ಸುದ್ದಿ ವಿವರ | ಹೆಚ್ಚಿದ ತಾಪಮಾನ; ಶಾಖ ಸಂಬಂಧಿತ ಕಾಯಿಲೆಗಳಿಂದ ತಪ್ಪಿಸಿಕೊಳ್ಳುವುದು ಹೇಗೆ?

Date:

ರಾಜ್ಯದಲ್ಲಿ ಶಾಖದ ತಾಪಮಾನ ಇನ್ನೂ ಏರಿಕೆಯಾಗಲಿದ್ದು, ನಾಡಿನ ಜನತೆಗೆ ಇದರಿಂದ ಹೈರಾಣಾಗಲಿದೆ. ಆರೋಗ್ಯದಲ್ಲುಂಟಾಗುವ ಏರುಪೇರಿನ ಬಗ್ಗೆ ಮುಂಜಾಗ್ರತ ಕ್ರಮಗಳನ್ನು ಕೈಗೊಳ್ಳಲು ಕರ್ನಾಟಕ ತಾಂತ್ರಿಕ ಸಲಹಾ ಸಮಿತಿ ಹೇಳಿದೆ. 

ಶಾಖ ಸಂಬಂಧಿತ ಕಾಯಿಲೆ; ಎಚ್ಚರಕ್ಕೆ ಕಾರಣವೇನು?

ಮಾರ್ಚ್‌ನಿಂದ ಆರಂಭವಾಗಬೇಕಿದ್ದ ಬೇಸಿಗೆ ಫೆಬ್ರವರಿಯಿಂದಲೇ ಆರಂಭಗೊಂಡಿತ್ತು. 122 ವರ್ಷಗಳ ನಂತರ ಅಧಿಕ ಶಾಖದ ವಾತಾವರಣ ಕಳೆದ ತಿಂಗಳಲ್ಲಿ ದಾಖಲಾಗಿದೆ. ಏಪ್ರಿಲ್‌ನಲ್ಲಿ ಬಿಸಿಲಿನ ತಾಪಮಾನ ತೀವ್ರವಾಗಿ ಏರಿಕೆಯಾಗಲಿದೆ. ಶಾಖದಿಂದಾಗಿ, ಬರುವ ಅಧಿಕ ಕಾಯಿಲೆಗಳನ್ನು ನಿಭಾಯಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲು ಆರೋಗ್ಯ ಇಲಾಖೆಗೆ ಕರ್ನಾಟಕ ತಾಂತ್ರಿಕ ಸಲಹಾ ಸಮಿತಿ ಸಲಹೆ ನೀಡಿದೆ.

ಯಾವೆಲ್ಲ ಕಾಯಿಲೆ ಭಾದಿಸಲಿದೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಚ್ಚುತ್ತಿರುವ ತಾಪಮಾನದಿಂದ  ತಲೆನೋವು, ತಲೆ ಸುತ್ತುವಿಕೆ ಸೇರಿದಂತೆ ‘ಸನ್‌ ಸ್ಟ್ರೋಕ್’ ಎಲೆಕ್ಟ್ರೋಲೈಟ್ ಅಸಮತೋಲನ, ಕರಳು ಬೇನೆ, ನಿರ್ಜಲೀಕರಣ, ವಾಂತಿ, ಚರ್ಮ ಒಣಗಿದಂತೆ ಭಾಸವಾಗುವುದು. ಕಾಲಾರ, ಟೈಫಾಯಿಡ್ ಇಂತಹ ಪ್ರಕರಣಗಳು ಹೆಚ್ಚಾಗಲಿದೆ. ವೃದ್ಧರು ಮತ್ತು ಮಕ್ಕಳು, ಅಧಿಕ ರಕ್ತದ ಒತ್ತಡ, ಮಧುಮೇಹಿಯಂತಹ ಸಮಸ್ಯೆಯಿಂದ ಬಳಲುತ್ತಿರುವವರು ಬೇಸಿಗೆ ಪೂರ್ಣಗೊಳ್ಳುವವರೆಗೂ ಜಾಗೃತರಾಗಿರಬೇಕಾಗಿದೆ.  

ಆರೋಗ್ಯ ಇಲಾಖೆಯ ಶಿಫಾರಸ್ಸೇನು?

ಮುಂದಿನ ದಿನಗಳಲ್ಲಿ ನಗರದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗುವ ಸಾಧ್ಯತೆ ಇರುವ ಕಾರಣ ಶಾಖ ಸಂಬಂಧಿತ ಕಾಯಿಲೆಗಳ ಬಗ್ಗೆ ಎಚ್ಚೆತ್ತುಕೊಳ್ಳಬೇಕಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಸರ್ಕಾರಿ ಸ್ವಾಮ್ಯದ ಆರೋಗ್ಯ ಕೇಂದ್ರಗಳಲ್ಲಿ ಕ್ಲಿನಿಕಲ್ ಮತ್ತು ‘ಎನರ್ಜಿ ಆಡಿಟಿಂಗ್‌’ಗಳು ಕಾರ್ಯರೂಪದಲ್ಲಿರಲು ರಾಜ್ಯದ ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಶಿಫಾರಸು ಮಾಡಿದೆ. ಐವಿಎಫ್ ದ್ರವಗಳು ಮತ್ತು ಓರಲ್ ರೀಹೈಡ್ರೇಶನ್ ಸೊಲ್ಯೂಷನ್ಸ್ (ಒಆರ್‍‌ಎಸ್‌) ಜೊತೆಗೆ, ಎಳನೀರು, ಐಸ್‌ ಪ್ಯಾಕ್‌ಗಳು ಸರ್ಕಾರಿ ಸ್ವಾಮ್ಯದ ಆರೋಗ್ಯ ಕೇಂದ್ರಗಳಲ್ಲಿ ಲಭ್ಯವಿರುವಂತೆ ನೋಡಿಕೊಳ್ಳಲು ಆರೋಗ್ಯ ಇಲಾಖೆ ಹೇಳಿದೆ.

