ಜಿಬಿಎ ವ್ಯಾಪ್ತಿಯಲ್ಲಿ ನಿತ್ಯ 350 – 400 ಮೆ.ಟನ್ ಆರ್.ಡಿ.ಎಫ್ ಸಂಗ್ರಹ

Date:

ಮೂಲದಲ್ಲಿಯೇ ತ್ಯಾಜ್ಯದ ವಿಂಗಡಣೆಯ ಪ್ರಮಾಣವು ವೃದ್ಧಿಯಾಗಿದ್ದು, ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್-Refused Derived Fuel) ಸಂಗ್ರಹಣೆಯ ಪ್ರಮಾಣದಲ್ಲಿಯೂ ಸಹ ವೃದ್ಧಿಯಾಗಿರುತ್ತದೆ. ಇದು ಘನತ್ಯಾಜ್ಯ ನಿರ್ವಹಣೆಯಲ್ಲಿ ಸಾಧಿಸಿದ ದಿಟ್ಟ ಕ್ರಮವಾಗಿದೆ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತ ಸಿಇಒ ಕರೀಗೌಡ ತಿಳಿಸಿದ್ದಾರೆ.

ಜಿಬಿಎ ವ್ಯಾಪ್ತಿಯಲ್ಲಿ ಪ್ರತಿದಿನ 350 – 400 ಮೆ.ಟನ್ ಆರ್.ಡಿ.ಎಫ್ ಸಂಗ್ರಹವಾಗುತ್ತಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಘನತ್ಯಾಜ್ಯವನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ನಿಟ್ಟಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಂಸ್ಥೆಯಾದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತದಿಂದ ಸಾರ್ವಜನಿಕ ಜಾಗೃತಿಗಾಗಿ ಕೈಗೊಂಡ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳಿಂದ ಇದು ಸಾಧ್ಯವಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

“ಅಂದಾಜು 100-150 ಮೆ.ಟನ್ ತ್ಯಾಜ್ಯವನ್ನು ಬಿಡದಿ ಬಳಿಯ ತ್ಯಾಜ್ಯದಿಂದ ಇಂಧನ ಉತ್ಪಾದನೆ ಸ್ಥಾವರಕ್ಕೆ ಕಳುಹಿಸಲಾಗುತ್ತಿದೆ. 200-250 ಮೆ.ಟನ್ ತ್ಯಾಜ್ಯವನ್ನು ನೆರೆಯ ಕಡಪ ಜಿಲ್ಲೆಯ ದಾಲ್ಮಿಯಾ ಸಿಮೆಂಟ್ ಲಿಮಿಟೆಡ್ ಘಟಕಕ್ಕೆ ಸಾಗಿಸಲು ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು, ಇಂದು (ದಿ.15.12.2025) ಮೊದಲನೇ ದಿನ ಒಟ್ಟು 160 ಮೆ.ಟನ್ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್ (ಆರ್.ಡಿ.ಎಫ್ – Refused Derived Fuel)ನ್ನು ಸಾಗಿಸಲಾಗುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದಾಲ್ಮಿಯಾ ಸಿಮೆಂಟ್ ಲಿಮಿಟೆಡ್ ಸಂಸ್ಥೆಯು ಪ್ರತಿದಿನ 1,000 ಮೆ.ಟನ್ ವರೆಗೂ ಕಡಿಮೆ ಮೌಲ್ಯಯುತ ಪ್ಲಾಸ್ಟಿಕ್(ಆರ್.ಡಿ.ಎಫ್-Refused Derived Fuel) ತ್ಯಾಜ್ಯವನ್ನು ಸ್ವೀಕರಿಸುವುದಾಗಿ ಬೆಂ.ಘ.ನಿ.ನಿದೊಂದಿಗೆ ಒಡಂಬಡಿಕೆ ಮಾಡಿಕೊಂಡಿರುತ್ತದೆ.| ದಾಲ್ಮಿಯಾ ಸಿಮೆಂಟ್ ಲಿಮಿಟೆಡ್ ಸಂಸ್ಥೆಯು ಸದರಿ ಪ್ರಕ್ರಿಯೆಯಲ್ಲಿನ ಇ.ಪಿ.ಆರ್(Extended Producer Responsibility) ಕ್ರೆಡಿಟ್ಸ್ ಗಳನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ನೀಡುತ್ತದೆ. ಇದರಿಂದ ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ನಿಯಮಿತಕ್ಕೆ ಆರ್ಥಿಕವಾಗಿ ಲಾಭವಾಗಲಿದೆ” ಎಂದು ಕರೀಗೌಡ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...