ಪ್ರಜ್ವಲ್ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರ ಅಶ್ಲೀಲ ಚಿತ್ರ, 40ಕ್ಕೂ ಅಧಿಕ ವಿಡಿಯೋಗಳಿತ್ತು: ಸಾಕ್ಷಿ ನುಡಿದ ಕಾರು ಚಾಲಕ

Date:

ಅತ್ಯಾಚಾರ, ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಮೊಬೈಲ್‌ನಲ್ಲಿ ಎರಡು ಸಾವಿರ ಅಶ್ಲೀಲ ಚಿತ್ರಗಳು ಮತ್ತು 40ಕ್ಕೂ ಅಧಿಕ ವಿಡಿಯೋಗಳಿತ್ತು ಎಂದು ಈ ಹಿಂದೆ ಪ್ರಜ್ವಲ್ ಕಾರು ಚಾಲಕನಾಗಿದ್ದ ಕಾರ್ತಿಕ್ ಸಾಕ್ಷಿ ನುಡಿದಿದ್ದಾರೆ.

ಪ್ರಜ್ವಲ್ ಅನ್ನು ಕಳೆದ ವರ್ಷ ಮೇ 31ರಂದು ಬಂಧಿಸಲಾಗಿದ್ದು ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಮೇ 26ರಂದು ನಡೆದ ವಿಚಾರಣೆ ವೇಳೆ ಪ್ರಜ್ವಲ್ ಕಾರು ಚಾಲಕನಾಗಿದ್ದ ಕಾರ್ತಿಕ್ ಸಾಕ್ಷಿ ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಪ್ರಜ್ವಲ್ ಪ್ರಕರಣ | ಅತ್ಯಾಚಾರದ ದೂರು ಕೊಟ್ಟರೂ ಆರೋಪಿಗಳ ರಕ್ಷಣೆಗೆ ಹಾಸನ ಪೊಲೀಸರ ಯತ್ನ ಆರೋಪ: ಡಿಜಿಪಿಗೆ ದೂರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2018ರಿಂದ ಕಾರ್ತಿಕ್ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದು ಕಾರಿನಲ್ಲಿ ಪ್ರಜ್ವಲ್ ಮೊಬೈಲ್ ಬಿಟ್ಟು ಹೋಗಿದ್ದಾಗ ಅದನ್ನು ಪರಿಶೀಲಿಸಿರುವುದಾಗಿ ಕಾರ್ತಿಕ್ ತಿಳಿಸಿದ್ದಾರೆ. ಕಾರಿನಲ್ಲಿ ತನಗೆ ತಿಳಿಯದಂತೆ ಪ್ರಜ್ವಲ್ ಅಶ್ಲೀಲ ದೃಶ್ಯಗಳನ್ನು ನೋಡುತ್ತಿದ್ದರು. ಜಯನಗರದ ಗೆಳತಿ ಮನೆಗೆ ಹೋದಾಗ ಮೊಬೈಲ್ ಕಾರಿನಲ್ಲಿ ಬಿಟ್ಟು ಹೋಗಿದ್ದರು. ಈ ವೇಳೆ ಮೊಬೈಲ್‌ನಲ್ಲಿದ್ದ ಅಶ್ಲೀಲ ಚಿತ್ರ, ವಿಡಿಯೋಗಳನ್ನು ನೋಡಿ ತನ್ನ ಮೊಬೈಲ್‌ಗೆ ವರ್ಗಾಯಿಸಿದ್ದೆ. ಬಳಿಕ ಮಗನಿಗೆ ಬುದ್ಧಿ ಹೇಳಲಿ ಎಂಬ ಉದ್ದೇಶದಿಂದ ಪ್ರಜ್ವಲ್ ತಾಯಿ ಭವಾನಿಗೆ ಈ ಚಿತ್ರ, ವಿಡಿಯೋಗಳನ್ನು ತೋರಿಸಿದ್ದೆ ಎಂದು ಕಾರ್ತಿಕ್ ತಿಳಿಸಿದ್ದಾರೆ ಎನ್ನಲಾಗಿದೆ.

“ಈ ಬಗ್ಗೆ ಭವಾನಿ ಅವರು ಮಗನ ಜೊತೆ ಮಾತನಾಡಿದಾಗ ವಿಡಿಯೋ ಬಗ್ಗೆ ತಿಳಿಸಿದ್ದು ನಾನು ಎಂದು ಹೇಳಿದ್ದರು. ಹಾಗಾಗಿ ಪ್ರಜ್ವಲ್​​ ನನಗೆ ಫೋನ್ ಮಾಡಿ ಬೈದಿದ್ದರು. ಅಂದಿನಿಂದ ನಾನು ಕೆಲಸ ಬಿಟ್ಟೆ. ಬಳಿಕ ಪ್ರಜ್ವಲ್​ ಕುಟುಂಬ ವಿಡಿಯೋ ಬಹಿರಂಗವಾಗದಂತೆ ಕೋರ್ಟ್‌ನಿಂದ ತಡೆಯಾಜ್ಞೆ ತಂದರು” ಎಂದು ಕಾರ್ತಿಕ್ ಸಾಕ್ಷಿ ಹೇಳಿದ್ದಾರೆ.

ನೂರಾರು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಪ್ರಜ್ವಲ್ ರೇವಣ್ಣ ಮೇಲಿದೆ. ಈ ವಿಡಿಯೋಗಳು ವೈರಲ್ ಆದಾಗ ಕರ್ನಾಟಕ ಮಾತ್ರವಲ್ಲ ದೇಶದಲ್ಲೇ ಭಾರೀ ಸಂಚಲನ ಉಂಟಾಗಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...