ಅನಧಿಕೃತ ಗರ್ಭಪಾತ; ಮಹಿಳಾ ಶುಶ್ರೂಷಕಿ ವಿರುದ್ಧ ದೂರು

Date:

  • ‘ಸುರಕ್ಷಿತ ಗರ್ಭಪಾತಕ್ಕಾಗಿ ವೈದ್ಯರನ್ನೇ ಸಂಪರ್ಕಿಸಿ’
  • ಅನಧಿಕೃತ ಗರ್ಭಪಾತ ಸಾವು, ಬಂಜೆತನ, ಸೋಂಕಿಗೆ ಕಾರಣ

ಮನೆಯೊಂದರಲ್ಲಿ ಅನಧಿಕೃತವಾಗಿ ಗರ್ಭಪಾತ ಮಾಡುತ್ತಿದ್ದ ಆರೋಪದ ಮೇಲೆ ಮಹಿಳಾ ಶುಶ್ರೂಷಕಿಯೊಬ್ಬರ ಮೇಲೆ ದೂರು ದಾಖಲಿಸಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಶಿರಾದಲ್ಲಿ ನಡೆದಿದೆ.

ಪಟ್ಟಣದ ಜ್ಯೋತಿನಗರದಲ್ಲಿ ಮಹಿಳಾ ಶುಶ್ರೂಷಕಿ ಸೌಜನ್ಯ ಎಂಬವರು ಅನಧಿಕೃತವಾಗಿ ಗರ್ಭಪಾತ ಮಾಡುತ್ತಿದ್ದರು. ಆಕೆ ಗರ್ಭಪಾತಕ್ಕೆ ಬಳಸುತ್ತಿದ್ದ ಉಪಕರಣಗಳು ಹಾಗೂ ಔಷಧಿಗಳನ್ನು ವಶಪಡಿಸಿಕೊಂಡು, ಗರ್ಭಪಾತ ಕಾಯ್ದೆ ಅಡಿ ದೂರು ದಾಖಲಿಸಲು ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಸಮಗ್ರ ಗರ್ಭಪಾತ ಸೇವೆಯ ನೋಡಲ್ ಅಧಿಕಾರಿ ಡಾ. ಚಂದ್ರಿಕಾ ಬಿ.ಆರ್ ಸೂಚನೆ ನೀಡಿದ್ದಾರೆ.

ಅನಧಿಕೃತ ಗರ್ಭಪಾತದ ಬಗ್ಗೆ ರಾಜ್ಯ ಪಿಸಿಪಿಎನ್‌ಡಿಟಿಯ ಉಪನಿರ್ದೇಶಕ ಡಾ. ವಿವೇಕ್ ದೊರೆ ಎಂಬುವವರು ದೂರು ನೀಡಿದ್ದರು. ಅವರ ದೂರಿನ ಆಧಾರ ಮೇಲೆ ನೋಡಲ್ ಅಧಿಕಾರಿ ಡಾ. ಚಂದ್ರಿಕಾ ಅವರು ದಾಳಿ ನಡೆಸಿದ್ದು, ಪ್ರಕರಣ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅನಧಿಕೃತ ಗರ್ಭಪಾತದಿಂದಾಗಿ ಸಾವು ಸಂಭವಿಸಬಹುದು. ಶಾಶ್ವತ ಬಂಜೆತನ, ಸೋಂಕು, ಹಾಗೂ ಮಾರಕ ರೋಗಗಳು ಹರಡುವ ಸಾಧ್ಯತೆ ಇದೆ. ಗರ್ಭನಿರೋಧಕಗಳ ಬಳಕೆ ಕೊರತೆಯಿಂದ ಅನಗತ್ಯ ಗರ್ಭಧಾರಣೆಯು ಒಂದು ತಾಯಿಯ ಆರೋಗ್ಯಕ್ಕೆ ಮಾರಕ” ಎಂದು ಡಾ. ಚಂದ್ರಿಕಾ ತಿಳಿಸಿದರು.

