ಡೆಂಗಿ ಜ್ವರ: ಅನುಸರಿಸಬೇಕಾದ ಮತ್ತು ಪಾಲಿಸಬಾರದ ಕ್ರಮಗಳೇನು?

Date:

ಕರ್ನಾಟಕದಲ್ಲಿ ಡೆಂಗಿ ಸೋಂಕಿತರ ಸಂಖ್ಯೆ 2022 ಮೇ 15ರಿಂದ ಇಲ್ಲಿಯವರೆಗೂ 1,716 ಪ್ರಕರಣಗಳು ವರದಿಯಾಗಿದೆ. ಅದಲ್ಲದೆ, ಮೇ 16 ರಾಷ್ಟ್ರೀಯ ಡೆಂಗಿ ದಿನ ಆಚರಿಸುತ್ತಿರುವ ಕಾರಣ ಡೆಂಗಿ ಜ್ವರದ ಬಗ್ಗೆ ಎಚ್ಚರವಿರಲಿ ಎಂದು ಪ್ರಕಟಣೆ ಹೊರಡಿಸಿದೆ

ಡೆಂಗಿ ಜ್ವರದಿಂದಾಗುವ ಅಪಾಯಗಳು ಮತ್ತು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳು, ರೋಗ ಲಕ್ಷಣ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಅನುಸರಿಸಬೇಕಾದ ಮತ್ತು ಪಾಲಿಸಬಾರದ ಕ್ರಮದ ಬಗ್ಗೆ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

ದೇಶದಲ್ಲಿ ಪ್ರತಿ ವರ್ಷ ಮೇ 16ರಂದು ‘ರಾಷ್ಟ್ರೀಯ ಡೆಂಗಿ ದಿನ’ವನ್ನು ಆಚರಿಸಲಾಗುತ್ತದೆ. ಅದಲ್ಲದೆ ಬೇಸಿಗೆ ಸಮಯದಲ್ಲಿ ಡೆಂಗಿ ಪ್ರಕರಣಗಳು ಬಹುತೇಕ ಹೆಚ್ಚಳವಾಗುವ ಸಂಭವವೂ ಇರುವ ಕಾರಣ ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮ ಬಿಡುಗಡೆ ಮಾಡಿದೆ.

ಬೆಂಗಳೂರಿಗರನ್ನು ಹೆಚ್ಚು ಕಾಡುವ ಡೆಂಗಿ ಜ್ವರ, ಮೇ ಮತ್ತು ಡಿಸೆಂಬರ್ ಈ ಪ್ರಕರಣಗಳು ಹೆಚ್ಚಾಗುತ್ತವೆ ಮತ್ತು ಆಗಸ್ಟ್ ಮತ್ತು ಅಕ್ಟೋಬರ್ ನಡುವೆ ಗರಿಷ್ಠ ಮಟ್ಟವನ್ನು ತಲುಪುತ್ತವೆ ಎನ್ನಲಾಗಿದೆ. ಡೆಂಗಿ ಬಾಧಿತರಲ್ಲಿ ಯಾವುದೇ ರೋಗ ಲಕ್ಷಣ ಹೆಚ್ಚಾಗಿ ಕಂಡುಬರುವುದಿಲ್ಲ. 7 ದಿನಗಳ ಬಳಿಕ ಒಂದೊಂದೇ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ. ಸಾಮಾನ್ಯವಾಗಿ ತಲೆನೋವು, ಮೈ ಕೈ ನೋವು, ಕೀಲು ನೋವು, ವಾಕರಿಕೆ, ವಾತ, ತುರಿಕೆ, ಕಣ್ಣುಗಳ ಹಿಂಭಾಗ ನೋವು, ದೇಹದ ಅಲ್ಲಲ್ಲಿ ಕಲೆಗಳು ಕಾಣಿಸಿಕೊಳ್ಳಲಾರಂಭಿಸುತ್ತವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೊಳ್ಳೆಗಳ ಅಧಿಕ ಉತ್ಪತ್ತಿಗೆ ಕಾರಣವೇನು?

