108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿ ಅಕ್ರಮ; ವಿಚಾರಣೆ ನಡೆಸುತ್ತೇವೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್

Date:

108 ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಆರೋಪ ಕೇಳಿಬಂದಿದ್ದು, ಈ ಬಗ್ಗೆ ವಿಚಾರಣೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡುತ್ತೇನೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, “ವಿಚಾರಣೆ ಬಳಿಕ ಏನು ಕ್ರಮ ತೆಗೆದುಕೊಳ್ಳಬೇಕೋ ತೆಗೆದುಕೊಳ್ಳುತ್ತೇವೆ. ಜಿವಿಕೆ ಕಂಪನಿ ನಮಗೆ ಏಜೆನ್ಸಿ. ಅವರೇ ನಿರ್ವಹಣೆ ಮಾಡುತ್ತಿದ್ದಾರೆ. ಆ ಬಗ್ಗೆ ಸಾಕಷ್ಟು ಕುಂದುಕೊರತೆ, ಸಮಸ್ಯೆಗಳಿರುವುದು ಗಮನದಲ್ಲಿದೆ” ಎಂದರು.

ಆ್ಯಂಬುಲೆನ್ಸ್ ಚಾಲಕರ ನೇಮಕಾತಿಯಲ್ಲಿ ಅಕ್ರಮ ಎಸಗಲಾಗಿದೆ ಎಂದು ರಾಜ್ಯ ಆ್ಯಂಬುಲೆನ್ಸ್ ಚಾಲಕರ ಸಂಘ ಆರೋಪ ಮಾಡಿದೆ. ಅರ್ಹತೆ ಇಲ್ಲದ 250ಕ್ಕೂ ಹೆಚ್ಚು ಚಾಲಕರನ್ನ ನೇಮಕ ಮಾಡಿಕೊಂಡ GVK ಕಂಪನಿ ಕೋಟ್ಯಂತರ ರೂ. ಭ್ರಷ್ಟಾಚಾರ ಮಾಡಿದೆ. ಸರ್ಕಾರದ ಆದೇಶ ಧಿಕ್ಕರಿಸಿ ಒಬ್ಬೊಬ್ಬರಿಂದ 3 ಲಕ್ಷ ರೂ. ಪಡೆದು ನೇಮಕ ಮಾಡಿರುವ ಆರೋಪ ಕೇಳಿಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...