ತಾಯಿ, ಮಗು ಸಾವು ಸೂಚ್ಯಂಕ; 10 ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಅಗ್ರಸ್ಥಾನ

Date:

  • 2020ರಲ್ಲಿ ಭಾರತದಲ್ಲಿ ಗರ್ಭಾವಸ್ಥೆ ಮತ್ತಿತ್ತರ ಕಾರಣದಿಂದ 7,88,000 ಸಾವು
  • ತಾಯಂದಿರ ಮತ್ತು ನವಜಾತ ಶಿಶುಗಳ ಬಗ್ಗೆ ಕಾಳಜಿ ಇಲ್ಲದಿರುವುದು ಸಾವಿಗೆ ಕಾರಣ

ಆರೋಗ್ಯ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆಯಾಗಿ ಆಧುನಿಕ ತಂತ್ರಜ್ಞಾನಗಳ ಅಭಿವೃದ್ಧಿಯಾಗಿದೆ. ಆದರೂ, ಗರ್ಭಾವಸ್ಥೆ ಸಮಯದಲ್ಲೇ ತಾಯಿ, ಶಿಶುಗಳ ನಿಧನ ಪ್ರಕರಣಗಳಲ್ಲಿ ಭಾರತ ಅಗ್ರಸ್ಥಾನ ಪಡೆದಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ.

ಹೊಸ ವರದಿ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆ, “ಗರ್ಭಾವಸ್ಥೆ, ಪ್ರಸವ ಅಥವಾ ಮಗುವಿನ ಜನಿಸಿದ ಒಂದು ವಾರದೊಳಗೆ ತಾಯಂದಿರು ಮತ್ತು ಮಕ್ಕಳು ಸಾವನ್ನಪ್ಪಿರುವ ಪಟ್ಟಿಯಲ್ಲಿ ಭಾರತವು ಅಗ್ರಸ್ಥಾನ ಪಡೆದಿದೆ. ಒಟ್ಟು ಸಾವುಗಳಲ್ಲಿ ಶೇ.60ರಷ್ಟು ಸಾವುಗಳು 10 ದೇಶಗಳಲ್ಲಿಯೇ ಸಂಭವಿಸುತ್ತಿವೆ. ನೈಜೀರಿಯಾ, ಪಾಕಿಸ್ತಾನ, ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಕಾಂಗೋ, ಇಥಿಯೋಪಿಯಾ, ಬಾಂಗ್ಲಾದೇಶ ಮತ್ತು ಚೀನಾ ದೇಶಗಳು ಭಾರತದ ನಂತರದ ಸ್ಥಾನದಲ್ಲಿವೆ.

ವಿಶ್ವದಾದ್ಯಂತ ನಡೆಸಿದ ಸಮೀಕ್ಷೆಯಲ್ಲಿ ಗರ್ಭಾವಸ್ಥೆಯಲ್ಲಿರುವ ಮಹಿಳೆಯರು ಏಳು ನಿಮಿಷಕ್ಕೊಬ್ಬರು ಮೃತಪಡುತ್ತಿದ್ದಾರೆ. ವರ್ಷಕ್ಕೆ 4.5 ದಶಲಕ್ಷ ಜನರು ಸಾವನ್ನಪ್ಪುತ್ತಿದ್ದಾರೆ ಎಂದು ವಿಶ್ವಸಂಸ್ಥೆ ಮಂಗಳವಾರ ಬಿಡುಗಡೆ ಮಾಡಿದ ವರದಿಯಲ್ಲಿ ಹೇಳಿದೆ.  

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2020-21 ಸಾಲಿನ ವರದಿಯ ಪ್ರಕಾರ ಗರ್ಭಾವಸ್ಥೆಯಲ್ಲಿ ಮೃತಪಟ್ಟ ತಾಯಂದಿರ ಸಂಖ್ಯೆ 0.29 ಲಕ್ಷ ಮತ್ತು ಹುಟ್ಟಬೇಕಿದ್ದ ಶಿಶುಗಳು ಮೃತಪಟ್ಟಿದ್ದು 1.9 ಲಕ್ಷ, ನವಜಾತ ಶಿಶುಗಳು ಮೃತಪಟ್ಟ ಸಂಖ್ಯೆ 2.3 ಲಕ್ಷವಿದೆ. ಒಟ್ಟಾರೆಯಾಗಿ 4.5 ದಶ ಲಕ್ಷ ಗರ್ಭಾವಸ್ಥೆ, ಪ್ರಸವ ಅಥವಾ ಮಗುವಿನ ಜನನದ ವಾರದ ಬಳಿಕ ಮೃತಪಟ್ಟಿರುವ ಪ್ರಕರಣಗಳು ವರದಿಯಾಗಿದೆ. 2020ರಲ್ಲಿ ಗರ್ಭಾವಸ್ಥೆ ಸೇರಿದಂತೆ ಮತ್ತಿತ್ತರ ನ್ಯೂನತೆಗಳಿಂದ ಭಾರತದಲ್ಲಿ 7,88,000 ಮಂದಿ ಮೃತಪಟ್ಟಿದ್ದಾರೆ.

