ಕೇರಳ: ಕೋಝಿಕ್ಕೋಡ್‌ನಲ್ಲಿ ಮತ್ತೊಂದು ನಿಫಾ ವೈರಸ್ ಸೋಂಕು ದೃಢ

Date:

ಕೇರಳದ ಕೋಝಿಕ್ಕೋಡ್‌ನಲ್ಲಿ ಮತ್ತೊಬ್ಬರಿಗೆ ನಿಫಾ ಸೋಂಕು ಪತ್ತೆಯಾಗಿದೆ ಎಂದು ಸರ್ಕಾರ ದೃಢಪಡಿಸಿದೆ.

ಸೋಂಕು ತಗುಲಿರುವ 39 ವರ್ಷದ ವ್ಯಕ್ತಿಯನ್ನು ಕೋಝಿಕ್ಕೋಡ್‌ನ ಆಸ್ಪತ್ರೆಯಲ್ಲಿ ನಿಗಾ ಇರಿಸಲಾಗಿದೆ. ಈ ಮೂಲಕ ಕೇರಳದಲ್ಲಿ ನಿಫಾ ವೈರಸ್‌ಗೆ ತುತ್ತಾಗಿರುವವರ ಸಂಖ್ಯೆ 6ಕ್ಕೇರಿದೆ.

ಆಸ್ಪತ್ರೆಯಲ್ಲಿ ನಿಗಾದಲ್ಲಿದ್ದ ಕೋಝಿಕ್ಕೋಡ್‌ನ ಚೆರುವನ್ನೂರಿನ 39 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ. ಈ ಹಿಂದೆ ನಿಫಾ ಸೋಂಕಿನಿಂದ ಮೃತಪಟ್ಟ ಇಬ್ಬರು ಚಿಕಿತ್ಸೆಗಾಗಿ ತೆರಳಿದ್ದ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗುರುವಾರ ಹನ್ನೊಂದು ರೋಗಲಕ್ಷಣಗಳೊಂದಿಗೆ ಪರೀಕ್ಷೆ ನೆಗೆಟಿವ್ ಬಂದಿದೆ. ನೆಗೆಟಿವ್ ಹೆಚ್ಚಾದಂತೆ ಈಗ ಹೆಚ್ಚಿನ ಜನರನ್ನು ಪರೀಕ್ಷಿಸಲಾಗುತ್ತಿದೆ ಮತ್ತು ಪುಣೆ ಕೋಝಿಕ್ಕೋಡ್‌ನಲ್ಲಿ ಮೊಬೈಲ್ ಪರೀಕ್ಷಾ ಸೌಲಭ್ಯವನ್ನು ಸ್ಥಾಪಿಸಲಾಗಿದೆ.

ಸೋಂಕಿತರ ಸಂಪರ್ಕಗಳನ್ನು ಪತ್ತೆಹಚ್ಚುವುದು ಮತ್ತು ಕಂಟೈನ್‌ಮೆಂಟ್ ವಲಯಗಳಂತಹ ತ್ವರಿತ ಕ್ರಮಗಳು ಸೋಂಕು ಹರಡುವುದನ್ನು ತಡೆಯಲು ಸಹಾಯ ಮಾಡುತ್ತಿವೆ ಎಂದು ಆರೋಗ್ಯ ಕಾರ್ಯದರ್ಶಿ ಮೊಹಮ್ಮದ್ ಹನೀಷ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಧ್ಯಪ್ರದೇಶ | ಹಸು ಮೇಯಿಸುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗುಂಡಿನ ಚಕಮಕಿ; ಐವರು ಸಾವು, 8 ಮಂದಿ ಗಾಯ

ಕರ್ನಾಟಕದಲ್ಲಿ ಕಟ್ಟೆಚ್ಚರ

ಪಕ್ಕದ ಕೇರಳ ರಾಜ್ಯದಲ್ಲಿ ನಿಫಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿರುವಂತೆ ಕರ್ನಾಟಕ ಸರ್ಕಾರ ಸಾರ್ವಜನಿಕರಿಗೆ ಸಲಹೆ-ಸೂಚನೆಗಳನ್ನು ಹೊರಡಿಸಿದೆ.

