ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ ₹2,249 ಕೋಟಿ ಪರಿಹಾರ ಜಮೆ: ಕೃಷ್ಣ ಬೈರೇಗೌಡ

Date:

ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ 14.21 ಲಕ್ಷ ರೈತರಿಗೆ 2,249 ಕೋಟಿ ರೂ. ಪರಿಹಾರ ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಶುಕ್ರವಾರದ ವಿಧಾನ ಪರಿಷತ್‌ ಶೂನ್ಯವೇಳೆ ಚರ್ಚೆಯ ಸಂದರ್ಭದಲ್ಲಿ ಕಲಬುರಗಿ ಭಾಗದ ಸದಸ್ಯ ತಿಮ್ಮಪ್ಪಣ್ಣ ಕಮಕನೂರ ಅವರ ಪ್ರಶ್ನೆಗೆ ಉತ್ತರಿಸಿ ಸಚಿವರು, “ಕಲಬುರಗಿ ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಹಂಗಾರು ಹಂಗಾಮಿನಲ್ಲಿ 3,23,219 ಎಕರೆ ಪ್ರದೇಶದಲ್ಲಿ ಬೆಳೆಹಾನಿ ಉಂಟಾಗಿದೆ. ಎಸ್‌ಡಿಆರ್‌ಎಫ್ ನಿಯಮದ ಪ್ರಕಾರ ಬೆಳೆಹಾನಿಗೆ 257.90 ಕೋಟಿ ರೂ. ಪರಿಹಾರ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 245.75 ಕೋಟಿ ರೂ. ಪರಿಹಾರ ಹಣ ಸೇರಿ ಒಟ್ಟಾರೆ 498.73 ಕೋಟಿ ರೂ. ಹಣವನ್ನು ನೇರವಾಗಿ ರೈತರ ಖಾತೆಗೆ ಜಮೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ರಾಜ್ಯ ಅಂಕಿಅಂಶವನ್ನೂ ನೀಡಿದ ಅವರು, “ರಾಜ್ಯಾದ್ಯಂತ ಪ್ರಸ್ತುತ ಮುಂಗಾರು ಹಂಗಾಮಿನಲ್ಲಿ 14.21 ಲಕ್ಷ ರೈತರಿಗೆ ಎಸ್‌ಡಿಆರ್‌ಎಫ್ ನಿಯಮದ ಪ್ರಕಾರ 1,218 ಕೋಟಿ ರೂ. ಹಣ ಪರಿಹಾರ ರೂಪದಲ್ಲಿ ನೀಡಲಾಗಿದೆ. ಇದಲ್ಲದೆ, ರಾಜ್ಯ ಸರ್ಕಾರ ಹೆಚ್ಚುವರಿಯಾಗಿ 1,033 ಕೋಟಿ ರೂ. ಸೇರಿ ಒಟ್ಟಾರೆಯಾಗಿ 2249 ಕೋಟಿ ರೂ. ಹಣವನ್ನು ಪರಿಹಾರದ ರೂಪದಲ್ಲಿ 14.21 ಲಕ್ಷ ರೈತರಿಗೆ ನೇರವಾಗಿ ಖಾತೆಗೆ ಜಮೆ ಮಾಡಲಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜಾನುವಾರಗಳ ಹಾನಿಗೆ 1.89 ಕೋಟಿ ರೂ., ಮನೆಹಾನಿಗೆ 40.86 ಕೋಟಿ ರೂ., ಅಲ್ಪ ಪ್ರಮಾಣದ ಮನೆಹಾನಿಗಳಿಗೆ 5.79 ಕೋಟಿ ರೂ., ಕಾಳಜಿ ಕೇಂದ್ರಗಳಿಗೆ 1.20 ಕೋಟಿ ರೂ. ಹಾಗೂ ಮಳೆಯಿಂದ ಉಂಟಾದ ಎಲ್ಲ ಪ್ರಾಣಹಾನಿಗಳನ್ನೂ ಸೇರಿಸಿದರೆ ಒಟ್ಟಾರೆಯಾಗಿ 2,300 ಕೋಟಿ ರೂ. ಹಣವನ್ನು ಪರಿಹಾರವಾಗಿ ನೀಡಲಾಗಿದೆ” ಎಂದು ಹೇಳಿದರು.

“ರಾಜ್ಯಾದ್ಯಂತ ಕೇವಲ ಶೇ.03 ರಷ್ಟು ರೈತರಿಗೆ ಪರಿಹಾರ ಹಣ ಪಾವತಿಯಾಗಿಲ್ಲ ಎಂಬುದು ನಿಜ. ಕೆಲವು ರೈತರ ಆಧಾರ್ ಹೆಸರು ಮತ್ತು ಕೃಷಿ ಇಲಾಖೆಯ ಫ್ರೂಟ್ಸ್ ತಂತ್ರಾಂಶದಲ್ಲಿನ ಹೆಸರು ತಾಳೆಯಾಗುತ್ತಿಲ್ಲ. ಮತ್ತೂ ಕೆಲವರದ್ದು ಆಧಾರ್ ಸಂಖ್ಯೆಗೆ ಬ್ಯಾಂಕ್ ಖಾತೆ ಲಿಂಕ್ ಮಾಡಿಲ್ಲ. ಹೀಗಾಗಿ 26,394 ರೈತರಿಗೆ ಪರಿಹಾರದ ಹಣ ಪಾವತಿ ಆಗಿಲ್ಲ. ಇದಲ್ಲದೆ, ಸರ್ಕಾರದವರು ಎನ್ಪಿಸಿಐ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ 8,000 ರೈತರಿಗೆ ಹಣ ಪಾವತಿಯಾಗಿಲ್ಲ. ಈ ಎಲ್ಲಾ ಕಾರಣದಿಂದ ಒಟ್ಟಾರೆ 14,21,000 ರೈತರ ಪೈಕಿ 44,208 ರೈತರದ್ದು ಬಾಕಿ ಇದೆ. ಸರ್ಕಾರ ಈಗಾಗಲೇ ಹಣ ಪಾವತಿ ಮಾಡಿಯಾಗಿದ್ದು, ರೈತರ ಈ ಸಣ್ಣಪುಟ್ಟ ಸಮಸ್ಯೆಗಳು ಬಗೆಹರಿದ ಕೂಡಲೇ ರೈತರ ಖಾತೆಗೆ ಹಣ ಜಮೆ ಆಗಲಿದೆ” ಎಂದು ವಿವರಿಸಿದರು.

ಕೃಷಿ ವಿಮೆ ಬಗ್ಗೆಯೂ ಪ್ರತಿಕ್ರಿಯಿಸಿದ ಸಚಿವರು, “ವಿಮೆ ಕೂಡ ಈ ವರ್ಷ ನಾವು ತ್ವರಿತ ಪಾವತಿ ಮಾಡುವ ಕೆಲಸ ಮಾಡಿದ್ದೇವೆ. ಕೃಷಿ ಇಲಾಖೆ ಜೊತೆ ಮಾತನಾಡಿ ಎಷ್ಟು ಶೀಘ್ರ ಸಾಧ್ಯವೋ ಅಷ್ಟು ಶೀಘ್ರ ರೈತರ ಖಾತೆಗೆ ಬೆಳೆ ವಿಮೆ ಪಾವತಿ ಮಾಡಲಾಗುವುದು” ಎಂದು ಭರವಸೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...