 ಔಷಧಿಗಳ ಗರಿಷ್ಠ ದರಗಳ ಮೇಲೆ ಮಿತಿ ಹೇರಲು ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದೆ” ಎಂದೂ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯವು ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಎನ್‌ಎಲ್‌ಇಎಂ ಅನ್ನು ತಿದ್ದುಪಡಿ ಮಾಡಿತ್ತು.

ಕೇಂದ್ರ ಸರ್ಕಾರವು ದರ ಹೆಚ್ಚಳಕ್ಕೆ ಸಂಬಂಧಿಸಿ, ಮಿತಿ ಹೇರಿದ್ದರಿಂದಾಗಿ ಅವುಗಳ ಬೆಲೆ ಏಪ್ರಿಲ್‌ 1ರಿಂದ ಶೇ.6.73ರಷ್ಟು ಕಡಿಮೆಯಾಗಿವೆ ಎಂದು ಎನ್‌ಪಿಪಿಎ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಗಟು ದರ ಸೂಚ್ಯಂಕದ (ಡಬ್ಲ್ಯುಪಿಐ) ಆಧಾರದ ಮೇಲೆ ಔಷಧಿಗಳ ದರಗಳಲ್ಲಿ ವಾರ್ಷಿಕ ಶೇ.12.12ರಷ್ಟು ಹೆಚ್ಚಳವಾಗಬೇಕಿತ್ತು. ಆದರೆ, ದರಗಳಲ್ಲಿನ ಈ ಕಡಿತದಿಂದಾಗಿ ಗ್ರಾಹಕರಿಗೆ ಲಾಭವಾಗಲಿದೆ ಎಂದು ಎನ್‌ಪಿಪಿಎ ಹೇಳಿಕೊಂಡಿದೆ.

ಕಳೆದ ಮಾ. 25 ರಂದು ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದ್ದ ಎನ್‌ಪಿಪಿಎ, 2022ಕ್ಕೆ ಸಂಬಂಧಿಸಿ ಸಗಟು ದರ ಸೂಚ್ಯಂಕವು (ಡಬ್ಲ್ಯುಪಿಐ) ಶೇ.12.12ರಷ್ಟಿತ್ತು ಎಂದು ಹೇಳಿತ್ತು.

ಈ ಸುದ್ದಿ ಓದಿದ್ದೀರಾ?: ಆರೋಗ್ಯ ಹಕ್ಕು ಮಸೂದೆ ವಿರುದ್ಧ ರಾಜಸ್ಥಾನದ ವೈದ್ಯರೇಕೆ ತಿರುಗಿ ಬಿದ್ದಿದ್ದಾರೆ?

ಏ.1ರಿಂದ ಅಗತ್ಯ ಔಷಧಿಗಳ ಬೆಲೆ ಏರಿಕೆಯಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, “ಇತ್ತೀಚೆಗೆ ಅಗತ್ಯ ಔಷಧಿಗಳ ದರ ಏರಿಕೆಯ ಬಗ್ಗೆ ಮಾತನಾಡಿದ ಅವರು ಮೋದಿ ಸರ್ಕಾರ ಜನರ ಜೇಬಿಗೆ ಕತ್ತರಿ ಹಾಕುವಂತಹ ಕೆಲಸ ಮಾಡುತ್ತಿದೆ” ಎಂದು ಟೀಕೆ ಮಾಡಿದ್ದಾರೆ.

ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಅವರು ಸಮರ್ಥನೆಯ ನೀಡಿದ್ದು, “651 ಅಗತ್ಯ ಔಷಧಿಗಳ ಬೆಲೆ ಏಪ್ರಿಲ್‌ನಿಂದ ಸರಾಸರಿ ಶೇ.6.73 ರಷ್ಟು ಕಡಿಮೆಯಾಗಿದೆ. ಎನ್‌ಎಲ್‌ಇಎಂನಲ್ಲಿರುವ ಔಷಧಿಗಳ ಪೈಕಿ 651 ಅಗತ್ಯ ಔಷಧಿಗಳು ಅಗ್ಗವಾಗಿದ್ದು, ಈ ಸಂಬಂಧ ಅಧಿಸೂಚನೆಯನ್ನು ಸಹ ಹೊರಡಿಸಲಾಗಿದೆ. ಈ ಕ್ರಮದಿಂದಾಗಿ, ಗ್ರಾಹಕರ ಜೇಬಿಗೆ ಹೊರೆ ಕಡಿಮೆಯಾಗಿ, ವಾರ್ಷಿಕ ಅಂದಾಜು ₹3,500 ಕೋಟಿಯಷ್ಟು ಉಳಿತಾಯವಾಗಲಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ...

ಅಮುಲ್ ಹಾಲಿನಲ್ಲಿ 98 ಪಟ್ಟು, ಮೊಸರಿನಲ್ಲಿ 2,100 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿವೆ: ವರದಿ

ಕನ್ನಡಿಗರ ಮೇಲೆ ಹೇರಲು ಉದ್ದೇಶಿಸಿದ್ದ ಗುಜರಾತ್‌ ಮೂಲದ 'ಅಮುಲ್‌' ಸಂಸ್ಥೆ ಉತ್ಪನ್ನಗಳ...

ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು,...