ಮಾರ್ಚ್ 1-8ರವರೆಗೆ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ

Date:

ಈ ಬಾರಿ ಸರ್ವ ಜನಾಂಗದ ಶಾಂತಿಯ ತೋಟ ಎಂಬ ವಿಷಯವನ್ನು ಆಧರಿಸಿ 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವನ್ನು ಮಾರ್ಚ್ 1-8 ರವರೆಗೆ ಆಯೋಜಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಜ.6) ಗೃಹ ಕಚೇರಿ ಕೃಷ್ಣಾದಲ್ಲಿ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಂಘಟನಾ ಸಮಿತಿ ಸಭೆಯ ನಂತರ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, “ಕಳೆದ ವರ್ಷ ಚಲನಚಿತ್ರೋತ್ಸವಕ್ಕೆ ಸಾಮಾಜಿಕ ನ್ಯಾಯ ಎಂಬ ಥೀಮ್‌ ಆಧರಿಸಿ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿತ್ತು” ಎಂದರು.

“ಈ ಬಾರಿಯೂ 60 ಕ್ಕೂ ಹೆಚ್ಚು ದೇಶಗಳ ಚಲನಚಿತ್ರಗಳು ಅಂತಾರಾಷ್ಟ್ರೀಯ ಚಲನಚಿತ್ರೋತ್ಸದಲ್ಲಿ ಪಾಲ್ಗೊಳ್ಳಲಿದ್ದು, 200 ಚಲನಚಿತ್ರಗಳು 13 ಪರದೆಗಳಲ್ಲಿ ಪ್ರದರ್ಶನಗೊಳ್ಳಲಿವೆ. ಒರಾಯ್ ಮಾಲ್ ನಲ್ಲಿ 11 ಪರದೆಗಳು, ಸುಚಿತ್ರಾ ಫಿಲಂ ಸೊಸೈಟಿ ಹಾಗೂ ಡಾ: ಅಂಬರೀಶ್ ಆಡಿಟೋರಿಯಂ, ಚಾಮರಾಜಪೇಟೆ ಇಲ್ಲಿ ತಲಾ ಒಂದು ಪರದೆಯಲ್ಲಿ ಚಿತ್ರ ಪ್ರದರ್ಶನಗೊಳ್ಳಲಿವೆ. ಕನ್ನಡ ಸೇರಿದಂತೆ ಇತರೆ ಭಾಷೆಗಳ 400 ಚಿತ್ರ ಪ್ರದರ್ಶನಗಳು ನಡೆಯಲಿದ್ದು ಬೆಂಗಳೂರು ನಾಗರಿಕರಿಗೆ ಹಾಗೂ ರಾಜ್ಯದ ಎಲ್ಲರಿಗೂ ವಿವಿಧ ದೇಶಗಳ ನಾಗರಿಕತೆಯನ್ನು ಕಾಣಲು ಅವಕಾಶ ಲಭಿಸಲಿದೆ. ಸಿನಿಮಾಸಕ್ತರಿಗೆ ಇದೊಂದು ಸುವರ್ಣಾವಕಾಶ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

9 ಕೋಟಿ ರೂ.ಗಳ ವೆಚ್ಚ

“2006 ರಿಂದ ಪ್ರಾರಂಭವಾದ ಚಲನಚಿತ್ರೋತ್ಸವ ಇದೀಗ 16 ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ. ಕಳೆದ ವರ್ಷ 7 ಕೋಟಿ ರೂ. ವೆಚ್ಚವಾಗಿತ್ತು. ಈ ವರ್ಷ 9 ಕೋಟಿ ರೂ.ಗಳ ವೆಚ್ಚದಲ್ಲಿ ಚಲನಚಿತ್ರೋತ್ಸವ ನಡೆಸಲು ಸಮಿತಿ ತೀರ್ಮಾನಿಸಿದೆ. ಮಾ.1 ರಂದು ಉದ್ಘಾಟನೆ, 8 ರಂದು ಸಮಾರೋಪ ಸಮಾರಂಭ ಜರುಗಲಿದೆ. ಸಮಿತಿಯು ಸಿನಿಮೋತ್ಸವದ ರಾಯಭಾರಿಯನ್ನು ತೀರ್ಮಾನಿಸಲಿದೆ. ಸಮಾರಂಭವನ್ನು ಮುಖ್ಯಮಂತ್ರಿಗಳು ಉದ್ಘಾಟಿಸಲಿದ್ದು, ಸಮಾರೋಪ ಸಮಾರಂಭದಲ್ಲಿ ರಾಜ್ಯಪಾಲರು ಪಾಲ್ಗೊಳ್ಳುವರು. ಬಜೆಟ್ ಪೂರ್ವಭಾವಿ ಚರ್ಚೆಗಳಿರುವುದರಿಂದ ಮಾರ್ಚ್ 1 ರಿಂದ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದೆ” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

