ಪೋಲಿಯೊ ಲಸಿಕೆ ಕೊರತೆ; ‘ರಾಷ್ಟ್ರೀಯ ಲಸಿಕಾ ದಿನ’ ರದ್ದು!

Date:

ಪೋಲಿಯೊ ಲಸಿಕೆಗಳ ಕೊರತೆಯಿಂದಾಗಿ ಈ ವರ್ಷದ ಪೋಲಿಯೊ ‘ರಾಷ್ಟ್ರೀಯ ಲಸಿಕಾ ದಿನ’ ವನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿದೆ. ಈ ವರ್ಷ, ಅಪಾಯ ಎದುರಿಸುತ್ತಿರುವ 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 200 ಜಿಲ್ಲೆಗಳ ಮೇಲೆ ಕೇಂದ್ರೀಕರಿಸಿ, ‘ಉಪ-ರಾಷ್ಟ್ರೀಯ ಪ್ರತಿರಕ್ಷಣೆ ದಿನ’ವನ್ನು(ಎಸ್‌ಎನ್‌ಐಡಿ) ಮಾತ್ರ ಆಯೋಜಿಸಲು ಮುಂದಾಗಿದೆ ಎಂದು ತಿಳಿದುಬಂದಿದೆ.

ಸರ್ಕಾರದ ಪ್ರಮುಖ ಕಾರ್ಯಕ್ರಮಗಳಲ್ಲಿ ‘ಪಲ್ಸ್ ಪೋಲಿಯೊ ಲಸಿಕೆ’ ಕಾರ್ಯಕ್ರಮವೂ ಒಂದು. ಪ್ರತಿ ವರ್ಷ ಒಂದು ‘ರಾಷ್ಟ್ರೀಯ ಪ್ರತಿರಕ್ಷಣೆ ದಿನ’ (ಎನ್‌ಐಡಿ) ಮತ್ತು ಎರಡು ‘ಉಪ-ರಾಷ್ಟ್ರೀಯ ಪ್ರತಿರಕ್ಷಣೆ ದಿನಗಳು’ (ಎಸ್‌ಎನ್‌ಐಡಿ) ನಡೆಸಲಾಗುತ್ತದೆ. ಈ ವೇಳೆ, ಐದು ವರ್ಷದ ಒಳಗಿನ ಮಕ್ಕಳಿಗೆ ಬಯೋ-ಓರಲ್ ಪೋಲಿಯೊ ಲಸಿಕೆ ನೀಡಲಾಗುತ್ತದೆ.

ಆದರೆ, ಈ ವರ್ಷ ಎನ್‌ಐಡಿ ನಡೆಸಲು ಅಗತ್ಯವಿರುವ ಪೋಲಿಯೊ ಲಸಿಕೆ ಇಲ್ಲದ ಕಾರಣ, ಕೇವಲ ಎರಡು ಎಸ್‌ಎನ್‌ಐಗಳನ್ನು ನಡೆಸಲು ಸರ್ಕಾರ ಮುಂದಾಗಿದೆ. ಅಸ್ಸಾಂ, ಬಿಹಾರ, ದೆಹಲಿ, ಹರಿಯಾಣ, ರಾಜಸ್ಥಾನ, ಮಹಾರಾಷ್ಟ್ರ, ಮಧ್ಯಪ್ರದೇಶ, ಪಂಜಾಬ್, ಗುಜರಾತ್, ಉತ್ತರಾಖಂಡ, ಉತ್ತರ ಪ್ರದೇಶ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್‌ ರಾಜ್ಯಗಳಲ್ಲಿ ಎಸ್‌ಎನ್‌ಐಡಿ ನಡೆಸಲು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೇಂದ್ರ ಆರೋಗ್ಯ ಸಚಿವಾಲಯದ ವಕ್ತಾರರು ಈ ವರ್ಷ ಎನ್‌ಐಡಿ ನಡೆಸುತ್ತಿಲ್ಲವೆಂದು ಖಚಿತಪಡಿಸಿದ್ದಾರೆ. ಆದರೆ, ಎರಡು ಎಸ್‌ಎನ್‌ಐಡಿಗಳನ್ನು ಯೋಜಿಸಲಾಗಿದೆ. ಮೊದಲನೆ ಕಾರ್ಯಕ್ರಮವನ್ನು ಮೇ 28 ರಂದು ಮತ್ತು ಎರಡನೆಯದನ್ನು ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆಸಲಾಗುತ್ತದೆ ಎಂದು ಅಧಿಕಾರಿಗಳು ಹೇಳಿರುವುದಾಗಿ ‘ದಿ ಪ್ರಿಂಟ್’ ವರದಿ ಮಾಡಿದೆ.

