‘ಮಕ್ಕಳ ಪಾಲನೆ ಪೂರ್ಣಾವಧಿ ಕೆಲಸ’ – ಪತ್ನಿಗೆ ಪತಿ ಹಣ ನೀಡಬೇಕು: ಹೈಕೋರ್ಟ್‌ ಆದೇಶ

Date:

ತನ್ನ ಮಕ್ಕಳನ್ನು ಪಾಲನೆ ಮಾಡುವುದಕ್ಕಾಗಿ ಪತ್ನಿಗೆ ಉಪನ್ಯಾಸಕಿ ಹುದ್ದೆ ತೊರೆಯುವಂತೆ ಮಾಡಿದ್ದ ಪತಿ ವಿರುದ್ಧ ಹೈಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. ಪತ್ನಿಗೆ ಪ್ರತಿ ತಿಂಗಳು 36,000 ರೂ. ನೀಡುವಂತೆ ಜೀವನಾಂಶ ನೀಡುವಂತೆ ಪತಿಗೆ ಆದೇಶಿಸಿದೆ.

ಕೆನರಾ ಬ್ಯಾಂಕ್‌ನಲ್ಲಿ ಮ್ಯಾನೇಜರ್ ಆಗಿದ್ದ ಪತಿ, ತನ್ನ ಮಕ್ಕಳನ್ನು ಪೋಷಿಸುವ ಸಲುವಾಗಿ ಉಪನ್ಯಾಸಕಿಯಾಗಿದ್ದ ಪತ್ನಿಯ ಕೆಲಸ ಬಿಡಿಸಿದ್ದರು. ಅಲ್ಲದೆ, ಆಕೆಗೆ ಜೀವನಾಂಶವನ್ನೂ ನೀಡದೆ ವಂಚಿಸಿದ್ದರು. ತನ್ನ ಪತಿಯ ವರ್ತನೆಯಿಂದ ಬೇಸತ್ತ ಮಹಿಳೆ, ಹೋರ್ಟ್‌ ಮೆಟ್ಟಿಲೇರಿದ್ದರು. ಆಕೆಯ ಅರ್ಜಿ ವಿಚಾರಣೆ ನಡೆಸಿದ್ದ ಸೆಷನ್ಸ್‌ ಕೋರ್ಟ್‌, ಆಕೆಯ ಜೀವನ ವೆಚ್ಚ ಮತ್ತು ಮಕ್ಕಳ ಪಾಲನೆಯ ವೆಚ್ಚಕ್ಕಾಗಿ ಮಾಸಿಕ 18,000 ರೂ. ನೀಡುವಂತೆ ಆದೇಶಿಸಿತ್ತು. ಆದೇಶವನ್ನು ಪ್ರಶ್ನಿಸಿ ಪತಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಪತಿಯ ವಾದವನ್ನು ತಿರಸ್ಕರಿಸಿದೆ. ಸೆಷನ್ಸ್‌ ನ್ಯಾಯಾಲಯದ ತೀರ್ಪನ್ನು ಮಾರ್ಪಡಿಸಿ, ಆಕೆಗೆ ಮಾಸಿಕ 36,000 ರೂ. ನೀಡುವಂತೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹೆಂಡತಿಯು ‘ಸೋಮಾರಿಯಾಗಿದ್ದಾಳೆ’ ಎಂಬ ಪತಿಯ ವಾದವನ್ನು ಉಲ್ಲೇಖಿಸಿದ ನ್ಯಾಯಾಲಯ, “ಪತ್ನಿಯು ದುಡಿಯುವ ಸಾಮರ್ಥ್ಯ ಹೊಂದಿದ್ದಾಳೆ. ಆದರೆ, ಆಕೆ ಉದ್ಯೋಗ ತೊರೆಯುವಂತೆ ಮಾಡಲಾಗಿದೆ. ಆಕೆಯ ದುಡಿಮೆಯನ್ನು ನಿರ್ಬಂಧಿಸಲಾಗಿದೆ. ಹೀಗಾಗಿ, ಆಕೆ ಜೀವನಾಂಶಕ್ಕೆ ಅರ್ಹಳಾಗಿದ್ದಾರೆ. ಈ ಪ್ರಕರಣ ಮಾತ್ರವಲ್ಲದೆ, ಪ್ರತಿ ಪ್ರಕರಣವನ್ನು ಅರ್ಹತೆಯ ಮೇಲೆ ಪರಿಗಣಿಸಬೇಕು. ಹೆಂಡತಿ, ಗೃಹಿಣಿ ಮತ್ತು ತಾಯಿಯಾಗಿ ಅವಿಶ್ರಾಂತವಾಗಿ ಮಹಿಳೆ ಕೆಲಸ ಮಾಡುತ್ತಾಳೆ. ಮಕ್ಕಳನ್ನು ನೋಡಿಕೊಳ್ಳುವುದು ಪೂರ್ಣ ಸಮಯದ ಕೆಲಸವಾಗಿದೆ” ಎಂದು ನ್ಯಾಯಾಲಯ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...