2 ತಿಂಗಳಲ್ಲಿ ಆಗುವ ಕೆಲಸಕ್ಕೆ 2 ವರ್ಷವೇ? ಅಧಿಕಾರಿಗಳ ವಿರುದ್ಧ ಕೃಷ್ಣ ಬೈರೇಗೌಡ ಗರಂ

Date:

ನಾಗವಾರದಿಂದ ಬಾಗಲೂರು ಕ್ರಾಸ್ ವರೆಗಿನ ಮೆಟ್ರೋ ಕಾಮಗಾರಿ ಪ್ರಗತಿಯನ್ನು ಬುಧವಾರ ಬೆಳಿಗ್ಗೆ ವೀಕ್ಷಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕಾಮಾಗಾರಿ ನಡೆಸುತ್ತಿರುವ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

“ಒಂದು ಮೆಟ್ರೋ ಪಿಲ್ಲರ್ ಹಾಕಲು ಎರಡು ವರ್ಷ ತೆಗೆದುಕೊಂಡಿದ್ದೀರಿ? ಎರಡು ತಿಂಗಳಲ್ಲಿ ಆಗುವ ಕೆಲಸಕ್ಕೆ ಎರಡು ವರ್ಷ ಏಕೆ? ಮೆಟ್ರೋ ಕಾಮಗಾರಿ ಶೀಘ್ರ ಮುಗಿಸಲು ಇರುವ ಸಮಸ್ಯೆ ಏನು” ಎಂದು ಪ್ರಶ್ನಿಸಿದರು.

“ಕಾಮಗಾರಿ ತಡವಾಗುತ್ತಿರುವ ಕಾರಣ ಜನರಿಗೆ ಸಮಸ್ಯೆ ಎದುರಾಗಿದೆ. ಮೆಟ್ರೋ ಕಾಮಗಾರಿಯಿಂದ ರಸ್ತೆಯ ಗುಣಮಟ್ಟ ಕ್ಷೀಣಿಸುತ್ತಿದೆ. ಪರಿಣಾಮ ನಿತ್ಯ ಟ್ರಾಫಿಕ್ ಕಿರಿಕಿರಿಯಿಂದ ಜನರು ಬೇಸತ್ತಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೆಟ್ರೋ ಕಾಮಗಾರಿಗೆ ಬಳಸಿದ ಅನಗತ್ಯ ವಸ್ತುಗಳ ವಿಲೇವಾರಿ ಮಾಡದೆ ಅಲ್ಲೇ ಎಸೆಯಲಾಗಿದೆ. ಇದರಿಂದಲೂ ಜನರಿಗೆ ನಿತ್ಯ ಸಮಸ್ಯೆ ತಪ್ಪಿದ್ದಲ್ಲ. ಮಳೆ ಬಂದರೆ ನೀರು ಹರಿಯಲು ವ್ಯವಸ್ಥೆ ಸಹ ಮಾಡಲಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಶೀಘ್ರ ಕಾಮಗಾರಿ ಮುಗಿಸಿ ಅಲ್ಲಿಯ ವರೆಗೂ ರಸ್ತೆ ಸುಗಮ ಸಂಚಾರಕ್ಕೆ ಕನಿಷ್ಠ ವ್ಯವಸ್ಥೆಯನ್ನಾದರೂ ಮಾಡಿ” ಎಂದು ಕೃಷ್ಣ ಬೈರೇಗೌಡ ಅವರು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...