ಕೇರಳದಲ್ಲಿ ಸೋಂಕು ಪೀಡಿತ ಪ್ರದೇಶಗಳಿಗೆ ಜನರು ಅನಗತ್ಯವಾಗಿ ಪ್ರಯಾಣಿಸದಂತೆ ಸರ್ಕಾರ ಸೂಚಿಸಿದ್ದು, ಗಡಿ ಜಿಲ್ಲೆಗಳಾದ ಕೊಡಗು, ದಕ್ಷಿಣ ಕನ್ನಡ, ಮೈಸೂರು, ಚಾಮರಾಜ ನಗರಗಳಲ್ಲಿ ತೀವ್ರ ಕಟ್ಟೆಚ್ಚರ, ತಪಾಸಣೆ, ಕಣ್ಗಾವಲನ್ನು ಹೆಚ್ಚಿಸಲಾಗಿದೆ.

ಕರ್ನಾಟಕಕ್ಕೆ ಪ್ರವೇಶಿಸುವ ಕೇರಳದ ಗಡಿಭಾಗಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ ಎಂದು ಕರ್ನಾಟಕ ಆರೋಗ್ಯ ಇಲಾಖೆಯ ಅಧಿಸೂಚನೆ ತಿಳಿಸಿದೆ.

ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ನಿಫಾ ವೈರಸ್ ಏಕಾಏಕಿ ಏರಿಕೆಯಾದ ಹಿನ್ನೆಲೆಯಲ್ಲಿ ಮಾರಣಾಂತಿಕ ವೈರಸ್‌ಅನ್ನು ಎದುರಿಸಲು ರಾಜ್ಯ ಸರ್ಕಾರಕ್ಕೆ ಪ್ರತಿಕಾಯವನ್ನು ಐಸಿಎಂಆರ್ ತಲುಪಿಸಿದೆ.

ನಿಫಾ ಮಾದರಿಗಳನ್ನು ಪರೀಕ್ಷೆಯನ್ನು ತ್ವರಿತವಾಗಿಸಲು ಮೊಬೈಲ್ ಪ್ರಯೋಗಾಲಯವನ್ನು ಕಳುಹಿಸಲಾಗಿದೆ. ಮೊನೊಕ್ಲೋನಲ್ ಪ್ರತಿಕಾಯವನ್ನು ಕೋಝಿಕ್ಕೋಡ್‌ನಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ವಿತರಿಸಿದೆ.

ವೈರಸ್‌ಗೆ ಚಿಕಿತ್ಸೆ ನೀಡಲು ಸರ್ಕಾರಕ್ಕೆ ಲಭ್ಯವಿರುವ ಏಕೈಕ ಆಯ್ಕೆ ಆಂಟಿವೈರಲ್ ಆಗಿದೆ. ಆದರೂ ಅದರ ಪರಿಣಾಮಕಾರಿತ್ವವನ್ನು ಪ್ರಾಯೋಗಿಕವಾಗಿ ಇನ್ನೂ ಸಾಬೀತುಪಡಿಸಲಾಗಿಲ್ಲ.

ನಿಫಾ ವೈರಸ್‌ಗೆ ಎರಡು ಸಾವುಗಳು ಸೇರಿದಂತೆ ಐದು ಪ್ರಕರಣಗಳು ವರದಿಯಾದ ನಂತರ ಪುಣೆಯಲ್ಲಿರುವ ಐಸಿಎಂಆರ್‌ನ ರಾಷ್ಟ್ರೀಯ ವೈರಾಲಜಿ ಸಂಸ್ಥೆಯು ತನ್ನ ಮೊಬೈಲ್ ಬಿಎಸ್ಎಲ್ -3 (ಬಯೋಸೇಫ್ಟಿ ಲೆವೆಲ್ -3) ಪ್ರಯೋಗಾಲಯವನ್ನು ಕೋಝಿಕ್ಕೋಡ್‌ಗೆ ವೈರಸ್‌ನ ಮಾದರಿಗಳನ್ನು ಪರೀಕ್ಷಿಸಲು ಕಳುಹಿಸಿದೆ.

ರಾಷ್ಟ್ರೀಯ ರೋಗ ನಿಯಂತ್ರಣ ಕೇಂದ್ರ, ಆರ್‌ಎಂಎಲ್ ಆಸ್ಪತ್ರೆ ಮತ್ತು ನಿಮ್ಹಾನ್ಸ್‌ನ ತಜ್ಞರನ್ನೊಳಗೊಂಡ ಐದು ಸದಸ್ಯರ ಕೇಂದ್ರ ತಂಡವು ಕೇರಳದಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ಮತ್ತು ಸೋಂಕಿನ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಸಹಾಯ ಮಾಡಲು ಬೀಡುಬಿಟ್ಟಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...