ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ಅವಕಾಶ

Date:

ರೋಗಿಗಳಿಗೆ ಸೂಕ್ತ ಮಾರ್ಗದರ್ಶನ ಹಾಗೂ ಆತ್ಮವಿಶ್ವಾಸ ತುಂಬುವ ಅಗತ್ಯವಿದೆ. ಶಸ್ತ್ರಚಿಕಿತ್ಸೆಗಳ ಕುರಿತು ಉಚಿತವಾಗಿ 2ನೇ ವೈದ್ಯಕೀಯ ಅಭಿಪ್ರಾಯ ಪಡೆಯಲು ಅವಕಾಶ ನೀಡಲಾಗುತ್ತದೆ. ಅದಕ್ಕಾಗಿ, ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ 1800 4258 330 ಸಹಾಯವಾಣಿ ತೆರೆಯಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

“ಸರ್ಜರಿಗಳ ಅವಶ್ಯಕತೆ ಇದೆಯೋ, ಇಲ್ಲವೋ ಎಂಬುದರ ಬಗ್ಗೆ ಸಾರ್ವಜನಿಕರಲ್ಲಿ ಗೊಂದಲಗಳಿರುತ್ತವೆ. ಕೆಲವೊಮ್ಮೆ ಶಸ್ತ್ರಚಿಕಿತ್ಸೆಗಳ ಅಗತ್ಯತೆ ಇರುವುದಿಲ್ಲ.‌ ಇಂಥಹ ಸಂದರ್ಭಗಳಲ್ಲಿ ಸಾರ್ವಜನಿಕರಿಗೆ ನುರಿತ ತಜ್ಞ ವೈದ್ಯರಿಂದ ಎರಡನೇ ವೈದ್ಯಕೀಯ ಅಭಿಪ್ರಾಯ ಮುಖ್ಯ. ಕ್ಷಿಷ್ಟಕರ ಶಸ್ತ್ರಚಿಕಿತ್ಸೆಗಳ ಕುರಿತು ಸಾರ್ವಜನಿಕರು ತಜ್ಞ ವೈದ್ಯರಿಂದ ಸೂಕ್ತ ವೈದ್ಯಕೀಯ ಮಾಹಿತಿ ಪಡೆಯಲು ‘ಉಚಿತ ಎರಡನೇ ವೈದ್ಯಕೀಯ ಅಭಿಪ್ರಾಯ’ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ಅವರು ಹೇಳಿದ್ದಾರೆ.

“ಆರೋಗ್ಯ ಸುರಕ್ಷಾ ಟ್ರಸ್ಟ್ ಅಡಿ ತೆರೆಯಲಾಗಿರುವ 1800 4258 330 ಸಹಾಯವಾಣಿಗೆ ರೋಗಿಗಳು, ಸಾರ್ವಜನಿಕರು ಕರೆ ಮಾಡಿ ಉಚಿತವಾಗಿ ನುರಿತ ವೈದ್ಯರಿಂದ ಶಸ್ತ್ರಚಿಕಿತ್ಸೆಗಳ ಅವಶ್ಯಕತೆ ಇದೆಯೋ ಇಲ್ಲವೋ ಎಂಬುದರ ಕುರಿತು ಅಭಿಪ್ರಾಯ ಪಡೆಯಬಹುದು. ಪ್ರಾಥಮಿಕ ಹಂತದಲ್ಲಿ TKR/THR ಚಿಕಿತ್ಸಾ ವಿಧಾನಗಳಿಗೆ ಎರಡನೇ ವೈದ್ಯಕೀಯ ಅಭಿಪ್ರಾಯ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಇತರ ಕ್ಷಿಷ್ಟಕರ ಶಸ್ತ್ರಚಿಕಿತ್ಸೆಗಳ ಬಗ್ಗೆಯೂ ತಜ್ಞ ವೈದ್ಯರಿಂದ ಸಾರ್ವಜನಿಕರಿಗೆ ಅಗತ್ಯ ವೈದ್ಯಕೀಯ ಅಭಿಪ್ರಾಯ ದೊರಕಿಸಿಕೊಡಲು ಯೋಜಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರೋಗ ನಿರ್ಣಯ ಮತ್ತು ಚಿಕಿತ್ಸಾ ವಿಧಾನದ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳುವುದರಿಂದ ರೋಗಿಗೆ ಹಾಗೂ ಅವರ ಕುಟುಂಬಕ್ಕೆ ಶಸ್ತ್ರಚಿಕಿತ್ಸೆಯ ಕುರಿತು ಆತಂಕ ಹಾಗೂ ಒತ್ತಡವನ್ನು ಕಡಿಮೆ ಮಾಡಬಹುದು. ಮನಸ್ಸಿಗೆ ಶಾಂತಿ ಸಿಗುತ್ತದೆ. ಶಸ್ತ್ರಚಿಕಿತ್ಸೆಗಾಗಿ ತಯಾರಿ, ಚೇತರಿಕೆಯ ಸಮಯ ಮತ್ತು ಶಸ್ತ್ರಚಿಕಿತ್ಸೆಯ ನಂತರದ ಪುನರ್‌ವಸತಿ ಬಗ್ಗೆ ಸಂಪೂರ್ಣವಾಗಿ ಅರ್ಥ ಮಾಡಿಕೊಳ್ಳಲು ಸಾಧ್ಯವಾಗುತ್ತದೆ” ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

“ಸಂಧಿವಾತ, ವಯಸ್ಸಿಗೆ ಸಂಬಂಧಿಸಿದ ಕೀಲುಗಳ ಕ್ಷೀಣತೆ ಮತ್ತು ಗಾಯಗಳ ಹರಡುವಿಕೆಯಿಂದಾಗಿ ಮೊಣಕಾಲು ಬದಲಿ ಮತ್ತು ಸೊಂಟ (Hip) ಬದಲಿಗಳಂತಹ ಶಸ್ತ್ರಚಿಕಿತ್ಸೆಗಳು ಹೆಚ್ಚಾಗುತ್ತಿವೆ. ಇಂತಹ ತೊಂದರೆಗಳನ್ನು ಅನುಭವಿಸುತ್ತಿರುವ ರೋಗಿಗಳಿಗೆ ಸಾಮಾನ್ಯವಾಗಿ ಚಿಕಿತ್ಸೆಯ ಕುರಿತು ನಿರ್ಧಾರ ಕೈಗೊಳ್ಳಲು ಸೂಕ್ತವಾದ ಮಾಹಿತಿ ಲಭ್ಯವಿಲ್ಲದೆ ಗೊಂದಲಕ್ಕೀಡಾಗುತ್ತಾರೆ. ಆದ್ದರಿಂದ ರೋಗಿಗಳಿಗೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ನೀಡುವ ಸಲುವಾಗಿ ಸಾರ್ವಜನಿಕರಿಗೆ ಉಚಿತ ಸಹಾಯವಾಣಿ ತೆರೆಯಲಾಗಿದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...