ಈ ಸುದ್ದಿ ಓದಿದ್ದೀರಾ?: ಮನಸ್ಸಿನ ಕತೆಗಳು | ಸಿಟ್ಟಿನ ಈ ಪುಟ್ಟನ ಕತೆ ನಿಮ್ಮ ಮಗುವಿನದ್ದೂ ಆಗಿರಬಹುದು

“ಒಂದು ವೇಳೆ ಗರ್ಭಪಾತದ ವಿಷಯದ ಬಗ್ಗೆ ಗೌಪ್ಯತೆ ಕಾಯ್ದುಕೊಳ್ಳುವ ಸಂದರ್ಭ ಬಂದಾಗ ವೈದ್ಯರೊಡನೆ ಸಮಾಲೋಚನೆ ನಡೆಸಿ ನಂತರ ಸುರಕ್ಷಿತ ಗರ್ಭಪಾತ ಮಾಡಿಸಿಕೊಳ್ಳಬೇಕು. ಗರ್ಭಪಾತಕ್ಕೊಳಗಾಗುವವರ ಹೆಸರನ್ನು ಗೌಪ್ಯತೆಯಿಂದಿಡಲಾಗುತ್ತದೆ. ಒಂದು ವೇಳೆ ಕಾನೂನು ರೀತಿಯಲ್ಲಿ ಗರ್ಭಧಾರಣೆಗೆ ನೋಂದಾಯಿಸಿಕೊಂಡಿದ್ದಲ್ಲಿ ದಾಖಲೆ ಅಥವಾ ವರದಿಗಳನ್ನು ಕಾನೂನು ಮೂಲಕ ಕೋರಿದ್ದಾಗ ಮಾತ್ರ ನೀಡಬೇಕಾಗಿರುತ್ತದೆ. ವೈದ್ಯರು ದಾಖಲೆಗಳನ್ನು ಬಹಿರಂಗಗೊಳಿಸಿದರೆ, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಸುರಕ್ಷಿತ ಗರ್ಭಪಾತಕ್ಕಾಗಿ ವೈದ್ಯರನ್ನೇ ಸಂಪರ್ಕಿಸಿ, ನೋಂದಾಯಿತ ಸ್ಥಳದಲ್ಲಿ ಮಾತ್ರ ಗರ್ಭಪಾತ ಮಾಡಿಸುವುದು ಉತ್ತಮ” ಎಂದು ಸಲಹೆ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ರಾಜೀವ್ ಗಾಂಧಿ ವಸತಿ ಪ್ರೌಢಶಾಲೆ ವಿದ್ಯಾರ್ಥಿ ಹೃದಯಾಘಾತಕ್ಕೆ ಬಲಿ

ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಬಹಿರ್ದೆಸೆಗೆ ತೆರಳಿದ್ದ 15 ವರ್ಷದ...

ಅಮುಲ್ ಹಾಲಿನಲ್ಲಿ 98 ಪಟ್ಟು, ಮೊಸರಿನಲ್ಲಿ 2,100 ಪಟ್ಟು ಹೆಚ್ಚು ಬ್ಯಾಕ್ಟೀರಿಯಾಗಳಿವೆ: ವರದಿ

ಕನ್ನಡಿಗರ ಮೇಲೆ ಹೇರಲು ಉದ್ದೇಶಿಸಿದ್ದ ಗುಜರಾತ್‌ ಮೂಲದ 'ಅಮುಲ್‌' ಸಂಸ್ಥೆ ಉತ್ಪನ್ನಗಳ...

ದಾವಣಗೆರೆ | ಸರ್ಕಾರಿ ಆಸ್ಪತ್ರೆಗಳ ಖಾಸಗೀಕರಣ ಕೈಬಿಡಲು ಆರೋಗ್ಯ ಹಕ್ಕಿನ ಜಾಥಾ

ಸರ್ಕಾರಿ ಜಿಲ್ಲಾ ಆಸ್ಪತ್ರೆಗಳ ಖಾಸಗೀಕರಣ (PPP) ಸಂಪೂರ್ಣವಾಗಿ ಕೈಬಿಡಬೇಕು, ಎಲ್ಲಾ ಸರ್ಕಾರಿ...

ಥೈರಾಯ್ಡ್‌ ಅಂದ್ರೆ ಭಯವೇ? ವೈದ್ಯರು ಏನಂತಾರೆ ಗೊತ್ತಾ?

ದೇಹ ಎಷ್ಟು ಶಕ್ತಿ ಬಳಕೆ ಮಾಡಬೇಕು, ಹೃದಯ ಎಷ್ಟು ವೇಗವಾಗಿ ಬಡಿಯಬೇಕು,...