ಈಡಿಸ್ ಸೊಳ್ಳೆಗಳು ಹಗಲು ಹೊತ್ತಿನಲ್ಲಿ ಕಚ್ಚುತ್ತದೆ. ಇವುಗಳು ಸಂಗ್ರಹಿಸಿಟ್ಟ ತಿಳಿ ನೀರಿನಲ್ಲಿ ಮೊಟ್ಟೆ ಇಟ್ಟು ಸಂತಾನೋತ್ಪತ್ತಿ ಮಾಡುತ್ತದೆ. ಜ್ವರವು ಸಾಮಾನ್ಯ ಜ್ವರ, ಡೆಂಗೆ ಹೆಮೊರೈಜಿನ್‌ (ದೇಹದಲ್ಲಿ ನೀರಿನ ಅಂಶ ಕಡಿಮೆಯಾಗುವುದು) ಮತ್ತು ಡೆಂಗೆ ಶಾಕ್‌ ಸಿಂಡ್ರೋಮ್‌ (ದೇಹದಲ್ಲಿ ರಕ್ತ ಸ್ರಾವವಾಗಿ ರೋಗಿ ಗಂಭೀರ ಹಂತಕ್ಕೆ ತಲುಪುವ ಸಾಧ್ಯತೆಗಳಿರುತ್ತವೆ) ಎಂಬ ಮೂರು ಹಂತಗಳಲ್ಲಿಕಾಣಿಸಿಕೊಳ್ಳುತ್ತದೆ. ಕೆಲವೊಮ್ಮೆ ರೋಗಿಗೆ ರಕ್ತ (ಪ್ಲೇಟ್‌ಲೆಟ್ಸ್‌) ನೀಡುವುದು ಅನಿವಾರ್ಯವಾಗುತ್ತದೆ.

ಈ ಸುದ್ದಿ ಓದಿದ್ದೀರಾ?: ರೋಗಿಗೆ ಜನೌಷಧವನ್ನೇ ಸೂಚಿಸಿ: ಆರೋಗ್ಯ ಸಚಿವಾಲಯ

ಡೆಂಗಿ ಜ್ವರ ನಿಯಂತ್ರಣ ಅನುಸರಿಸಬೇಕಾದ ಕ್ರಮ

ಮನೆಯಲ್ಲಿ ತೊಟ್ಟಿ, ಬ್ಯಾರೆಲ್, ಡ್ರಂಗಳಲ್ಲಿನ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಉಜ್ಜಿ ತೊಳೆದು ಪುನಃ ನೀರು ತುಂಬಿಸುವುದು. ಮತ್ತು ತೊಟ್ಟಿ. ಬ್ಯಾರೆಲ್, ಡ್ರಂಗಳನ್ನು ಯಾವಾಗಲೂ ಮುಚ್ಚಿಡುವುದು. ಮನೆಯ ಸುತ್ತ ಮುತ್ತ ಬಿಸಾಡಿರುವ ವಸ್ತುಗಳಲ್ಲಿ ಮಳೆ ನೀರು ಶೇಖರಣೆಯಾಗದಂತೆ ಎಚ್ಚರಿಕೆ ವಹಿಸುವುದು. ಎಲ್ಲ ಸರ್ಕಾರಿ ಮತ್ತು ಖಾಸಗಿ ಕಛೇರಿ ಹಾಗೂ ಸಂಸ್ಥೆಗಳ ಒಳಾಂಗಣ ಹಾಗೂ ಹೊರಾಂಗಣಗಳಲ್ಲಿ ಈಡಿಸ್ ಸೊಳ್ಳೆಯ ಉತ್ಪತ್ತಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು.

ರೋಗ ಲಕ್ಷಣ ಕಂಡು ಬಂದರೆ ಪಾಲಿಸಬೇಕಾದ ಕ್ರಮ

ಕುದಿಸಿ ಆರಿಸಿದ ಉಗುರು ಬೆಚ್ಚಗಿನ ನೀರನ್ನೇ ಕುಡಿಯಬೇಕು. ಜ್ವರ ಬಾಧಿತರು ತಣ್ಣೀರನ್ನು ಕುಡಿಯಲೇಬಾರದು. ಸ್ನಾನಕ್ಕೂ ಬಿಸಿನೀರನ್ನೇ ಬಳಸಿ. ತಲೆ ಸ್ನಾನದಿಂದ ಶೀತ ಅಧಿಕವಾಗಿ ಜ್ವರ, ತಲೆನೋವು ಹೆಚ್ಚಾಗುವ ಸಾಧ್ಯತೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ಗರ್ಭಿಣಿಯರು ಸೊಳ್ಳೆ ಪರದೆಯನ್ನು ಬಳಸಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ...

ಅಮುಲ್ ಹಾಲಿನಲ್ಲಿ 98 ಪಟ್ಟು, ಮೊಸರಿನಲ್ಲಿ 2,100 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿವೆ: ವರದಿ

ಕನ್ನಡಿಗರ ಮೇಲೆ ಹೇರಲು ಉದ್ದೇಶಿಸಿದ್ದ ಗುಜರಾತ್‌ ಮೂಲದ 'ಅಮುಲ್‌' ಸಂಸ್ಥೆ ಉತ್ಪನ್ನಗಳ...

ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು,...