ಉದ್ಯಮಿ ಅಪಹರಿಸಿ, ₹1.5 ಕೋಟಿ ಲಂಚ; ನಾಲ್ವರು ಜಿಎಸ್‌ಟಿ ಅಧಿಕಾರಿಗಳ ಬಂಧನ

Date:

ಪ್ರಕರಣವೊಂದನ್ನು ಮುಚ್ಚಿ ಹಾಕಲು 1.5 ಕೋಟಿ ರೂ. ಹಣ ಪಡೆದು ಪರಾರಿಯಾಗಿದ್ದ ಕೇಂದ್ರದ ನಾಲ್ವರು ಜಿಎಸ್‌ಟಿ ಅಧಿಕಾರಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜಿಎಸ್‌ಟಿಯ ಕೇಂದ್ರ ಗುಪ್ತದಳದ ಮಹಿಳಾ ಅಧಿಕಾರಿ ಸೋನಾಲಿ ಸಹಾಯಿ, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ಮನೋಜ್ ಸೈನಿ, ಅಧೀಕ್ಷಕ ಅಭಿಷೇಕ್‌, ಸೀನಿಯರ್ ಇಂಟಲಿಜೆನ್ಸ್ ಆಫೀಸರ್ ನಾಗೇಶ್ ಬಾಬು ಬಂಧಿತ ಅಧಿಕಾರಿಗಳಾಗಿದ್ದಾರೆ.

ಜಾರಿ ನಿರ್ದೇಶನಾಲಯ (ಇಡಿ) ಹಾಗೂ ಜಿಎಸ್ ಟಿ ಇಲಾಖೆಯ ಅಧಿಕಾರಿಗಳೆಂದು ಹೇಳಿಕೊಂಡ ಈ ಅಧಿಕಾರಿಗಳ ಗುಂಪು ಆ.30 ರಂದು ಕೇಶವ್ ಅವರ ಮನೆ ಮೇಲೆ ದಾಳಿ ನಡೆಸಿ ಅವರ ಮೊಬೈಲ್ ಫೋನ್ ಹಾಗೂ ಇತರ ವಸ್ತುಗಳನ್ನು ವಶಕ್ಕೆ ಪಡೆದು, ಉದ್ಯಮಿಯನ್ನು ಒತ್ತಾಯಪೂರ್ವಕವಾಗಿ ಇಂದಿರಾನಗರಕ್ಕೆ ಕರೆದೊಯ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉದ್ಯಮಿ ಯಾರೊಂದಿಗೂ ಸಂಪರ್ಕ ಸಾಧಿಸದಂತೆ ಆತನ ಫೋನ್ ನ್ನು ಫ್ಲೈಟ್ ಮೋಡ್ ಗೆ ಹಾಕಲಾಯಿತು. ಈ ಬಳಿಕ ಕೇಶವ್ ಅವರ ಸಹವರ್ತಿ ರೋಷನ್ ಜೈನ್ ಅವರಿಗೆ ವಾಟ್ಸ್ ಆಪ್ ಮೂಲಕ ಕರೆ ಮಾಡಿ 3 ಕೋಟಿ ರೂಪಾಯಿ ಬೇಡಿಕೆ ಇಟ್ಟಿದ್ದರು. ಪ್ರಕರಣ ಮುಚ್ಚಿ ಹಾಕುವುದಕ್ಕಾಗಿ 1.5 ಕೋಟಿ ರೂ. ಹಣ ಪಡೆದು ಈ ಅಧಿಕಾರಿಗಳು ಪರಾರಿಯಾಗಿದ್ದರು.

ಘಟನೆಯ ಬಗ್ಗೆ ಕೇಶವ್ ಮತ್ತು ಸಂಗಡಿಗರು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನಲ್ಲಿ ಅಧಿಕಾರಿಗಳ ಮೇಲೆ ಹಲ್ಲೆ, ಬೆದರಿಕೆ ಮತ್ತು ಸುಲಿಗೆ ಆರೋಪಗಳು ಸೇರಿವೆ. ಸೂಕ್ತ ಅನುಮತಿಯಿಲ್ಲದೆ ದಾಳಿ ನಡೆಸಿರುವುದು ತನಿಖೆ ವೇಳೆ ಪೊಲೀಸರಿಗೆ ಬೆಳಕಿಗೆ ಬಂದಿದೆ.

ತನಿಖೆಯನ್ನು ಮುಂದುವರೆಸಿದ ಸಿಸಿಬಿ ಪೊಲೀಸರು, ಈ ಪ್ರಕರಣದ ತನಿಖೆಯಲ್ಲಿ ಅನುಮೋದನೆ ಇಲ್ಲದೆ ದಾಳಿ ಮಾಡಿರುವುದು ಧೃಡಪಟ್ಟಿರುತ್ತದೆ. ಅಲ್ಲದೇ ಜಿ.ಎಸ್.ಟಿ ಅಧಿಕಾರಿಗಳು ಹಲವಾರು ವಸ್ತುಗಳನ್ನು ನಿಯಮ ಬಾಹಿರವಾಗಿ ಜಪ್ತಿ ಮಾಡಿರುವುದು, ಯಾವುದೇ ಅನುಮತಿ ಇಲ್ಲದೇ ಎರಡು ದಿನಗಳ ಕಾಲ ಫಿರ್ಯಾದುದಾರರನ್ನು ಅಕ್ರಮವಾಗಿ ಬಂಧನದಲ್ಲಿರಿಸಿಕೊಂಡಿರುವುದು ತನಿಖೆಯಿಂದ ತಿಳಿದುಬಂದಿರುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...