ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಆರು ದಿನ ವೇತನ ಸಹಿತ ಮುಟ್ಟಿನ ರಜೆಗೆ ಶಿಫಾರಸು

Date:

ಕ್ರೈಸ್ಟ್ ವಿಶ್ವವಿದ್ಯಾಲಯದ ಕಾನೂನು ವಿಭಾಗದ ಮುಖ್ಯಸ್ಥೆ ಸಪ್ಪಾ ಎಸ್ ಅವರ ಅಧ್ಯಕ್ಷತೆಯ 18 ಸದಸ್ಯರ ಸಮಿತಿಯು ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುವ ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ ಆರು ದಿನ ವೇತನ ಸಹಿತ ಮುಟ್ಟಿನ ರಜೆ (ಪಿಎಂಎಲ್) ನೀಡಲು ಶಿಫಾರಸು ಮಾಡಿದೆ.

ಶನಿವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್, “ಸದ್ಯ ಸಮಿತಿಯು ವರ್ಷಕ್ಕೆ ಆರು ದಿನಗಳ ಕಾಲ ವೇತನ ಸಹಿತ ರಜೆ ನೀಡಲು ಮತ್ತು ಆರು ದಿನಗಳ ಕಾಲ ವೇತನ ರಹಿತ ರಜೆ ನೀಡಲು ಶಿಫಾರಸು ಮಾಡಿದೆ. ತಿಂಗಳಿಗೆ ಒಂದು ಅಥವಾ ವರ್ಷಿಕ್ಕೆ ಆರು ರಜೆ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಈ ಬಗ್ಗೆ ಸಾರ್ವಜನಿಕರ ಅಭಿಪ್ರಾಯವನ್ನು ಕೂಡಾ ಸಂಗ್ರಹಿಸಲಾಗುವುದು” ಎಂದು ತಿಳಿಸಿದರು.

“ವಿವಿಧ ಸಂಘಟನೆಗಳ ಅಭಿಪ್ರಾಯ ಸಂಗ್ರಹಿಸಲಾಗುವುದು. ಜೊತೆಗೆ ಎಲ್ಲ ಇಲಾಖೆಗಳು ಹಾಗೂ ಖಾಸಗಿ ಕಂಪನಿ, ಕೈಗಾರಿಕೆಗಳ ಜೊತೆಗೂ ಮಾತುಕತೆ ನಡೆಸಲಾಗುವುದು. ಎಲ್ಲರ ಅಭಿಪ್ರಾಯ ಪಡೆದು ಸಿದ್ಧತೆ ಪೂರ್ಣವಾದ ಬಳಿಕ ಆರ್ಥಿಕ ಇಲಾಖೆಯ ಸಮ್ಮತಿಯನ್ನು ಕಳುಹಿಸಲಾಗುತ್ತದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ತನ್ನ ಮಹಿಳಾ ಉದ್ಯೋಗಿಗಳಿಗೆ ‘ಮುಟ್ಟಿನ ರಜೆ’ ಘೋಷಿಸಿದ ಸಿಕ್ಕಿಂ ಹೈಕೋರ್ಟ್

“ಈಗಾಗಲೇ ಬಿಹಾರ, ಕೇರಳ ಮತ್ತು ಒಡಿಶಾದಲ್ಲಿ ಮುಟ್ಟಿನ ರಜೆ ನೀತಿಯಿದೆ. ಆ ರಾಜ್ಯಗಳ ನೀತಿಗಳನ್ನೂ ಸೇರಿದಂತೆ ನಾವು ಮಹಿಳಾ ಸ್ನೇಹಿ ನಿಯಮ ರೂಪಿಸಲು ಅಗತ್ಯವಾದ ಮಾಹಿತಿಗಳನ್ನು ಸಂಗ್ರಹಿಸುತ್ತೇವೆ” ಎಂದರು.

“ಸಮಿತಿಯ ವರದಿಯಲ್ಲಿ ಉದ್ಯೋಗಸ್ಥ ಮಹಿಳೆಯರು ಮುಟ್ಟಿನ ಸಮಯದಲ್ಲಿ ಎದುರಿಸುವ ಸವಾಲುಗಳು, ಸಂಕಷ್ಟಗಳು, ಅದಕ್ಕಾಗಿ ಕೆಲಸ ಮಾಡುವ ಸ್ಥಳಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳು, ಪಾಲಿಸಬೇಕಾದ ನಿಯಮ, ಮುಟ್ಟಾದ ಮಹಿಳೆಯರಿಗೆ ಅಗತ್ಯವಿರುವ ವಿಶ್ರಾಂತಿಯ ಬಗ್ಗೆ ಪ್ರಸ್ತಾಪಿಸಲಾಗಿದೆ” ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...