ಮಹಿಳೆಯರನ್ನು ಗರ್ಭಕೋಶ ಕ್ಯಾನ್ಸರ್‌ನಿಂದ ರಕ್ಷಿಸಲು ಎಚ್‌ಪಿವಿ ಲಸಿಕೆ ಅತ್ಯಗತ್ಯ: ಡಾ. ಮಂಗಳ

Date:

ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತಿದೆ. ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು ಮಹಿಳೆಯರು ಎಚ್‌ಪಿವಿ ಲಸಿಕೆ ಪಡೆಯುವುದು ಅತ್ಯಗತ್ಯ ಎಂದು ವೈದ್ಯ ಮಂಗಳ ತಿಳಿಸಿದ್ದಾರೆ.

ಕೋಲಾರ ಜಿಲ್ಲೆಯ ವೇಮಗಲ್ಲು ಗ್ರಾಮದಲ್ಲಿ ‘ಪ್ರಾಜೆಕ್ಟ್ ಶೀಲ್ಡ್ ಕರ್ನಾಟಕ’ ಅಭಿಮಾನದಡಿ ಶಾಲಾ ವಿದ್ಯಾರ್ಥಿನಿಯರಿಗೆ ಎಬ್‌ಪಿವಿ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “WHO ಪ್ರಕಾರ, ಇತ್ತೀಚೆಗೆ ಜಾಗತಿಕವಾಗಿ 6 ​​ಲಕ್ಷ ಹೊಸ ಪ್ರಕರಣಗಳು ವರದಿಯಾಗಿವೆ. ಅವುಗಳಲ್ಲಿ ಅರ್ಧದಷ್ಟು ಪ್ರಕರಣಗಳಲ್ಲಿ ಮಹಿಳೆಯರ ಸಾವಿಗೆ ಕಾರಣವಾಗಿವೆ. ಗರ್ಭಕೋಶ ಕ್ಯಾನ್ಸರ್‌ನಿಂದ ಮೃತಪಟ್ಟವರಲ್ಲಿ ಹೆಚ್ಚಿನವರು ಬಡವರು, ಕಡಿಮೆ ಆದಾಯವುಳ್ಳ ಕುಟುಂಬಗಳಿಗೆ ಸೇರಿದವರಾಗಿದ್ದಾರೆ” ಎಂದು ತಿಳಿಸಿದರು.

“ಮಹಿಳೆಯರು ಗರ್ಭಕೋಶ ಕ್ಯಾನ್ಸರ್‌ಗೆ ತುತ್ತಾಗದಂತೆ ರಕ್ಷಿಸಲು ಬಹುಮುಖಿ ವಿಧಾನಗಳ ಅಗತ್ಯವಿದೆ. ಜಾಗೃತಿಯಿಂದ ಹಿಡಿದು ಸಮುದಾಯ ತಲುಪುವಿಕೆ, HPV ಲಸಿಕೆಗಳ ವಿತರಣೆ ಸೇರಿದಂತೆ ನಾನಾ ರೀತಿಯಲ್ಲಿ ಕೆಲಸ ಮಾಡಬೇಕಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಭೂಮಿಯನ್ನು ಕೃಷಿಯೇತರ ಉದ್ದೇಶಕ್ಕೆ ಬಳಸುವುದರಿಂದ ಉಂಟಾಗುವ ಬಿಕ್ಕಟ್ಟುಗಳೇನು ಬಲ್ಲಿರಾ?

“ಸ್ಥಳೀಯ ವೈದ್ಯರು, ಪುರಸಭೆಯ ಕೆಲಸಗಾರರು ಮತ್ತು ಆರೋಗ್ಯ ರಕ್ಷಣಾ ಸ್ವಯಂಸೇವಕರ ಸಹಾಯದಿಂದ ಪ್ರಾಜೆಕ್ಟ್ ಶೀಲ್ಡ್ ಕರ್ನಾಟಕ ಅಭಿಯಾನವನ್ನು ನಡೆಸಲಾಗುತ್ತಿದೆ. ಕರ್ನಾಟಕದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಎಲ್ಲ ಕುಟುಂಬಗಳ ಮಹಿಳೆಯರಿಗೆ ಎಚ್‌ಪಿವಿ ಲಸಿಕೆಯ ತಲುಪುವಿಕೆ, ಲಭ್ಯತೆ ಮತ್ತು ಬಳಕೆಯನ್ನು ವಿಸ್ತರಿಸುವುದು ಯೋಜನೆಯ ಉದ್ದೇಶವಾಗಿದೆ” ಎಂದರು.

“ಗ್ರಾಮದಲ್ಲಿ 9-15 ವರ್ಷ ವಯಸ್ಸಿನ 175ಕ್ಕೂ ಹೆಚ್ಚು ಹೆಣ್ಣು ಮಕ್ಕಳಿಗೆ ಎಚ್‌ಪಿವಿ ಲಸಿಕೆ ನೀಡಲಾಗಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...