“ಕನ್ನಡ ಚಲನಚಿತ್ರಗಳ ಉತ್ತೇಜನ ನೀಡುವಂತಹ ಹಲವು ಯೋಜನೆಗಳನ್ನು ಸರ್ಕಾರ ಜಾರಿಗೊಳಿಸುತ್ತಾ ಬಂದಿದೆ. ಕನ್ನಡ ಚಲನಚಿತ್ರಗಳ ಸಹಾಯಧನಕ್ಕಾಗಿ ಆಯ್ಕೆ ಸಮಿತಿಯನ್ನು ರಚಿಸಲಾಗಿದ್ದು, ಸಮಿತಿ ಚಿತ್ರಗಳನ್ನು ವೀಕ್ಷಿಸುತ್ತಿದೆ. ಮೈಸೂರಿನಲ್ಲಿ ಚಿತ್ರನಗರಿ ನಿರ್ಮಿಸಲು ಸರ್ಕಾರ ಈಗಾಗಲೇ 110 ಎಕರೆ ವಿಸ್ತೀರ್ಣದ ಜಮೀನನ್ನು ಮಂಜೂರು ಮಾಡಿದ್ದು, ಪಿಪಿಪಿ ಮಾದರಿಯಲ್ಲಿ ಚಿತ್ರನಗರಿಯನ್ನು ನಿರ್ಮಾಣದ ಯೋಜನೆ ಅನುಷ್ಠಾನಗೊಳಿಸಲಾಗುವುದು” ಎಂದರು.

ಎಂಎಲ್‌ಸಿ ನಾಮನಿರ್ದೇಶನ

ವಿಧಾನಪರಿಷತ್ ಸದಸ್ಯರ ನಾಮನಿರ್ದೇಶನದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ, “ಈ ಬಗ್ಗೆ ಪಕ್ಷದ ವರಿಷ್ಠರು ನಿರ್ಧಾರವನ್ನು ಕೈಗೊಳ್ಳಲಿದ್ದು, ಸಿನಿಮಾ , ಸಾಹಿತ್ಯ, ಸಾಮಾಜಿಕ ಕ್ಷೇತ್ರಗಳೂ ಸೇರಿದಂತೆ ವಿವಿಧ ಕ್ಷೇತ್ರಗಳಿಂದ ಅಭ್ಯರ್ಥಿಯನ್ನು ಪರಿಗಣಿಸಲಾಗುವುದು” ಎಂದರು.

ಭೋಜನಕೂಟದಲ್ಲಿ ರಾಜಕೀಯ ಚರ್ಚೆಯಾಗಲಿಲ್ಲ

“ಸಚಿವ ಸತೀಶ್ ಜಾರಕಿಹೊಳಿಯವರ ಆಹ್ವಾನದ ಮೇರೆಗೆ ಭೋಜನಕೂಟದಲ್ಲಿ ಭಾಗಹಿಸಲಾಗಿತ್ತು. ರಾಜಕೀಯ ವಿಚಾರಗಳು ಚರ್ಚಿಯಾಗಿಲ್ಲ. ಪಕ್ಷವನ್ನು ಗಟ್ಟಿಗೊಳಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಯಿತು. ಮಾಧ್ಯಮಗಳಲ್ಲಿ ಊಹಾಪೋಹದ ವರದಿಗಳು ಬಂದಿವೆ. ಹೊಸ ವರ್ಷದ ಪ್ರಯುಕ್ತ ಭೋಜನಕೂಟ ಏರ್ಪಡಿಸಲಾಗಿತ್ತು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...