13 ಕಂಪನಿಗಳಿಂದ ₹27 ಸಾವಿರ ಕೋಟಿ ಹೂಡಿಕೆ, 8 ಸಾವಿರ ಉದ್ಯೋಗ ಸೃಷ್ಟಿ: ಸಚಿವ ಎಂ ಬಿ ಪಾಟೀಲ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಯೋಜನಾ ಮಂಜೂರಾತಿ ಸಮಿತಿಯ ಸಭೆಯಲ್ಲಿ ಒಟ್ಟು 27,607.26 ಕೋಟಿ ರೂಪಾಯಿ ಬಂಡವಾಳ ಹೂಡಿಕೆಗೆ ಒಪ್ಪಿಗೆ ಕೊಡಲಾಗಿದೆ.

ಇದರಲ್ಲಿ 11 ಹೊಸ ಕೈಗಾರಿಕಾ ಯೋಜನೆಗಳು ಮತ್ತು 2 ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು ಸೇರಿವೆ. ಒಟ್ಟು ಈ 13 ಯೋಜನೆಗಳಿಂದ 8,704 ನೇರ ಉದ್ಯೋಗಗಳು ಸೃಷ್ಟಿಯಾಗಲಿವೆ ಎಂದು ಸಭೆ ಬಳಿಕ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸುದ್ದಿಗಾರರಿಗೆ ತಿಳಿಸಿದರು.

11 ಹೊಸ ಹೂಡಿಕೆ ಯೋಜನೆಗಳ ಪೈಕಿ ತೇಜಸ್ ನೆಟ್ವರ್ಕ್ಸ್ 542.19 ಕೋಟಿ ರೂ, ವಾಯು ಅಸೆಟ್ಸ್ 1,251 ಕೋಟಿ ರೂ, ಜಿಂದಾಲ್ ಸ್ಟೀಲ್ಸ್ 1,300.57 ಕೋಟಿ ರೂ, ಜಿಂದಾಲ್ ಎಲೆಕ್ಟ್ರಿಕಲ್ ಸ್ಟೀಲ್ 7,102 ಕೋಟಿ ರೂ, ಗ್ರಾಸಿಂ ಇಂಡಸ್ಟ್ರೀಸ್1,386 ಕೋಟಿ ರೂ, ಎಸ್ಎಫ್ಎಕ್ಸ್ ಇಂಡಿಯಾ 9,298 ಕೋಟಿ ರೂ, ಸ್ನೀಡರ್ ಎಲೆಕ್ಟ್ರಿಕ್ ಐಟಿ ಬಿಝಿನೆಸ್, ಎಚ್ಎಸ್ಎಸ್ ಟೆಕ್ಸ್ಟೈಲ್ಸ್ 740 ಕೋಟಿ ರೂ, ಸ್ನೈಡರ್ ಎಲೆಕ್ಟ್ರಿಕ್ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ 1,520.75 ಕೋಟಿ ರೂ, ಕ್ಯೂಪಿಐಎಐ ಇಂಡಿಯಾ 1,136 ಕೋಟಿ ರೂ, ಟೊಯೋಟಾ ಇಂಡಸ್ಟ್ರೀಸ್ ಎಂಜಿನ್ ಇಂಡಿಯಾ ಲಿಮಿಟೆಡ್ 1,330 ಕೋಟಿ ರೂ ಮತ್ತು ರಿಲಯನ್ಸ್ ಕನ್ಸೂಮರ್ ಪ್ರಾಡಕ್ಟ್ಸ್ 1,622 ಕೋಟಿ ರೂ. ಹೂಡಿಕೆ ಮಾಡಲಿವೆ. ಮಿಕ್ಕಂತೆ, ಎಂಬೆಸಿ ಇಂಡಸ್ಟ್ರಿಯಲ್ ಪಾರ್ಕ್ ಮತ್ತು ಬಾಲಾಜಿ ವೇಫರ್ಸ್ ಕಂಪನಿಗಳು ಕ್ರಮವಾಗಿ 80 ಮತ್ತು 298.75 ಕೋಟಿ ರೂ. ಹೆಚ್ಚುವರಿ ಬಂಡವಾಳ ತೊಡಗಿಸಲಿವೆ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಧಾನಸೌಧದಲ್ಲಿ ನಡೆದ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಇಂಧನ ಸಚಿವ ಕೆ ಜೆ ಜಾರ್ಜ್, ಕಾನೂನು ಸಚಿವ ಎಚ್.ಕೆ.ಪಾಟೀಲ, ಐಟಿ ಸಚಿವ ಪ್ರಿಯಾಂಕ್ ಖರ್ಗೆ, ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್, ಕಾರ್ಮಿಕ ಸಚಿವ ಸಂತೋಷ್ ಲಾಡ್ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...