ಶಾಖ ಸಂಬಂಧಿತ ಕಾಯಿಲೆಯಿಂದ ತಪ್ಪಿಸಿಕೊಳ್ಳುವುದೇಗೆ?

ಬೇಸಿಗೆಯಾಗಿರುವ ಕಾರಣ ಬೆವರುವಿಕೆ ಹೆಚ್ಚಾಗಲಿದೆ. ಇದರಿಂದ ನಿರ್ಜಲೀಕರಣ ಹೆಚ್ಚಾಗುತ್ತದೆ. ಹೀಗಾಗಿ, ಕುದಿಸಿದ ನೀರನ್ನು ಆರಿಸಿ ಕುಡಿಯಬೇಕು. ಮಧ್ಯಾಹ್ನದ ವೇಳೆ ಹೊರಗೆ ಅಡ್ಡಾಡುವುದನ್ನು ತಪ್ಪಿಸಬೇಕು. ಫ್ಯಾನ್‌ ಮತ್ತು ಎಸಿ ಕೂಲರ್‍‌ಗಳನ್ನು ಬಳಸುವದರಿಂದ ಸುಸ್ತು ಮತ್ತಿತ್ತರ ಕಾಯಿಲೆಗಳನ್ನು ತಪ್ಪಿಸಬಹುದು. 12:00 ರಿಂದ 3:00ರವರೆಗೆ ಅಡುಗೆ ಮಾಡುವುದನ್ನು ತಪ್ಪಿಸಿ, ಕಿಟಕಿ ಬಾಗಿಲುಗಳನ್ನು ಸದಾ ತೆರೆದಿರುವಂತೆ ನೋಡಿಕೊಳ್ಳಬೇಕು.

ವೈದ್ಯರು ಹೇಳೋದೇನು?

“ರಾಯಚೂರು, ಬೀದರ್, ಗುಲ್ಬರ್ಗ, ಯಾದಗಿರಿ ಇಂತಹ ಜಿಲ್ಲೆಗಳಲ್ಲಿ ಹೆಚ್ಚು ಸನ್‌ ಸ್ಟ್ರೋಕ್ ಕಂಡು ಬರುತ್ತದೆ. ಇಂತಹ ತೊಂದರೆಗಳು ಕಾಣಿಸಿಕೊಂಡ ತಕ್ಷಣವೇ ವೈದ್ಯರನ್ನು ಭೇಟಿಯಾಗುವುದು ಉತ್ತಮ. ತರಕಾರಿ ಮತ್ತು ಹಣ್ಣುಗಳನ್ನು ತೊಳೆದು ಹೆಚ್ಚಾಗಿ ತಿನ್ನುವುದು ಒಳ್ಳೆಯದು. ಚೈನೀಸ್ ಆಹಾರ ಮತ್ತು ಕೆಲಸದ ಒತ್ತಡದಲ್ಲಿ ಕಚೇರಿಗೆ ಬೇಗ ತೆರಳಲು ಹೋಟೆಲ್‌ನಲ್ಲಿ ಆಹಾರ ಸೇವಿಸುವುದನ್ನು ಬೇಸಿಗೆಯವರೆಗೂ ತಪ್ಪಿಸಿದರೆ ಹೆಚ್ಚು ಒಳ್ಳೆಯದು. ಈ ಸಮಯದಲ್ಲಿ ಎಷ್ಟು ನೀರು ಕುಡಿಯುತ್ತೀವೋ ಅಷ್ಟು ಒಳ್ಳೆಯದು” ಎಂದು ಈದಿನ.ಕಾಮ್‌ನ ಸಂಪರ್ಕಕ್ಕೆ ಸಿಕ್ಕ ಆಲೋಪತಿ ವೈದ್ಯ ಮಹೇಶ್‌ ಅವರು ಸಲಹೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ...

ಅಮುಲ್ ಹಾಲಿನಲ್ಲಿ 98 ಪಟ್ಟು, ಮೊಸರಿನಲ್ಲಿ 2,100 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿವೆ: ವರದಿ

ಕನ್ನಡಿಗರ ಮೇಲೆ ಹೇರಲು ಉದ್ದೇಶಿಸಿದ್ದ ಗುಜರಾತ್‌ ಮೂಲದ 'ಅಮುಲ್‌' ಸಂಸ್ಥೆ ಉತ್ಪನ್ನಗಳ...

ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು,...