ರಾಜ್ಯಪಾಲ ಗೆಹ್ಲೋಟ್ ವಾಪಸ್ ಕಳುಹಿಸಿದ 11 ಮಸೂದೆಗಳಿವು

Date:

ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸುಮಾರು 11 ಮಸೂದೆಗಳಿಗೆ ಅಧಿಕ ವಿವರಣೆ ನೀಡುವಂತೆ ಕೋರಿ ಸರ್ಕಾರಕ್ಕೆ ಮಸೂದೆಯನ್ನು ವಾಪಸ್ ಕಳುಹಿಸಿದ್ದಾರೆ. ಅದಕ್ಕೆ ಸಹಿ ಹಾಕಿಲ್ಲ ಎಂದು ವರದಿಯಾಗಿದೆ.

ಕೆಲವು ಮಸೂದೆಗಳ ಬಗ್ಗೆ ಅಧಿಕ ವಿವರಣೆಯನ್ನು ನೀಡಲು ತಿಳಿಸಿ ಆ ಮಸೂದೆಗಳನ್ನು ವಾಪಸ್ ಕಳುಹಿಸುವುದು ಸಾಮಾನ್ಯವಾಗಿಯೇ ನಡೆಯುವ ಪ್ರಕ್ರಿಯೆಯಾಗಿದೆ. ರಾಜ್ಯಪಾಲರಿಗೆ ಮಸೂದೆ ಬಗ್ಗೆ ತೃಪ್ತಿಕರವಾದ ಉತ್ತರ ಲಭಿಸಿದ ಬಳಿಕ ಸಹಿ ಹಾಕುತ್ತಾರೆ ಎಂದು ರಾಜಭವನವನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿದೆ.

ಈ ನಡುವೆ ರಾಜ್ಯಪಾಲರು ಮತ್ತು ಸರ್ಕಾರದ ನಡುವಿನ ಕಾನೂನು ಸಂಘರ್ಷ ಇನ್ನಷ್ಟು ಬಿಗಡಾಯಿಸಿದೆ. ಮುಡಾ ನಿವೇಶನ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ನಂತರ ರಾಜಭವನ ಮತ್ತು ಸರ್ಕಾರದ ನಡುವೆ ಸಂಘರ್ಷ ಮತ್ತಷ್ಟು ಹೆಚ್ಚಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪಿಎಸ್‌ಐ ನೇಮಕ ಪರೀಕ್ಷಾ ಅಕ್ರಮದ ಹಿನ್ನೆಲೆಯಲ್ಲಿ ರೂಪಿಸಲಾಗಿದ್ದ ‘ಕರ್ನಾಟಕ ಸಾರ್ವಜನಿಕ ಪರೀಕ್ಷೆಗಳು (ನೇಮಕದಲ್ಲಿ ಭ್ರಷ್ಟಾಚಾರ ಮತ್ತಿತರ ಅಕ್ರಮ ತಡೆ) ವಿಧೇಯಕ -2023’ ಅನ್ನು ಗೃಹ ಇಲಾಖೆಯ ಸ್ಪಷ್ಟನೆ ನಡುವೆಯೂ ರಾಜ್ಯಪಾಲರು 2ನೇ ಬಾರಿಗೆ ಸರಕಾರಕ್ಕೆ ವಾಪಸ್ ಕಳುಹಿಸಿದ್ದಾರೆ.

ಇದನ್ನು ಓದಿದ್ದೀರಾ? ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು; ಸಿಎಂ ವಜಾಕ್ಕೆ ಡಿ ಎಸ್ ಅರುಣ್ ಮನವಿ

ಈ ಮಸೂದೆಗಳ ಪೈಕಿ ಆರು ಮಸೂದೆಗಳು ಮುಂಗಾರು ಅಧಿವೇಶನದಲ್ಲಿ ಅಂಗೀಕಾರಗೊಂಡಿದ್ದು ಇದೇ ತಿಂಗಳಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗಿದೆ. ಉಳಿದವುಗಳನ್ನು ಇದೇ ವರ್ಷದ ಮಾರ್ಚ್ ಮತ್ತು ಒಂದು ಮಸೂದೆ 2023ರ ಡಿಸೆಂಬರ್‌ನಲ್ಲಿ ಕಳುಹಿಸಲಾಗಿತ್ತು.

ವಾಪಸ್ ಕಳುಹಿಸಿದ 11 ಮಸೂದೆಗಳು

ಕರ್ನಾಟಕ ಸಾರ್ವಜನಿಕ ಪರೀಕ್ಷಾ(ನೇಮಕಾತಿಯಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ತಡೆ) ಮಸೂದೆ 2023, ಗದಗ ಬೆಟಗೇರಿ ವಾಣಿಜ್ಯ, ಸಂಸ್ಕೃತಿ ಮತ್ತು ಪ್ರದರ್ಶನಗಳ ಪ್ರಾಧಿಕಾರ ಮಸೂದೆ 2023, ಕರ್ನಾಟಕ ನಗರ ಮತ್ತು ಪಟ್ಟಣಗಳ ಯೋಜನೆ(ತಿದ್ದುಪಡಿ) ಮಸೂದೆ 2023, ನೋಂದಣಿ (ಕರ್ನಾಟಕ ತಿದ್ದುಪಡಿ) ಮಸೂದೆ 2024, ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ದತ್ತಿ ಮಸೂದೆ 2024, ಕರ್ನಾಟಕ ಪುರಸಭೆಗಳು ಇತರ ಕಾನೂನು ತಿದ್ದುಪಡಿ ಮಸೂದೆ 2024, ಕರ್ನಾಟಕ ಸಹಕಾರ ಸಂಘಗಳ ಸೊಸೈಟಿಗಳ ತಿದ್ದುಪಡಿ ಮಸೂದೆ 2024, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಮಸೂದೆ, ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮಸೂದೆ 2024, ಕರ್ನಾಟಕ ಶಾಸಕಾಂಗ (ತಡೆ ಮತ್ತು ಅನರ್ಹತೆ) ತಿದ್ದುಪಡಿ ಮಸೂದೆ, ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮಸೂದೆ 2024

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...