21 ಐಎಎಸ್‌ ಅಧಿಕಾರಿಗಳ ವರ್ಗಾವಣೆ

Date:

ಮೈಸೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾಗಿರುವ ಹಗರಣವನ್ನು ಬಯಲಿಗೆಳೆದಿದ್ದ ಮೈಸೂರು ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಸೇರಿದಂತೆ 21 ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಅಧಿಕಾರಿಗಳನ್ನು ವಿವಿಧ ಇಲಾಖೆಗಳಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಸದ್ಯ, ರಾಜ್ಯ ಸರ್ಕಾರಕ್ಕೆ ಮುಡಾ ಹಗರಣ ತಲೆನೋವಾಗಿದೆ. ವರ್ಷದ ಹಿಂದೆಯೇ ಹಗರಣದ ಬಗ್ಗೆ ಜಿಲ್ಲಾಧಿಕಾರಿ ಕೆ.ವಿ ರಾಜೇಂದ್ರ ಅವರು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದರು. ಆದರೆ, ಇದೀಗ ಹಗರಣ ಭಾರೀ ಸದ್ದು ಮಾಡುತ್ತಿದೆ. ಈ ನಡುವೆ, ಹಗರಣವನ್ನು ಸರ್ಕಾರದ ಗಮನಕ್ಕೆ ತಂದಿದದ್ದ ಕೆ.ವಿ ರಾಜೇಂದ್ರ ಅವರನ್ನು ಪ್ರವಾಸೋದ್ಯಮ ಇಲಾಖೆಗೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಮೈಸೂರು ಪಾಲಿಕೆ ಆಯುಕ್ತರಾಗಿದ್ದ ಲಕ್ಷ್ಮೀಕಾಂತ್ ರೆಡ್ಡಿ ಅವರನ್ನು ಮೈಸೂರು ಜಿಲ್ಲಾಧಿಕಾರಿಯಾಗಿ ವರ್ಗಾಯಿಸಲಾಗಿದೆ.

ವಿವಿಧ ಹುದ್ದೆಗಳಿಗೆ ವರ್ಗಾವಣೆಗೊಂಡ ಅಧಿಕಾರಿಗಳ ಪಟ್ಟಿ;

  1. ಕೆ.ವಿ ರಾಜೇಂದ್ರ: ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ
  2. ಲಕ್ಷ್ಮೀಕಾಂತ್ ರೆಡ್ಡಿ: ಜಿಲ್ಲಾಧಿಕಾರಿ, ಮೈಸೂರು
  3. ಡಾ. ರಾಮ್‌ ಪ್ರಸಾದ್ ಮನೋಹರ್‌ ವಿ: ಹೆಚ್ಚುವರಿ ಕಾರ್ಯದರ್ಶಿ, ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಹಾಗೂ ಅಧ್ಯಕ್ಷರು, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ
  4. ನಿತೇಶ್ ಪಾಟೀಲ್: ನಿರ್ದೇಶಕರು, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಇಲಾಖೆ
  5. ಡಾ. ಅರುಂಧತಿ ಚಂದ್ರಶೇಖರ್: ಆಯುಕ್ತರು, ಪಂಚಾಯತ್ ರಾಜ್ ಇಲಾಖೆ
  6. ಜ್ಯೋತಿ ಕೆ: ಆಯುಕ್ತರು, ಜವಳಿ ಅಭಿವೃದ್ಧಿ ಹಾಗೂ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ
  7. ಶ್ರೀಧರ ಸಿಎನ್: ನಿರ್ದೇಶಕರು, ಸಾಮಾಜಿಕ ಲೆಕ್ಕ ಪರಿಶೋಧನೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ
  8. ಚಂದ್ರಶೇಖರ ನಾಯಕ ಎಲ್: ಹೆಚ್ಚುವರಿ ಆಯುಕ್ತರು, ವಾಣಿಜ್ಯ ತೆರಿಗೆ ಇಲಾಖೆ
  9. ವಿಜಯಮಹಾಂತೇಶ ಬಿ ದಾನಮ್ಮನವರ್: ಜಿಲ್ಲಾಧಿಕಾರಿ, ಹಾವೇರಿ
  10. ಗೋವಿಂದ ರೆಡ್ಡಿ: ಜಿಲ್ಲಾಧಿಕಾರಿ, ಗದಗ
  11. ರಘುನಂದನ್ ಮೂರ್ತಿ: ಆಯುಕ್ತರು, ಖಜಾನೆಗಳು ಮತ್ತು ಲೆಕ್ಕಪತ್ರ ಇಲಾಖೆ
  12. ಡಾ. ಗಂಗಾಧರಸ್ವಾಮಿ ಜಿ ಎಂ: ಜಿಲ್ಲಾಧಿಕಾರಿ, ದಾವಣಗೆರೆ
  13. ನಿತೀಶ್ ಕೆ: ಜಿಲ್ಲಾಧಿಕಾರಿ, ರಾಯಚೂರು
  14. ಮೊಹಮ್ಮದ್ ರೋಶನ್: ಜಿಲ್ಲಾಧಿಕಾರಿ, ಬೆಳಗಾವಿ
  15. ಶಿಲ್ಪಾ ಶರ್ಮಾ: ಜಿಲ್ಲಾಧಿಕಾರಿ, ಬೀದರ್
  16. ಡಾ ದಿಲೀಶ್ ಸಸಿ: ಕೇಂದ್ರ ಸಿಇಒ, ಇ-ಆಡಳಿತ
  17. ಲೋಖಂಡೆ ಸ್ನೇಹಲ್ ಸುಧಾಕರ್: ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ವಿದ್ಯುತ್ ಕಾರ್ಖಾನೆ ಲಿಮಿಟೆಡ್
  18. ಶ್ರೀರೂಪ: ಆಯುಕ್ತರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ
  19. ಗಿಟ್ಟೆ ಮಾಧವ್ ವಿಠ್ಠಲ್ ರಾವ್: ಪ್ರಧಾನ ವ್ಯವಸ್ಥಾಪಕರು, ಪುನರ್ವಸತಿ ಕೇಂದ್ರ ಬಾಗಲಕೋಟೆ
  20. ಹೇಮಂತ್ ಎನ್: ಸಿಇಒ, ಜಿಲ್ಲಾ ಪಂಚಾಯತ್, ಶಿವಮೊಗ್ಗ
  21. ಮೊಹಮ್ಮದ್ ಅಲಿ ಅಕ್ರಮ್ ಶಾ: ಮುಖ್ಯ ಕಾರ್ಯನಿರ್ವಾಹಕ, ಜಿಲ್ಲಾ ಪಂಚಾಯತ್, ವಿಜಯನಗರ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...