ಗರ್ಭಿಣಿಯರು ಮತ್ತು ನವಜಾತ ಶಿಶುಗಳ ಮರಣದ ಸಂಖ್ಯೆ ಪ್ರಪಂಚದಾದ್ಯಂತ ಅನಿರೀಕ್ಷಿತವಾಗಿ ಏರಿಕೆಯಾಗುತ್ತಿದೆ. ಕೋವಿಡ್​ ಸಾಂಕ್ರಾಮಿಕ ಕೂಡ ಆರೋಗ್ಯ ವ್ಯವಸ್ಥೆಯ ಮೇಲೆ ದೊಡ್ಡ ಹೊಡೆತ ನೀಡಿತ್ತು ಎಂದು ವಿಶ್ವಸಂಸ್ಥೆಯ ಮಕ್ಕಳ ಮತ್ತು ಹರೆಯದವರ ಆರೋಗ್ಯ ತಜ್ಞರಾಗಿರುವ ಡಾ.ಅಂಶು ಬ್ಯಾನರ್ಜಿ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಚುನಾವಣೆ ಕರ್ತವ್ಯ | ಆಶಾ ಕಾರ್ಯಕರ್ತೆಯರಿಗೆ ಸಿಗದ ಗೌರವಧನ

ತಾಯಂದಿರು ಅಥವಾ ಶಿಶುಗಳು ಮೃತಪಡದಂತೆ ಜಾಗೃತಿವಹಿಸಬೇಕೆಂದರೆ, ಅದಕ್ಕೆ ತಕ್ಕ ಕಾರ್ಯ ನಿರ್ವಹಿಸಬೇಕು. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹೆಚ್ಚಿನ ಮತ್ತು ಕೌಶಲ್ಯಯುತ ಹೂಡಿಕೆ ಮಾಡಬೇಕು. ಗರ್ಭಾವಸ್ಥೆಯಲ್ಲಿರುವ ಮಹಿಳೆಗೆ ಎಲ್ಲ ರೀತಿಯ ಆರೋಗ್ಯ ವ್ಯವಸ್ಥೆ, ಆಕೆ ಎಲ್ಲಿದ್ದರೂ ಲಭ್ಯವಿರುವಂತೆ ಮಾಡಿದರೆ ಮಾತ್ರ ತಾಯಿ ಮಗು ಸುರಕ್ಷಿತಾರಾಗಿರಲು ಸಾಧ್ಯ ಎಂದು ಅವರು ಹೇಳಿದ್ದಾರೆ.

ಕೋವಿಡ್​ ಬಡತನವನ್ನು ಹೆಚ್ಚಿಸಿದ್ದು, ಬಿಕ್ಕಟ್ಟು ಎದುರಿಸುವಂತೆ ಮಾಡಿದೆ. ಇದರಿಂದ ಆರೋಗ್ಯ ವ್ಯವಸ್ಥೆಯಲ್ಲಿ ಒತ್ತಡವೂ ಹೆಚ್ಚಾಗಿದೆ. 10ರಲ್ಲಿ ಒಂದು ದೇಶ ಮಾತ್ರ ಪ್ರಸ್ತುತ ಯೋಜನೆಗಳ ಜಾರಿಗೆ ಸಾಕಷ್ಟು ಧನಸಹಾಯ ಹೊಂದಿದೆ ಎಂದು ಇದೇ ವೇಳೆ ವರದಿ ವಿವರಿಸಿದೆ.

ಕೋವಿಡ್‌ನಿಂದಾಗಿ ಆರೋಗ್ಯ ಸೇವೆಗಳ ಮೇಲೆ ಪರಿಣಾಮ ಬೀರಿದೆ. ಜಗತ್ತಿನ ಕಾಲುಭಾಗದಷ್ಟು ದೇಶಗಳು ಗರ್ಭವಸ್ಥೆ ಮತ್ತು ಪ್ರಸವಪೂರ್ವ ಆರೈಕೆ ಮತ್ತು ಅನಾರೋಗ್ಯದ ಮಕ್ಕಳಿಗೆ ಸೇವೆ ನೀಡಲು ತೊಂದರೆ ಎದುರಿಸುತ್ತಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ವರದಿ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ...

ಅಮುಲ್ ಹಾಲಿನಲ್ಲಿ 98 ಪಟ್ಟು, ಮೊಸರಿನಲ್ಲಿ 2,100 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿವೆ: ವರದಿ

ಕನ್ನಡಿಗರ ಮೇಲೆ ಹೇರಲು ಉದ್ದೇಶಿಸಿದ್ದ ಗುಜರಾತ್‌ ಮೂಲದ 'ಅಮುಲ್‌' ಸಂಸ್ಥೆ ಉತ್ಪನ್ನಗಳ...

ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು,...