ಗಂಡುಮಕ್ಕಳಿಗೆ 93 ರೂ., ಹೆಣ್ಣುಮಕ್ಕಳಿಗೆ 135 ರೂ. ‘ಶುಚಿ ಸಂಭ್ರಮ ಕಿಟ್’ ನೀಡಲು ಸಿಎಂ ಒಪ್ಪಿಗೆ

Date:

  • 5,48,000 ವಿದ್ಯಾರ್ಥಿಗಳಿಗೆ ಕಿಟ್‌ ಒದಗಿಸಲು ಟೆಂಡರ್‌ ಕರೆಯಲು ಒಪ್ಪಿಗೆ
  • ಮೊರಾರ್ಜಿ ಶಾಲೆಗಳಲ್ಲಿ ಸ್ಥಳೀಯ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲು ಸೂಚನೆ

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಇಲಾಖೆಗಳ ವಸತಿ ನಿಲಯಗಳ 5,48,000 ವಿದ್ಯಾರ್ಥಿಗಳಿಗೆ ಟೂತ್ ಪೇಸ್ಟ್ , ಬ್ರಶ್, ಕೊಬ್ಬರಿ ಎಣ್ಣೆ, ಮೈ ಸೋಪು, ಬಟ್ಟೆ ಸೋಪು ಒಳಗೊಂಡ 93 ರೂ.ಗಳ ಕಿಟ್ ಗಂಡುಮಕ್ಕಳಿಗೆ ಹಾಗೂ ಹೆಣ್ಣುಮಕ್ಕಳಿಗೆ 135 ರೂ.ಗಳ ವೆಚ್ಚದಲ್ಲಿ ‘ಶುಚಿ ಸಂಭ್ರಮ ಕಿಟ್’ ನೀಡಲು ಟೆಂಡರ್ ಕರೆಯಲು ಸಿಎಂ ಸಿದ್ದರಾಮಯ್ಯ ಒಪ್ಪಿಗೆ ನೀಡಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶನಿವಾರ ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ವೇಳೆ ಟೆಂಡರ್‌ ಕರೆಯಲು ಸಿಎಂ ಸೂಚಿಸಿದರು.

“ಕಿಟ್ ಗಳ ವಿತರಣೆಗೆ ವರ್ಷಕ್ಕೆ 90 ಕೋಟಿ ರೂ. ವೆಚ್ಚವಾಗಲಿದೆ. ಕಿಟ್ ನಲ್ಲಿನ ವಸ್ತುಗಳ ಗುಣಮಟ್ಟ ಹೆಚ್ಚಿಸಬೇಕು. 75 ಗ್ರಾಂಗಳ ಬದಲಿಗೆ 125 ಗ್ರಾಂ ಗಳ ಸೋಪು ಒದಗಿಸುವಂತೆ ಹಾಗೂ ಇದರಲ್ಲಿ ಕೇವಲ ಶೇ 5 ರಷ್ಟು ಮಾತ್ರ ಲಾಭ ಇಟ್ಟುಕೊಳ್ಳಬೇಕು” ಎಂದು ಮೈಸೂರು ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿಗಳು ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೂತ್ ಪೇಸ್ಟ್ ಪ್ರಮಾಣವನ್ನು ಹೆಚ್ಚಿಸುವಂತೆ ಹಾಗೂ ಹಲ್ಲುಜ್ಜುವ ಬ್ರಶ್ ಗಳ ಗುಣಮಟ್ಟ ಸೇರಿದಂತೆ ಇತರೆ ಗುಣಮಟ್ಟದ ವಸ್ತುಗಳನ್ನು ಮಕ್ಕಳಿಗೆ ಒದಗಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು

ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್

ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳಿಗೆ ಪಿ.ಜಿ, ಪಿಹೆಚ್ ಡಿ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಸಲು ತೀರ್ಮಾನಿಸಲಾಯಿತು.

ಗುಣಮಟ್ಟದ ಆಹಾರ ಧಾನ್ಯ ವಿತರಿಸಿ

ಪ್ರಸ್ತುತ ತಲಾ 1650ರೂ. ಪ್ರೀ ಮೆಟ್ರಿಕ್, 1750 ರೂ.ಗಳನ್ನು ಪೋಸ್ಟ್ ಮೆಟ್ರಿಕ್ ಮಕ್ಕಳಿಗೆ ಆಹಾರ ಧಾನ್ಯಗಳಿಗಾಗಿ ನಿಗದಿಪಡಿಸಿದೆ. ರಾಗಿ, ಧಾನ್ಯ, ಎಣ್ಣೆಯನ್ನು ಜಿಲ್ಲಾಧಿಕಾರಿಗಳ ಮಟ್ಟದಲ್ಲಿ ತಾಲ್ಲೂಕುವಾರು ಪ್ಯಾಕೇಜ್ ಗಳ ಟೆಂಡರ್ ಕರೆದು ಪಡೆಯಲಾಗುತ್ತಿದೆ. ಈ ವ್ಯವಸ್ಥೆಯನ್ನು ಸರಿಪಡಿಸಿ ಗುಣಮಟ್ಟದ ಆಹಾರ ಪದಾರ್ಥಗಳನ್ನು ಒದಗಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ಗುಣಮಟ್ಟದ ಶಿಕ್ಷಣ ಕಡ್ಡಾಯ

ಮೊರಾರ್ಜಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವಂತೆ ಸೂಚಿಸಿದ್ದು, ಶಿಕ್ಷಕರ ಗುಣಮಟ್ಟವೂ ಮುಖ್ಯ. ಶಿಕ್ಷಕರಿಗೆ ತರಬೇತಿ (ಓರಿಯೆಂಟೇಷನ್) ಕಾರ್ಯಕ್ರಮ ನೀಡಿ ಗುಣಮಟ್ಟದ ಶಿಕ್ಷಣ ನೀಡುವ ಮಟ್ಟಕ್ಕೆ ತರಬೇಕು ಎಂದು ಸೂಚಿಸಿದರು. ಐಸೆಕ್ ಮತ್ತು ಐ ಐ ಎಸ್ ಸಿ ಸಂಸ್ಥೆಗಳ ಮೂಲಜ ಕ್ರೈಸ್ ಶಾಲೆಗಳ ಶಿಕ್ಷಕರ ಮೌಲ್ಯಮಾಪನ ಮಾಡಿಸುವಂತೆ ಸೂಚಿಸಿದರು.

ಶಾಲೆಗೆ ಪ್ರವೇಶ ನೀಡುವ ಸಂದರ್ಭದಲ್ಲಿ ಶೇ 80 ರಷ್ಟು ಅರ್ಹತೆಯಾಧಾರದ ಮೇಲೆ ಹಾಗೂ ಶೇ 20 ರಷ್ಟು ಸ್ಥಳೀಯರಿಗೆ ಮೀಸಲಿಡಬೇಕು. ಈ ನಿಟ್ಟಿನಲ್ಲಿ ಸಾಧಕ ಬಾಧಕಗಳನ್ನು ಪರಿಶೀಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಬಡ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯಬೇಕು ಎನ್ನುವುದು ಪ್ರಥಮ ಆಧ್ಯತೆಯಾಗಿರಲಿ ಎಂದು ಸಿಎಂ ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...