ಕೋವಿಡ್‌ | ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುತ್ತಿಲ್ಲ, ಭಯ ಬೇಡ: ದಿನೇಶ್‌ ಗುಂಡೂರಾವ್‌

Date:

  • ಇಂದಿನ ಸಭೆಯಲ್ಲಿ ಸಮಿತಿಯ ತಜ್ಞರೊಂದಿಗೂ ಚರ್ಚಿಸಿ ಮುಂದಿನ ಕ್ರಮದ ಬಗ್ಗೆ ತೀರ್ಮಾನ
  • ಜನ‌ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡುತ್ತಿಲ್ಲ

JN.1 ತಳಿ ವಿಚಾರದಲ್ಲಿ ಕೇಂದ್ರ ಸರ್ಕಾರದಿಂದ ಯಾವುದೇ ಮಾರ್ಗಸೂಚಿ ಪ್ರಕಟವಾಗಿಲ್ಲ. ಹೊಸ ವರ್ಷಾಚರಣೆಗೆ ನಿರ್ಬಂಧ ಹೇರುವ ಬಗ್ಗೆ ಈವರೆಗೂ ತೀರ್ಮಾನ ತೆಗೆದುಕೊಂಡಿಲ್ಲ. ಇಂದಿನ ಸಭೆಯಲ್ಲಿ ಸಮಿತಿಯ ತಜ್ಞರೊಂದಿಗೂ ಚರ್ಚಿಸಿ ಮುಂದಿನ ಕ್ರಮಗಳ ಬಗ್ಗೆ ತೀರ್ಮಾನಿಸ್ತೇವೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ತಿಳಿಸಿದರು.

ಮಂಗಳವಾರ ಸುದ್ದಿಗಾರರ ಜೊತೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಜನ‌ ಸೇರಬಾರದು, ಕಾರ್ಯಕ್ರಮ ಮಾಡಬಾರದು ಎಂದು ನಿಯಮ ಜಾರಿ ಮಾಡುತ್ತಿಲ್ಲ. ಆ ಮಟ್ಟಕ್ಕೆ ಭಯ ಆಗುವ ಅಗತ್ಯವಿಲ್ಲ. ಪಾಸಿಟಿವ್ ಬಂದವರು ಐಸೊಲೇಷನ್‌ನಲ್ಲಿದ್ದಾರೆ” ಎಂದರು.

“ಕೋವಿಡ್ ಸಂಬಂಧ ರಚಿಸಲಾಗಿರುವ ಕ್ಯಾಬಿನೆಟ್ ಉಪಸಮಿತಿ ಸಭೆಯಲ್ಲಿ JN.1 ಪ್ರಕರಣಗಳು ಸೇರಿದಂತೆ, ಕೋವಿಡ್ ನಿಯಂತ್ರಣ ಹಾಗೂ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು.‌ ಸದ್ಯಕ್ಕೆ ಯಾವುದೇ ಹೊಸ ನಿರ್ಬಂಧವಿಲ್ಲ. ಈಗಾಗಲೇ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿಯನ್ನ ಹೊರಡಿಸಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

“ಸಾರ್ವಜನಿಕ ಸ್ಥಳಗಳಲ್ಲಿ ಎಲ್ಲರೂ ಮಾಸ್ಕ್ ಧರಿಸುವುದು ಉತ್ತಮ ಎಂಬುದು ನಮ್ಮ ಸಲಹೆ. ಇನ್ನು 60 ವರ್ಷ ಮೇಲ್ಪಟ್ಟವರು, ಇತರ ಕಾಯಿಲೆ ಹೊಂದಿದವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ” ಎಂದು ಹೇಳಿದರು.

“JN.1 ಪ್ರಕರಣಗಳ ಸಂಬಂಧ ಯಾರು ಹೊಸದಾಗಿ ಗಾಬರಿಪಡುವ ಅಗತ್ಯವಿಲ್ಲ.‌ ಬಹುತೇಕ JN.1 ಪ್ರಕರಣಗಳು ಬೆಂಗಳೂರಿನಲ್ಲೇ ಪತ್ತೆಯಾಗಿವೆ. ಬೆಂಗಳೂರಿನಲ್ಲಿ – 20, ಮೈಸೂರು – 4, ಮಂಡ್ಯ – 3 ಸೇರಿದಂತೆ ರಾಮನಗರದಲ್ಲಿ – 1 ಒಮೆಕ್ರಾನ್ ಉಪತಳಿ JN.1 ಪತ್ತೆಯಾಗಿದ್ದು, ಇಲ್ಲಿಯವರೆಗೆ ಕೋವಿಡ್ ಬಂದವರಲ್ಲಿ ಮೂವರು ಸಾವನ್ನಪ್ಪಿರುವುದು ವರದಿಯಾಗಿದೆ. ಸಾವನ್ನಪ್ಪಿದವರಲ್ಲೂ JN.1 ಪಾಸಿಟಿವ್ ಇದ್ದಿದ್ದು ವರದಿಯಲ್ಲಿ ಬೆಳಕಿಗೆ ಬಂದಿದೆ” ದಿನೇಶ್ ಗುಂಡೂರಾವ್ ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...