ಭಾರತವು ‘ಇನ್ಯಾಕ್ಟಿವ್ ಪೋಲಿಯೊ ಲಸಿಕೆ’ (ಐಪಿವಿ) ಮತ್ತು ಬಯೋ-ಓರಲ್ ಪೋಲಿಯೊ ಲಸಿಕೆ (ಬಿಒಪಿವಿ) ಅನ್ನು ಬಳಸುತ್ತದೆ. ಈ ಲಸಿಕೆಗಳು ಹೆಚ್ಚು ಸಾಂಕ್ರಾಮಿಕ ರೋಗ ಮತ್ತು ಪಾರ್ಶ್ವವಾಯುನಂತಹ ಪೋಲಿಯೊ ಸಂಬಂಧಿ ಕಾಯಿಲೆಗಳ ವಿರುದ್ಧ ಮಕ್ಕಳನ್ನು ರಕ್ಷಿಸುತ್ತವೆ.

ಈ ಸುದ್ದಿ ಓದಿದ್ದೀರಾ?: ರೋಗಿಗೆ ಜನೌಷಧವನ್ನೇ ಸೂಚಿಸಿ: ಆರೋಗ್ಯ ಸಚಿವಾಲಯ

ಭಾರತವು ಮಾರ್ಚ್ 2014ರಲ್ಲಿ ಪೋಲಿಯೊ ಮುಕ್ತ ರಾಷ್ಟ್ರವೆಂದು ಘೋಷಿಸಿಕೊಂಡಿತು. ಆದಾಗ್ಯೂ, ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಮತ್ತು ಜೀವಕ್ಕೆ ಬೆದರಿಕೆಯೊಡ್ಡುವ ರೋಗಗಳ ವಿರುದ್ಧ ಮಕ್ಕಳನ್ನು ರಕ್ಷಿಸಲು ಪೋಲಿಯೊ ಲಸಿಕೆ ನೀಡಲಾಗುತ್ತಿದೆ. ಈ ನಡುವೆ, ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಪೋಲಿಯೊ ಪ್ರಕರಣಗಳು ಏಕಾಏಕಿ ಹೆಚ್ಚುತ್ತಿರುವ ಕಾರಣ, ಈ ಲಸಿಕೆಗೆ ಬೇಡಿಕೆ ಹೆಚ್ಚಾಗಿದೆ.

“ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ‘ವೈಲ್ಡ್ ಪೋಲಿಯೊ ವೈರಸ್ ಟೈಪ್-1’ರ ಹರಡುವಿಕೆ ಹೆಚ್ಚಾಗಿದೆ. ಆಫ್ರಿಕಾ ಸೇರಿದಂತೆ ಕೆಲವು ದೇಶಗಳಲ್ಲಿ ‘ಪೋಲಿಯೊ ವೈರಸ್ ಟೈಪ್-2’ (ಸಿವಿಡಿಪಿವಿ ಟೈಪ್ 2) ಹರಡುತ್ತಿದೆ. ಈ ಕಾರಣಗಳಿಗಾಗಿ, ಮುನ್ನೆಚ್ಚರಿಕಾ ಭಾಗವಾಗಿ ಭಾರತವು ಅತಿ ಹೆಚ್ಚು ಪೋಲಿಯಾ ಕಾರ್ಯಕ್ರಮಗಳನ್ನು ನಡೆಸುತ್ತಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಸರ್ಕಾರಿ ಮೂಲಗಳ ಪ್ರಕಾರ, ಈ ವರ್ಷ ಎನ್‌ಐಡಿ ಫೆಬ್ರವರಿಯಲ್ಲಿ ನಡೆಯಬೇಕಿತ್ತು. ಆದರೆ, ಭಾರತ್ ಇಮ್ಯುನೊಲಾಜಿಕಲ್ಸ್ ಮತ್ತು ಬಯೋಲಾಜಿಕಲ್ಸ್ ಕಾರ್ಪೊರೇಷನ್ ಲಿಮಿಟೆಡ್ ಸಂಸ್ಥೆಗಳು ಆರೋಗ್ಯ ಸಚಿವಾಲಯಕ್ಕೆ ಅಗತ್ಯವಿದ್ದ ಸುಮಾರು 28 ಕೋಟಿ ಡೋಸ್ ಲಸಿಕೆಯನ್ನು ಪೂರೈಸಲು ವಿಫಲವಾಗಿವೆ” ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...