ಏಡ್ಸ್ ರೋಗ ಹರಡುವಿಕೆಯನ್ನು ತಡೆಯಲು ಸರ್ಕಾರವು ಹಲವು ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. 2030ರ ವೇಳೆಗೆ ‘ಎಚ್ಐವಿ’ ಹರಡುವಿಕೆಯನ್ನು ಶೂನ್ಯಕ್ಕೆ ಇಳಿಸಲು ಪ್ರಯತ್ನಗಳು ನಡೆಯುತ್ತಿವೆ. ಆದಾಗ್ಯೂ, ಇತ್ತೀಚಿನ ವರ್ಷಗಳಲ್ಲಿ ‘ಪುರುಷ ಸಲಿಂಗಿ’ಗಳನ್ನು ಏಡ್ಸ್ ರೋಗ ಹೆಚ್ಚಳವಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಮೈಸೂರಿನಲ್ಲಿ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಪುರುಷ ಸಲಿಂಗಿಗಳಲ್ಲಿ ಎಚ್ಐವಿ ಸೋಂಕು ಹೆಚ್ಚಾಗಿ ಕಂಡುಬರುತ್ತಿರುವುದು ಕಳವಳ ಮೂಡಿಸಿದೆ. ಬೇರೆ ಬೇರೆ ಆ್ಯಪ್ಗಳ ಮೂಲಕ ಮತ್ತು ಹಾಸ್ಟೆಲ್ಗಳಲ್ಲಿ ಸ್ನೇಹಿತರ ಸಂಪರ್ಕ ಸಾಧಿಸುತ್ತಾರೆ. ಇದು ಸೋಂಕಿನ ಹರಡುವಿಕೆಗೆ ಕಾರಣವಾಗಿದೆ. ಇದನ್ನು ತಡೆಯಲು ಹೆಚ್ಚಿನ ಶ್ರಮ ಹಾಕಬೇಕಾಗಿದೆ” ಎಂದು ಹೇಳಿದ್ದಾರೆ.
“ಕಳೆದ 10 ವರ್ಷಗಳಲ್ಲಿ (2004ರಿಂದ 2025) ಒಂದು ಲಕ್ಷಕ್ಕೂ ಅಧಿಕ ಜನರು ಏಡ್ಸ್ಗೆ ಬಲಿಯಾಗಿದ್ದಾರೆ. ಏಡ್ಸ್ ರೋಗ ತಡೆಗಾಗಿ ಹೆಚ್ಚು ಜಾಗೃತಿ ಮೂಡಿಸುವ ಅಗತ್ಯವಿದೆ. ಸರ್ಕಾರ, ಪೋಷಕರು, ಶಿಕ್ಷಕರು, ಸಮಾಜ ಹಾಗೂ ಮಾಧ್ಯಮಗಳ ಸಹಕಾರದಿಂದ ಎಚ್ಐವಿ ಹರಡುವಿಕೆ ಕುರಿತು ಹೆಚ್ಚಿನ ಜಾಗೃತಿ ಮೂಡಿಸಬೇಕು. ಅರಿವು ಹೆಚ್ಚಿಸಬೇಕು” ಎಂದಿದ್ದಾರೆ.
“ಏಡ್ಸ್ ಬಂದಾಗ ಸೂಕ್ತ ಚಿಕಿತ್ಸೆ ಪಡೆದುಕೊಂಡು ಎಲ್ಲರಂತೆ ಬದುಕಬಹುದು. ಸರ್ಕಾರದಿಂದ ಮಾನಸಿಕ ಧೈರ್ಯ ತುಂಬುವುದರ ಜೊತೆಗೆ ಉಚಿತವಾಗಿ ಚಿಕಿತ್ಸೆ, ಮಡಿಸಿನ್ ಒದಗಿಸಲಾಗುತ್ತಿದೆ” ಎಂದು ತಿಳಿಸಿದರು.




