ಮನಸ್ಸಿನ ಸಮಸ್ಯೆಗೆ ‘ಟೆಲಿ ಮನಸ್’ ಸೌಲಭ್ಯ; ಯಾರೆಲ್ಲ ಕರೆ ಮಾಡಬಹುದು

Date:

  • ಕರೆ ಮುಖಾಂತರ ಔಷಧಿ ಶಿಫಾರಸ್ಸು ಯೋಜನೆ ಶೀಘ್ರದಲ್ಲಿ ಜಾರಿ
  • 20 ಭಾಷೆಗಳಲ್ಲಿ ಮನಸ್ಸಿನ ಕಾಯಿಲೆ ನಿವಾರಣೆಗೆ ‘ಟೆಲಿ ಮನಸ್’ ಸೇವೆ

ಮನೋರೋಗಕ್ಕೆ ಸಂಬಂಧಿಸಿದಂತೆ ದೂರವಾಣಿ ಮೂಲಕ ಸಮಾಲೋಚನೆ ನಡೆಸುವ ‘ಟೆಲಿ ಮನಸ್’ ಸಹಾಯವಾಣಿ ಸೇವೆಯನ್ನು ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆಯು (ನಿಮ್ಹಾನ್ಸ್‌) ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಆರಂಭಿಸಿದ್ದು, ಯಾರೆಲ್ಲ ಕರೆ ಮಾಡಬಹುದು ಎಂಬುದರ ಪಟ್ಟಿ ನೀಡಿದೆ.

ಎಲ್ಲ ರೀತಿಯ ಮಾನಸಿಕ ಸಮಸ್ಯೆಗಳಿಗೆ ‘ಟೆಲಿ ಮನಸ್’ ಸಹಾಯವಾಣಿ ಮೂಲಕ ಸೇವೆ ಒದಗಿಸಲಾಗುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿದ ಹೆಚ್ಚಿನ ಸಂಖ್ಯೆಯಲ್ಲಿ ಕರೆಗಳು ಬರುತ್ತಿವೆ. ಓದಿನಲ್ಲಿ ಹಿನ್ನಡೆ, ಅನಗತ್ಯವಾಗಿ ಭಯಕ್ಕೆ ಒಳಗಾಗುವುದು ಸೇರಿ ಹಲವು ಸಮಸ್ಯೆಗಳಿಗೆ ಪರಿಹಾರವನ್ನು ಫೋನಿನ ಮುಖಾಂತರ ನೀಡುವುದು ‘ಟೆಲಿ ಮನಸ್’ ಯೋಜನೆಯ ಕಾರ್ಯತಂತ್ರವಾಗಿದೆ.

‘ಟೆಲಿ ಮನಸ್’ ಸಹಾಯವಾಣಿಗೆ 40 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗಿದೆ. ಎಲ್ಲ ರೀತಿಯ ಮಾನಸಿಕ ಸಮಸ್ಯೆಗಳಿಗೆ 20 ಭಾಷೆಗಳಲ್ಲಿ ಸೇವೆ ಒದಗಿಸಲಾಗುತ್ತಿದೆ. ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಸಹಾಯವಾಣಿಗೆ ಸಂಪರ್ಕಿಸಿ, ತಜ್ಞರಿಂದ ಅಗತ್ಯ ಸಲಹೆಗಳನ್ನು ಪಡೆದುಕೊಳ್ಳಬೇಕು. ಮಾನಸಿಕ ತೊಂದರೆಗಳನ್ನು ಎದುರಿಸುತ್ತಿದ್ದರೆ ದೂರವಾಣಿ ಸಂಖ್ಗೆ 14416 ಕ್ಕೆ ಶುಲ್ಕರಹಿತ ಕರೆ ಮಾಡಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ?: ಕೃತಕ ಸಿಹಿಕಾರಕ ಬಳಕೆ; ಆರೋಗ್ಯಕ್ಕೆ ಹಾನಿಕಾರಕ

2022ರಲ್ಲಿ ಆರಂಭವಾದ ‘ಟೆಲಿ ಮನಸ್’ ಕಾರ್ಯಕ್ರಮದಿಂದ ಏಪ್ರಿಲ್‌ವರೆಗೂ ಒಂದು ಲಕ್ಷಕ್ಕೂ ಹೆಚ್ಚು ಮಂದಿ ಇದರ ಫಲಾನುಭವಿಗಳಾಗಿದ್ದಾರೆ. ಹೀಗಾಗಿ, ಕರೆ ಮಾಡಿ ಸಮಸ್ಯೆ ಬಗೆ ಹರಿಸುವುದರೊಂದಿಗೆ, ಅದಕ್ಕೆ ಪೂರಕವಾದ ಔಷಧಿಗಳನ್ನು ಸಹ ಮನೋವೈದ್ಯರು ಶಿಫಾರಸ್ಸು ಮಾಡುವಂತೆ ನಿಯಮ ಶೀಘ್ರವೇ ಕೈಗೊಳ್ಳಲಾಗುವುದು ಎನ್ನಲಾಗಿದೆ.

ಯಾರೆಲ್ಲ ಕರೆ ಮಾಡಹುದು?

  • ವ್ಯಥೆಗೆ ಒಳಪಟ್ಟವರು
  • ಪರೀಕ್ಷಾ ಒತ್ತಡಕ್ಕೊಳಗಾದವರು
  • ಕೌಟುಂಬಿಕ ಸಮಸ್ಯೆಗೊಳಗಾದವರು
  • ಆತ್ಮಹತ್ಯೆ ಆಲೋಚನೆಗಳು
  • ಮಾದಕ ವಸ್ತು ವ್ಯಸನದ ಸಮಸ್ಯೆಯಲ್ಲಿರುವವರು
  • ಸಂಬಂಧಗಳ ಸಮಸ್ಯೆಯಲ್ಲಿ ಸಿಲುಕಿರುವವರು ಜ್ಞಾಪಕಶಕ್ತಿ ತೊಂದರೆಯುಳ್ಳವರು
  • ಆರ್ಥಿಕ ಒತ್ತಡದಲ್ಲಿರುವವರು
  • ಇತರೆ ಯಾವುದೇ ಮಾನಸಿಕ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿರುವವರು

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ...

ಅಮುಲ್ ಹಾಲಿನಲ್ಲಿ 98 ಪಟ್ಟು, ಮೊಸರಿನಲ್ಲಿ 2,100 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿವೆ: ವರದಿ

ಕನ್ನಡಿಗರ ಮೇಲೆ ಹೇರಲು ಉದ್ದೇಶಿಸಿದ್ದ ಗುಜರಾತ್‌ ಮೂಲದ 'ಅಮುಲ್‌' ಸಂಸ್ಥೆ ಉತ್ಪನ್ನಗಳ...

ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು,...