263 ಕೋಟಿ ರೂ. ಅನುದಾನದಲ್ಲಿ 6,599 ಹೊಸ ಗ್ರಾಮ ಗ್ರಂಥಾಲಯ ಪ್ರಾರಂಭ: ಪ್ರಿಯಾಂಕ್ ಖರ್ಗೆ

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಈಗಾಗಲೇ 5,895 ಗ್ರಂಥಾಲಯಗಳನ್ನು ಸಜ್ಜುಗೊಳಿಸಿದ್ದು, ಇದರೊಂದಿಗೆ ಈ ವರ್ಷ 263.96 ಕೋಟಿ ರೂ. ಅನುದಾನದಲ್ಲಿ ರಾಜ್ಯದಲ್ಲಿ 6,599 ಹೊಸ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ‌ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, “ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ರವರ ಜನ್ಮದಿನದಂದು ರಾಷ್ಟ್ರಮಟ್ಟದಲ್ಲಿ ಗ್ರಂಥಪಾಲಕರ ದಿನ ಆಚರಿಸಲಾಗುತ್ತಿದೆ. ಗ್ರಂಥಪಾಲಕರ ದಿನಾಚರಣೆಯಲ್ಲಿ ಹೊಸ ಗ್ರಾಮ ಗ್ರಂಥಾಲಯಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ” ಎಂದು ತಿಳಿಸಿದ್ದಾರೆ.

“ಅರಿವು ಕೇಂದ್ರಗಳ ಮಾದರಿ ಕಟ್ಟಡ ವಿನ್ಯಾಸವನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದ್ದಾರೆ. ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ ಸಂಸ್ಥೆಯಿಂದ ರಾಜ್ಯದಲ್ಲಿ ಹೊಸದಾಗಿ ಆರಂಭಿಸಲಾಗುತ್ತಿರುವ 6,599 ಗ್ರಾಮೀಣ ಗ್ರಂಥಾಲಯಗಳಿಗೆ ತಲಾ 2 ಲಕ್ಷ ರೂ. ಮೌಲ್ಯದ ಪುಸ್ತಕಗಳನ್ನು ಖರೀದಿಸಲಾಗಿದೆ. ಇದಕ್ಕಾಗಿ 131.98 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರತಿ ಗ್ರಂಥಾಲಯಕ್ಕೆ ಪೀಠೋಪಕರಣಗಳು ಹಾಗೂ ಡಿಜಿಟಲ್ ಪರಿಕರಗಳನ್ನು ನಿಯಮಾನುಸಾರ ಖರೀದಿಸಿ ಪೂರೈಸಲಾಗುವುದು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“6,599 ಹೊಸ ಗ್ರಾಮ ಗ್ರಂಥಾಲಯಗಳಿಗೆ ಮಕ್ಕಳ ಪುಸ್ತಕಗಳನ್ನು ಅಜೀಂ ಪ್ರೇಮ್ ಜಿ ಫೌಂಡೇಶನ್ ಕೊಡುಗೆಯಾಗಿ ನೀಡುತ್ತಿದೆ. ಗ್ರಾಮೀಣ ಗ್ರಂಥಾಲಯಗಳನ್ನು 2019 ರಲ್ಲಿ ಶಿಕ್ಷಣ ಇಲಾಖೆಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಹಸ್ತಾಂತರಿಸಲಾಗಿರುತ್ತದೆ. ಪ್ರಸ್ತುತ, ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳನ್ನು ಅರಿವು ಕೇಂದ್ರ’ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...